Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.29 ರಂದು ವಿಜಯಪುರಕ್ಕೆ ಪ್ರಧಾನಿ ಮೋದಿ
(ರಾಜ್ಯ ) ಜಿಲ್ಲೆ

ಏ.29 ರಂದು ವಿಜಯಪುರಕ್ಕೆ ಪ್ರಧಾನಿ ಮೋದಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯಪುರ ನಗರಕ್ಕೆ ಏ.29 ರಂದು ಆಗಮಿಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ. (ಕೂಚಬಾಳ) ಹೇಳಿದರು.
ಸೋಮವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಅವರು ಮಾಹಿತಿ ವಿವರಿಸಿದರು.
ಸೈನಿಕ ಶಾಲೆ ಆವರಣದಲ್ಲಿ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಕಲ ಸಿದ್ದತೆ ನಡೆಸಲಾಗುತ್ತಿದೆ. ಜಿಲ್ಲೆಯ ಎಂಟು ವಿಧಾನ ಸಭಾ ಚುನಾವಣೆಗೆ ಸಂಬಧಿಸಿದಂತೆ ಪ್ರಧಾನಿ ಮೋದಿ ಮತ್ತಿತರ ಗಣ್ಯರು ಪ್ರಚಾರ ಕೈಗೊಳ್ಳಲಿದ್ದಾರೆ ಎಂದರು.
ಏ.25 ರಂದು ಕೇಂದ್ರ ಗೃಹ ಖಾತೆ ಸಚಿವ ಅಮೀತ ಶಹಾ ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿರುವರು. ಹಾಗೆಯೇ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೂ ಸಹ ಏ.25ರಂದು ಇಂಡಿ ಮತಕ್ಷೇತ್ರದಲ್ಲಿ ಪ್ರಚಾರ ನಡೆಸುವರು. ಅಂದು ವಿಜಯಪುರದಲ್ಲಿ ವಾಸ್ತವ್ಯ ಹೂಡಿ ಮರುದಿನ ಬಬಲೇಶ್ವರ ಮತಕ್ಷೇತ್ರದ ಕನಮಡಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿರುವರು. ಏ.೨೭ ರಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಜಿಲ್ಲೆಯ ಬಸವನ ಬಾಗೇವಾಡಿ ಮತ್ತು ಇಂಡಿ ಕ್ಷೇತ್ರಗಳಲ್ಲಿ ಪ್ರಚಾರ ಕೈಕೊಳ್ಳಲಿದ್ದಾರೆ ಎಂದು ಪಾಟೀಲ ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ದಿ ನೋಡಿ ಈ ಬಾರಿ ಬಿಜಿಪಿ. ಪ್ರಚಂಡ ಬಹುಮತ ಗಳಿಸಲಿದೆ ಎಂದ ಅವರು, ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಆಡಳಿತದ ಸುಮಾರು ಅರವತ್ತು ವರ್ಷದಲ್ಲಿ ಬ್ರಹ್ಮಾಂಡ ಬ್ರಷ್ಠಾಚಾರ ಮಾಡಿ ಹಗರಣಗಳಿಂದಲೇ ಖ್ಯಾತಿಯಾಗಿತ್ತು. ಹೀಗಿದ್ದಾಗ ರಾಹುಲ ಗಾಂಧಿ ನಮ್ಮ ಪಕ್ಷವನ್ನು ಕಳ್ಳರ ಪಕ್ಷವೆಂದು ಜರಿದದ್ದು ಭೂತದ ಬಾಯಲ್ಲಿ ಭಗವದ್ಗಿತೆ ಕೇಳಿದಂತೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅಂಥವರು ಲಿಂಗಾಯತರೆಲ್ಲ ಭ್ರಷ್ಠರು ಎನ್ನುವ ಮಾತನ್ನು ರಾಜ್ಯದ ಜನ ಎಂದಿಗೂ ಕ್ಷಮಿಸರು ಎಂದರು.
ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ನಾಗಠಾಣ ಮತಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ಓರ್ವ ಬಡ ಅಭ್ಯರ್ಥಿಯನ್ನು ಪಕ್ಷ ಗುರ್ತಿಸಿ ಟಿಕೇಟ ಕೊಟ್ಟಿದೆ. ಅವರನ್ನು ಗೆಲ್ಲಿಸುವ ಹೊಣೆ ನಮ್ಮೆಲ್ಲರ ಮೇಲೆ ಇದೆ. ಅದನ್ನು ಸಮರ್ಥವಾಗಿ ನಿಭಾಯಿಸಿ ಗೆಲ್ಲಿಸಿಕೊಂಡು ಬರುತ್ತೇವೆ ಅಂದರು.
ಪತ್ರಿಕಾಗೊಷ್ಟಿಯಲ್ಲಿ ಬಿಜೆಪಿ ಮುಖಂಡರಾದ ಸುರೇಶ ಬಿರಾದಾರ, ಸಂಜಯ ಪಟೀಲ, ಮಲ್ಲಿಕಾರ್ಜುನ ಜೋಗೂರ, ವಿಜಯ ಜೋಶಿ ಉಪಸ್ಥಿತರಿದ್ದರು.

bijapur bjp modi patil
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026
    In ದಿನಪತ್ರಿಕೆ
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
  • ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ
    In (ರಾಜ್ಯ ) ಜಿಲ್ಲೆ
  • ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಸೇವನೆ ಜೀವಕ್ಕೆ ಆಪತ್ತು :ಡಾ.ತರನ್ನುಮ್
    In (ರಾಜ್ಯ ) ಜಿಲ್ಲೆ
  • ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೂತನ ಡಿಡಿಪಿಯು ಉಪ್ಪಾರ ರಿಗೆ ಸನ್ಮಾನ
    In Uncategorized
  • ೬೦ ದಿನಗಳ ಬೇಸಿಗೆ ತರಬೇತಿ ಶಿಬಿರ ಮುಕ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.