ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಬೇಡಿಕೆಗಳು
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ವಿಜಯಪುರ ಜಿಲ್ಲಾಧ್ಯಕ್ಷ ಹುಲಗಪ್ಪ ಎಚ್. ಚಲವಾದಿ ಮಾತನಾಡಿ, ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಕ್ರೈಸ್ ಇಲಾಖೆ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತೀರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸದೇ ಇರುವುದರಿಂದ ನೌಕರರು ಅತ್ಯಂತ ಸಂಕಷ್ಟದಲ್ಲಿ ಒದ್ದಾಡುತ್ತಿದ್ದಾರೆ. ಅಲ್ಲದೇ ಸಿಬ್ಬಂದಿ ಕಡಿತ ಮಾಡಿರುವುದರಿಂದ ಕೆಲಸದ ಹೋರ ಹೆಚ್ಚಾಗಿ ಅನಾರೋಗ್ಯದಿಂದ ಬಳಲುವಂತಾಗಿದೆ.ಅಲ್ಲದೇ ಕ್ರೈಸ್ ವಸತಿ ನಿಲಯಗಳ ವೇತನಕ್ಕಾಗಿ ಅನುದಾನವಿದ್ದರು ಕೂಡಾ ಏಜೆನ್ಸಿಗಳ ನಿರ್ಲಕ್ಷತನದಿಂದ ವೇತನ ಸಮಯಕ್ಕೆ ಸರಿಯಾಗಿ ಪಾವತಿಸದೇ ನೌಕರರು ಗೋಳಾಡುವಂತಾಗಿದೆ. ಕಾರಣ ಕೂಡಲೇ ಬಾಕಿ ವೇತನ ಪಾವತಿಸಬೇಕು. ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸು ಪಡೆಯಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ೫೦ ವಿಧ್ಯಾರ್ಥಿಗಳಿಗೆ ೩ ಜನರಂತೆ ಹಿಂದಿನ ಆದೇಶ ಜಾರಿಮಾಡಬೇಕು. ಏಜೆನ್ಸಿಗಳು ಪಿಎಫ್ ಮತ್ತು ಇಎಸ್ಐ ಸರಿಯಾಗಿ ಕಟ್ಟಿರುವುದಿಲ್ಲ ಹಾಗೂ ಪಾವತಿ ಸ್ವೀವ ನೀಡಿರುವುದಿಲ್ಲವಾದ ಕಾರಣ ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ದೀಪಾವಳಿ ಹಬ್ಬದ ಒಳಗಾಗಿ ಬಾಕಿ ಇರುವ ವೇತನ ತಕ್ಷಣ ನೀಡಬೇಕು.ವೇತನ ನೀಡದಿದ್ದರೇ ಮುಂದಿನ ದಿನಗಳಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷಣ ಮಸಳಿ, ಜಿಲ್ಲಾ ಸಹ ಕಾರ್ಯದರ್ಶಿ ಯಮನಪ್ಪ ಭಜಂತ್ರಿ, ಜಿಲ್ಲಾ ಖಚಾಂಚಿ ರಾಮಚಂದ್ರ ಕೋಳಿ ಜಿಲ್ಲಾ ಖಂಜಾಂಚಿ ಉಪಸ್ಥಿತರಿದ್ದರು.

