Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅತೃಪ್ತ ವಾತಾವರಣ ಹೋಗಲಾಡಿಸುವಲ್ಲಿ ಭಗವದ್ಗೀತೆ ಪ್ರಮುಖ ಪಾತ್ರ
(ರಾಜ್ಯ ) ಜಿಲ್ಲೆ

ಅತೃಪ್ತ ವಾತಾವರಣ ಹೋಗಲಾಡಿಸುವಲ್ಲಿ ಭಗವದ್ಗೀತೆ ಪ್ರಮುಖ ಪಾತ್ರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಇಂದು ಮತ ಮತಗಳ ಮಧ್ಯದಲ್ಲಿ ಅತೃಪ್ತ ವಾತಾವರಣ ಉಂಟಾಗುತ್ತಿದೆ. ಇಂತಹ ಅತೃಪ್ತ ವಾತಾವರಣವನ್ನು ಹೋಗಲಾಡಿಸಬೇಕಾದರೆ ಭಗವದ್ಗೀತೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶ್ರೀಮದ್ ಮಜ್ಜಗದ್ಗುರು ಶಂರರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಸಂಸ್ಥಾನ ಮಠದ ಪೀಠಾಧೀಶರಾದ ಶ್ರೀಮದ್ ಗಂಗಾಧರೇಂದ್ರಸರಸ್ವತಿ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ಭೀಮಾಶಂಕರ ಮಠದಲ್ಲಿ ಶಿರಸಿಯ ಶ್ರೀ ಸರ್ವಜ್ಷೇಂದ್ರ ಸರಸ್ವತಿ ಪ್ರತಿಷ್ಠಾನದ ವತಿಯಿಂದ ಜರುಗಿದ ಸಿಂದಗಿ ಶ್ರೀ ಭಗವದ್ಗೀತಾ ಅಭಿಯಾನ ಹಾಗೂ ಪೂರ್ವಭಾವಿ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಧರ್ಮದ ಆತ್ಮವೇ ಆಧ್ಯಾತ್ಮ. ಭಗವದ್ಗೀತೆ ಆಧ್ಯಾತ್ಮ ಆತ್ಮ. ಹಾಗಾಗಿಯೇ ಮೋದಿಜಿಯವರು ಹೊರ ದೇಶದ ನಾಯಕರುಗಳಿಗೆ ಭಗವದೀತೆಯ ಕೃತಿ ಅರ್ಪಣೆ ಮಾಡುವ ಪರಿಪಾಠ ಹಾಕಿಕೊಂಡಿದ್ದಾರೆ. ಇದರಿಂದಾಗಿ ವಿದೇಶಿಯರಿಗೂ ಭಗವದ್ಗೀತೆಯ ಮಹತ್ವ ಅರಿಯಲು ಸಹಾಯವಾಗುತ್ತದೆ. ಅಲ್ಲದೇ ಜಗತ್ತಿನ ಎಲ್ಲ ಭಾಷೆಗಳಲ್ಲಿ ಭಾಷಾಂತರಗೊಂಡ ಕೆಲವೇ ಗ್ರಂಥಗಳಲ್ಲಿ ಭಗವದ್ಗೀತೆ ಪ್ರಥಮ ಸಾಲಿನಲ್ಲಿ ನಿಲ್ಲುತ್ತದೆ. ಸಿಂದಗಿಯ ಭೀಮಾಶಂಕರ ಮಹಾರಾಜರು ೩೦೦ ವರ್ಷಗಳ ಹಿಂದೆಯೇ ಆದಿಲ್ ಶಾಹಿ ಕಾಲದಲ್ಲಿ ತಮ್ಮ ದಿವ್ಯ ಶಕ್ತಿಯ ತಪ್ಪಿಸಿನ ಮೂಲಕ ಪರಿಕಿಯರ ಆಳ್ವಿಕೆಯ ಕಾಲದಲ್ಲೂ ಧರ್ಮ ರಕ್ಷಣೆ ಮಾಡಿದ ಮಹಾನುಭಾವರು ಎಂದರು.
ಈ ವೇಳೆ ಸಿಂದಗಿ ಭೀಮಾಶಂಕರ ಶ್ರೀಮಠದ ದತ್ತಪ್ಪಯ್ಯ ಮಹಾಸ್ವಾಮಿಗಳು ಮಾತನಾಡಿ, ಗುರುವಿನ ದರುಶನಕ್ಕೆ ಶಿಷ್ಯರು ಹೋಗುವುದು ವಾಡಿಕೆ. ಆದರೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಮಠದ ಪೀಠಾಧೀಶರಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಭಕ್ತರಿಗೆ ದರುಶನ ಕರುಣಿಸಲು ಭಕ್ತರಿದ್ದಲ್ಲಿಯೇ ಆಗಮಿಸಿದ್ದು ಸಿಂದಗಿಯ ಪುರಜನರ ಪುಣ್ಯ ಎಂದರು.
ಈ ವೇಳೆ ಸಂಚಾಲಕ ಸಂಗನಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀಗಳು ಸತತ ೧೭ವರ್ಷಗಳಿಂದ ಭಗವದೀತೆಯ ಅಭಿಯಾನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳುತ್ತಾ ಬಂದಿದ್ದು, ಇದರ ಸಾರವನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕೆನ್ನುವ ಮಹದಾಸೆ ಈ ಅಭಿಯಾನದ್ದಾಗಿದೆ ಎಂದರು.
ಈ ವೇಳೆ ಅಶೋಕ ಅಲ್ಲಾಪೂರ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ವಿಪ ಸದಸ್ಯ ಅರುಣ ಶಹಾಪೂರ, ಸಾಯಬಣ್ಣ ದೇವರಮನಿ, ಮಹಾಂತೇಶ ಪಟ್ಟಣಶೆಟ್ಟಿ, ಮಲ್ಲು ಪೂಜಾರ, ಆರ್.ಡಿ.ಕುಲಕರ್ಣಿ, ಪ್ರದೀಪ ಕುಲಕರ್ಣಿ, ಎಂ.ಎಸ್.ಮಠ, ಶ್ರೀಧರ ಕುಲಕರ್ಣಿ, ಶ್ರೀಶೈಲ ಯಳಮೇಲಿ, ಸುನಂದಾ ಯಂಪುರೆ, ಶೈಲಜಾ ಸ್ಥಾವರಮಠ, ಪ್ರತಿಭಾ ಚೆಳ್ಳಗಿ, ಅಂಬಿಕಾ ಪಾಟೀಲ, ಶಾರದಾ ಮಂಗಳೂರ, ಸತೀಶ ಹಿರೇಮಠ, ಜಗದೀಶ ಪಾಟೀಲ, ಶಕುಂತಲಾ ಹಿರೇಮಠ, ಸಿದ್ದನಗೌಡ ಪಾಟೀಲ, ಬಸವರಾಜ ಮರಬದ, ಆನಂದ ಶಾಬಾದಿ, ಎಂ.ಎಂ.ಹಂಗರಗಿ, ಮುತ್ತು ಮುಂಡೇವಾಡಗಿ, ರಾಘವೇಂದ್ರ ಕುಲಕರ್ಣಿ, ಶ್ಯಾಮಲಾ ಮಂದೇವಾಲ ಸೇರಿದಂತೆ ಊರಿನ ಗಣ್ಯರು, ಮಹಿಳೆಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.