ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇದೇ ಅ.೩೧ ರಿಂದ ೩ ರವರೆಗೆ ದೀಪಾವಳಿ ಹಬ್ಬ ಆಚರಿಸಲಾಗುತ್ತಿದ್ದು, ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಯಂತೆ ಈ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ರಾತ್ರಿ ೧೦ ಗಂಟೆವರೆಗೆ ಮಾತ್ರ ಪಟಾಕಿಗಳನ್ನು ಬಳಸಲು ಅವಕಾಶ ನೀಡಿದೆ, ಉಳಿದ ಸಮಯದಲ್ಲಿ ಪಟಾಕಿಗಳನ್ನು ಬಳಸುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಪಟಾಕಿ ಮಾರಾಟ ವರ್ತಕರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಹಾಗೂ ಪರಿಹಸರ ಹಾನಿ ಉಂಟಾಗುವ ಯಾವುದೇ ಪಟಾಕಿಗಳನ್ನು ಮಾರಾಟ ಮಾಡಬಾರದೆಂದು ತಿಳಿಸಿದ್ದು, ಸಾರ್ವಜನಿಕರು ಸಹ ಹಸಿರು ಪಟಾಕಿಯನ್ನು ಬಳಸುವ ಮೂಲಕ ದೀಪಾವಳಿ ಹಬ್ಬವನ್ನ ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

