ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆಯ ಆವರಣದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಕುರಿತು ವಿಜಯಪುರ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ ಮಾಡಲಾಗಿದೆ.
ಈ ವಿಷಯದ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ, ಈ ಪ್ರಕಟಣೆಯ ದಿನಾಂಕದಿಂದ ೩೦ ದಿವಸಗಳ ಒಳಗಾಗಿ ತಮ್ಮ ಆಕ್ಷೇಪಣೆಯನ್ನು ವಿಜಯಪುರ ಮಹಾನಗರಪಾಲಿಕೆಗೆ ಸಲ್ಲಿಸಬಹುದಾಗಿದೆ. ನಂತರ ಸ್ವೀಕೃತವಾಗುವ ಆಕ್ಷೇಪಣಾ ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
