Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೂಡಂಗಡಿಗಳ ತೆರವು ಕಾರ್ಯ ನಿಲ್ಲಿಸುವುದಿಲ್ಲ :ಬಿರಾದಾರ
(ರಾಜ್ಯ ) ಜಿಲ್ಲೆ

ಗೂಡಂಗಡಿಗಳ ತೆರವು ಕಾರ್ಯ ನಿಲ್ಲಿಸುವುದಿಲ್ಲ :ಬಿರಾದಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯ ಯಾವುದೇ ಕಾಲಕ್ಕೂ ನಿಲ್ಲಿಸುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.
      ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರವನ್ನು ಸುಂದರಗೊಳಿಸಲು ಪಣತೊಟ್ಟಿರುವೆ. ಇದರಲ್ಲಿ ಯಾವುದೇ ಗೂಡಂಗಡಿಗಳನ್ನು ತೆರವುಗೊಳಿಸಲು ಯಾರಿಗೂ ಒತ್ತಾಯ ಮಾಡಿಲ್ಲ. ಎಲ್ಲರೂ ಸ್ವಯಂ ಪ್ರೇರಣೆಯಿಂದ ತೆರವುಗೊಳಿಸುತ್ತಿದ್ದಾರೆ. ಆದರೆ ಮಾಜಿ ಶಾಸಕ ರಮೇಶ ಭೂಸನೂರ ಮತ್ತು ಸಂತೋಷ ಪಾಟೀಲ್ ಅವರು ತಿಳುವಳಿಕೆ ಉಳ್ಳವರು, ಅವರ ಈ ರೀತಿಯ ವರ್ತನೆ ಸರಿಯಲ್ಲ. ಜಿಲ್ಲಾಧಿಕಾರಿಗಳು ತೆರವುಗೊಳಿಸಲು ಅನುಮತಿ ನೀಡಿಲ್ಲ ಎಂದು ಹೇಳುವ ಅವರು ಡಿಸಿ ಅವರು ತೆರವುಗೊಳಿಸಬಾರದೆಂದು ಹೇಳಿದ್ದು ಪುರಾವೆ ಏನಾದರೂ ಇದ್ದರೆ ತೋರಿಸಬೇಕು. ನಾನು ಜಿಲ್ಲಾಧಿಕಾರಿಗಳ ಬಳಿ ಪರವಾನಿಗೆ ಕೇಳಲು ಹೋದಾಗ ಸ್ಥಳೀಯವಾಗಿ ಅಭಿವೃದ್ಧಿಪರ ಚಟುವಟಿಕೆಗಳಿಗೆ ನಮ್ಮ ಅನುಮತಿ ಬೇಕಾಗಿಲ್ಲ, ಸ್ಥಳೀಯವಾಗಿ ಇಲ್ಲಿಯ ವ್ಯವಸ್ಥೆಯನ್ನು ಸುಧಾರಣೆ ಮಾಡಲು ನೀವು ಸ್ವನಿರ್ಧಾರ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ ಎಂದರು.
೨೦ವರ್ಷದಿಂದ ಬಸ್ ನಿಲ್ದಾಣದ ಎದುರಿರುವ ಚರಂಡಿ ತುಂಬಿಹೋಗಿತ್ತು. ಅದನ್ನು ಮೂರು ದಿನಗಳಲ್ಲೇ ಸ್ವಚ್ಛಗೊಳಿಸಿದ್ದೇನೆ. ಬಿಜೆಪಿಯವರು ೧೩ವರ್ಷಗಳಿಂದ ತೆರವುಗೊಳಿಸದೇ ಇದ್ದ ಗೂಡಂಗಡಿಗಳನ್ನು ಈಗೇಕೆ ತೆರವುಗೊಳಿಸುತ್ತಿದ್ದೀರಿ ಎಂದು ಪ್ರಶ್ನಿಸುತ್ತಾರೆ. ಇದರ ಅರ್ಥ ೧೩ವರ್ಷದಿಂದ ಅಭಿವೃದ್ಧಿ ಆಗದೇ ಇದ್ದರೆ ಈಗ ಅಭಿವೃದ್ಧಿ ಮಾಡಬಾರದು ಎಂದು ಅರ್ಥವೇ ಎಂದು ಪ್ರಶ್ನಿಸಿದ ಅವರು, ಇದರಲ್ಲಿ ನನ್ನ ಸ್ವಹಿತಾಸಕ್ತಿ ಇಲ್ಲ. ಬಡವರನ್ನು ನೋಯಿಸಬೇಕು ಎಂಬ ಇರಾದೆಯೂ ಇಲ್ಲ. ಪಟ್ಟಣವನ್ನು ಅಭಿವೃದ್ಧಿ ಹಾಗೂ ಸೌಂದರ್ಯೀಕರಣ ಮಾಡಬೇಕೆನ್ನುವ ಏಕೈಕ ಉದ್ದೇಶ ನನ್ನದು ಎಂದರು. 
  ಗೂಡಂಗಡಿಗಳೆಂದರೆ ತಳ್ಳುವ ಗಾಡಿಯ ಮೇಲೆ ವಸ್ತುಗಳನ್ನು ತೆಗೆದುಕೊಂಡು ಬಂದು ದಿನವೀಡಿ ವ್ಯಾಪಾರ ಮಾಡಿಕೊಂಡು ಸಾಯಂಕಾಲ ಗಾಡಿಗಳನ್ನು ಮನೆಗೆ ಒಯ್ಯುಯುವುದು. ಅದನ್ನು ಬಿಟ್ಟು ಅಲ್ಲಿ ಸುಸಜ್ಜಿತ ಶೇಡ್ಡುಗಳನ್ನು ನಿಲ್ಲಿಸಿ ಬೇರೆಯವರಿಗೆ ಬಾಡಿಗೆ ಕೊಡುವುದು ಅದು ಗೂಡಂಗಡಿ ಎನಿಸಿಕೊಳ್ಳುವುದಿಲ್ಲ. ನೂರಾರು ಜನರು ಈ ಕಾರ್ಯಕ್ಕೆ ಬೆಂಬಲಿಸುತ್ತಿರುವಾಗ ನಾಲ್ಕರು ಜನರಿಗಾಗಿ ಕಾರ್ಯ ಸ್ಥಗಿತಗೊಳಿಸುವ ಮಾತೆ ಇಲ್ಲ. ಶಾಸಕರು ಅಭಿವೃದ್ಧಿಗೆ ಸಹಕರಿಸುತ್ತಿದ್ದಾರೆ. ಇನ್ನಷ್ಟು ಹೆಚ್ಚಿನ ಅನುದಾನ ಪುರಸಭೆಗೆ ಒದಗಿಸಿಕೊಟ್ಟರೆ ಪಟ್ಟಣದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ ಎಂದು ಶಾಂತು ಬಿರಾದಾರ ಹೇಳಿದರು.
     ಈ ವೇಳೆ ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ ಸಿಬ್ಬಂದಿ ಸಿದ್ದು ಅಂಗಡಿ, ಜೆಇ ಅಜರ್ ನಾಟಿಕಾರ್ ಇದ್ದರು. 

