Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಯೂಬ ಮನಿಯಾರ ಸಮಾಜಸೇವೆಗೆ ಶ್ಲಾಘನೆ
(ರಾಜ್ಯ ) ಜಿಲ್ಲೆ

ಅಯೂಬ ಮನಿಯಾರ ಸಮಾಜಸೇವೆಗೆ ಶ್ಲಾಘನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಕಳೆದ 35 ವರ್ಷಗಳಿಂದ ಬಡವರಿಗೆ ದಿನಸಿ ಕಿಟ್ ನೀಡುತ್ತ ಬಂದಿರುವ ಸಮಾಜ ಸೇವಕ ಅಯೂಬ ಮನಿಯಾರ ಈ ವರ್ಷವೂ ಕೂಡ ತಮ್ಮ ನಿವಾಸದ ಎದುರು ೨೫೦ ದಿನಸಿ ಕಿಟ್‌ಗಳನ್ನು ಮತ್ತು ಹಾಲು ಖರೀದಿಸಲೆಂದು ಪ್ರತೀ ಕಿಟ್ ನ ಜೊತೆಗೆ 100 ರೂ.ಗಳನ್ನು ವಿತರಿಸಿ ಮಾನವೀಯತೆ ಮೆರೆದರು.
ವಿತರಣಾ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿ, ಸಾಕಷ್ಟು ಜನರಲ್ಲಿ ಅಪಾರ ಹಣವಿದ್ದರೂ ದಾನ ಮಾಡುವ ಗುಣ ಇರಲ್ಲ. ಕೆಲವರು ದಾನ ಮಾಡಬೇಕೆಂದರೂ ಸ್ವೀಕರಿಸಲು ಯಾರೂ ಮುಂದೆ ಬರಲ್ಲ. ಇಂಥವರ ಮಧ್ಯೆ ಮನಿಯಾರ ಅವರ ಸೇವೆಯನ್ನು ಸ್ವೀಕರಿಸಲು ವರ್ಷದಿಂದ ವರ್ಷಕ್ಕೆ ಹೆಚ್ಚೆಚ್ಚು ತಾಯಂದಿರು ಆಗಮಿಸುತ್ತಿರುವುದು ಮನಿಯಾರ್ ಅವರ ನಿಸ್ವಾರ್ಥ ಸೇವೆಯನ್ನು ಎತ್ತಿ ತೋರಿಸುತ್ತದೆ ಎಂದರು.
ಲಾಲ್ ಹುಸೇನ ಕಂದಗಲ್,
ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷ ಎಂ.ಎಚ್.ಕ್ವಾರಿ ಮಾತನಾಡಿ,
ನ್ಯಾಯವಾದಿ ವಿ.ಎಸ್.ಸಾಲಿಮಠ ಮನಿಯಾರ ಅವರ ಪರೋಪಕಾರ ಕುರಿತು ಶ್ಲಾಘಿಸಿದರು.
ಸಮಾಜ ಸೇವಕ ಅಯೂಬ್ ಮನಿಯಾರ್ ಮಾತನಾಡಿ, ಬಡತನದ ಬೇಗೆಯಿಂದ ಬಳಲಿದ ನಾನು ಹಬ್ಬದ ದಿನಗಳು ಬಂದಾಗ ಮೊದಲು ನೆನಪಾಗುವುದೇ ಬಡವರು. ಅವರಿಗೆ ಏನಾದರೂ ಸಹಾಯ ಮಾಡಬೇಕು ಎನ್ನುವ ಹಂಬಲ ನನ್ನದು. ನಾನೊಬ್ಬನೇ ಹಬ್ಬ ಆಚರಿಸಿದರೆ ದೇವರು ಮೆಚ್ಚಲಾರ. ಹಾಗಾಗಿ ಪ್ರತೀ ವರ್ಷ ನನ್ನ ಕುಟುಂಬಕ್ಕೆ ಹಬ್ಬದ ದಿನಸಿ ಖರೀದಿಸುವಾಗಲೇ ನನ್ನವರಿಗೂ ಖರೀದಿಸಿ ಅವರಿಗೆ ತಲುಪಿಸಿದ ನಂತರವೇ ನನಗೆ ಸಮಾಧಾನ. ಇದರ ಹಿಂದೆ ಯಾವುದೇ ಉದ್ದೇಶವಿಲ್ಲ. ನನ್ನ ಕುಟುಂಬಕ್ಕೆ ಆಶೀರ್ವದಿಸಿದರೆ ಸಾಕು ಎಂದರು.
ಶಿಕ್ಷಕಿ ಗೀತಾ ಹುರಕಡ್ಲಿ ಮಾತನಾಡಿ, ತಮ್ಮ ಪತಿಯ ಕಿಡ್ನಿ ಆಪರೇಶನ್ ನಲ್ಲಿ ಸಹಾಯ ಮಾಡಿದ ಕ್ಷಣಗಳನ್ನು ನೆನೆದರು.
ಮೌಲಾನಾ ಅಫ್ತಾಬ್ ಮುಫ್ತಿ ದಿವ್ಯ ಸಾನಿಧ್ಯ ವಹಿಸಿದ್ದರು. ಮೌಲಾನಾ ಅಲ್ಲಾಭಕ್ಷ ಖಾಜಿ ಸಾನಿಧ್ಯ ವಹಿಸಿದ್ದರು. ಗಣ್ಯ ವ್ಯಾಪಾರಸ್ಥರಾದ ಬಸವರಾಜ ಮೋಟಗಿ, ನಿವೃತ್ತ ಪ್ರಾಶುಪಾಲ ಎಲ್.ಎಚ್.ಮಮದಾಪೂರ, ಡಾ|| ವಿರೇಶ ಇಟಗಿ, ಅಯೂಬ್ ಮನಿಯಾರ್ ಅವರ ಪತ್ನಿ ಪರ್ವೀನ್ ಮನಿಯಾರ್, ಮಗ ಅಫ್ತಾಬ್ ಮನಿಯಾರ್, ಶಿಕ್ಷಕ ಜೆ.ಡಿ.ಮುಲ್ಲಾ ಸೇರಿದಂತೆ ಇತರರು ಭಾಗಿಯಾಗಿದ್ದರು.
ಮುಜಾಹೀದ್ ನಮಾಜಕಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS MUDDEBIHAL NEWS public news udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.