ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ವೇದಿಕೆ ನೀಡಲು ಸರಕಾರ ಪ್ರತಿಭಾಕಾರಂಜಿಯAತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಇದನ್ನು ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕೆಂದು ಶಾಸಕ ಸಿದ್ದು ಸವದಿ ಹೇಳಿದರು.
ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶೀಕ್ಷಣಾಧಿಕಾರಿಗಳ, ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ಪ್ರಭುಲಿಂಗೇಶ್ವರ ಇಂಟರನ್ಯಾಷನಲ್ ಸ್ಕೂಲ್ ಚಿಮ್ಮಡ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ೨೦೨೪-೨೫ನೇ ಸಾಲಿನ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು ದೇಶದ ಬಹುತೇಕ ದಿಗ್ಗಜ ಕಲಾವಿದರು, ಸಂಗೀರಗಾರರ ಪಾದಾರ್ಪಣೆಗೆ ಮೊದಲ ವೇದಿಕೆಯೇ ಪ್ರತಿಭಾ ಕಾರಂಜಿಯAತಹ ಕಾರ್ಯಕ್ರಮಗಳು, ಇಂತಹ ದೇಶ ಕಟ್ಟುವಲ್ಲಿ ಸಹಕಾರಿಯಾಗಬಲ್ಲ ಕಾರ್ಯಕ್ರಮಗಳಿಗೆ ವೇದಿಕೆಯಾಗಲು ಪ್ರತೀವರ್ಷವೂ ನಮ್ಮ ಸಂಸ್ಥೆ ಸಿದ್ದವಿದೆ ಎಂದರು.
ಕ್ಷೇತ್ರ ಶಿಕ್ಷ ಣಾಧಿಕಾರಿ ಅಶೋಕ ಬಸಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಣದ ಮೂಖ್ಯ ಭಾಗ ಈ ಪ್ರತಿಭಾ ಕಾರಂಜಿಯಲ್ಲಿ ಅಡಗಿದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವುದನ್ನೂ ಈ ವೇದಿಕೆ ಕಲಿಸಿ ಕೊಡುತ್ತದೆ. ವಿವಿಧತೆಯಲ್ಲಿ ಏಕತೆಯಂತೆ ಭಗವದ್ಗೀತೆ, ಕುರಾನ್ ಪಠಣ, ಧಾರ್ಮಿಕ ಗೀತೆಗಳು, ಜನಪದ ಗೀತೆಗಳು, ಭರತನಾಟ್ಯ ಸೇರಿದಂತೆ ೨೦ಕ್ಕೂ ಅಧಿಕ ಕಾರ್ಯಕ್ರಮಗಳು ಪ್ರತಿಭಾ ಕಾರಂಜಿಯಲ್ಲಿ ನಡೆಯಲಿದ್ದು ಅಖಂಡ ಜಮಖಂಡಿ ತಾಲೂಕಿನ ೨೬ ಕ್ಲಷ್ಟರನ ವಿದ್ಯಾರ್ಥಿ/ನಿಯರು ಇದರಲ್ಲಿ ಭಾಗವಹಿಸಲಿದ್ದಾರೆಂದರು.
ಮುಖ್ಯ ಅಥಿತಿಗಳಾಗಿ ಶ್ರೀ ಪ್ರಭುಲಿಂಗೇಶ್ವರ ಇಂಟರನ್ಯಾಷನಲ್ ಸ್ಕೂಲ್ನ ಸಂಸ್ಥಾಪಕ ಕಾರ್ಯದರ್ಶಿ ವಿದ್ಯಾಧರ ಸವದಿ, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಾಲಾ ಅಶೋಕ ಮೋಟಗಿ, ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾ ಪ್ರಭು ಗೋವಿಂದಗೋಳ, ಕ್ಷೇತ್ರ ಸಮನ್ವಯಾಧಿಕಾರಿ, ಕಾಡೇಶ ಕೋಲೂರ, ಬಾಲಚಂದ್ರ ನಂದೆಪ್ಪನವರ, ಸಂಸ್ಥೆಯ ಪ್ರಾಚಾರ್ಯ ಪದ್ಮರಾಜ ಸಣಕಿ, ರಾಹುಲ್ ಉತ್ತೂರ, ಬಿ.ಎಸ್. ಕಡಕೋಳ, ಬಾಬಾಗೌಡ ಪಾಟೀಲ, ಅರ್ಜುನ ಕಾಖಂಡಕಿ, ಅಪ್ಪಾಸಾಹೇಬ ಹಟ್ಟೆನ್ನವರ, ಎ.ಬಿ. ಮಾಂಗ್, ಸ್ಥಳಿಯ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಎಂ.ಎಸ್, ಜಿಟ್ಟಿ ಸೇರಿದಂತೆ ಹಲವಾರು ಜನ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಬಿ.ಆರ್,ಸಿ ರಮೇಶ ಅವಟಿ ಸ್ವಾಗತಿಸಿದರು, ಶ್ರೀಮತಿ ಎಸ್.ಎ. ರಾಸೂರ ನಿರೂಪಿಸಿದರು, ಕ್ಷೇತ್ರ ಸಮನ್ವಯ ಅಧಿಕಾರಿ ಬಿ.ಎಂ ಹಳಮನಿ ವಂದಿಸಿದರು.