ಬಜಾರ್ ಲೈನಗೆ ಅನ್ವಯಿಸದ ತೆರವು ಕಾರ್ಯ ಇಲ್ಲಿ ಏಕೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಎಲ್ಲ ಅಂಗಡಿ ಮಾಲೀಕರಿಗೆ ದಾಖಲಾತಿಗಳನ್ನು ಒದಗಿಸಲು ನೋಟಿಸ್ ಕಳುಹಿಸಿದ್ದೇನೆ. ಎಷ್ಟೇ ಪ್ರಭಾವಿಗಳಿದ್ದರೂ ರಸ್ತೆಯ ಮೇಲೆ ಅತಿಕ್ರಮಣ ಮಾಡಿದ್ದರೆ ತೆರವುಗೊಳಿಸುವ ಕಾರ್ಯ ಶೀಘ್ರ ಆರಂಭಿಸಲಾಗುವುದು ಎಂದು ಹೇಳಿದರು.

“ಅಂಬೇಡ್ಕರ್ ವೃತ್ತದ ಬಳಿಯಿರುವ ಅಂಗಡಿಗಳನ್ನು ತೆರವುಗೊಳಿಸಿದಾಗ ಪ್ರತಿಭಟನೆ ಮಾಡದೇ ಇದ್ದವರು ಬಸವೇಶ್ವರ ವೃತ್ತದಲ್ಲಿರುವ ಗೂಡಂಗಡಿಗಳನ್ನು ತೆರವುಗೊಳಿಸಲು ಮುಂದಾದಾಗ ಹೋರಾಟವೇಕೆ? ಅಲ್ಲಿ ಬಿಜೆಪಿ ಕಾರ್ಯಕರ್ತರ ಗೂಡಂಗಡಿಗಳು ಇರುವುದರಿಂದ ಮಾಜಿ ಶಾಸಕರು ಹಾಗೂ ಅವರ ಅನುಯಾಯಿಗಳು ತೆರವುಗೊಳಿಸಬಾರದು ಎಂದು ಪ್ರತಿಭಟನೆ ಮಾಡುವುದು ಸರಿಯಲ್ಲ.”

– ಶಾಂತವೀರ ಬಿರಾದಾರ
ಅಧ್ಯಕ್ಷರು, ಪುರಸಭೆ ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.