Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಂಜಾರ ಭಾಷೆ ಅದ್ಭುತ ವ್ಯಾಕರಣಾಂಶಗಳನ್ನು ಹೊಂದಿರುವ ಭಾಷೆ
(ರಾಜ್ಯ ) ಜಿಲ್ಲೆ

ಬಂಜಾರ ಭಾಷೆ ಅದ್ಭುತ ವ್ಯಾಕರಣಾಂಶಗಳನ್ನು ಹೊಂದಿರುವ ಭಾಷೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಂಜಾರ ಆಭರಣ ತಯಾರಿಕಾ ಕಾರ್ಯಾಗಾರದ ಸಮಾರೋಪ | ಪ್ರೊ.ನಾರಾಯಣ ಪವಾರ ಅಬಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಂಜಾರ ಆಭರಣ ತಯಾರಿ ಮತ್ತು ಬಂಜಾರಾ ಸಮುದಾಯದ ಕೌಶಲ್ಯಗಳನ್ನು ಇತರರು ಬಳಸಿಕೊಂಡು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಬಂಜಾರ ಸಮಾಜವೇ ಮುಂದೆ ಬಂದಿಲ್ಲ. ಸಮುದಾಯವು ಒಟ್ಟಾಗಿ ಒಂದಾಗಿ ಬೆಳೆಯಬೇಕು ಶೆರಿಂಗ್ ಇಜ್ ಕೆರಿಂಗ್ ಆಗಬೇಕು. ಹಾಗೆಯೆ ಯಾವುದೇ ವೃತ್ತಿ ಮಾಡಿದರೂ ನಾವೆಲ್ಲ ಗೋರ್ ಬಂಜಾರರು ಎಂದು ಸಮಾಜ ಚಿಂತಕ, ಡಾ.ಬಾಬು ರಾಜೇಂದ್ರ ನಾಯಕ್ ಸಲಹೆ ನೀಡಿದರು.
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು ಹಾಗೂ ಗ್ರಾಮ ಪಂಚಾಯತ್, ಬರಟಗಿ ಸಹಕಾರದೊಂದಿಗೆ “೧೦ ದಿನಗಳ ಬಂಜಾರ ಆಭರಣ ತಯಾರಿಕಾ ಕಾರ್ಯಾಗಾರ” ದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಇನೋರ್ವ ಮುಖ್ಯ ಅತಿಥಿ ಕ.ರಾ.ಅ.ಮ.ವಿ.ವಿ ಕನ್ನಡ ಅಧ್ಯಯನ ವಿಭಾಗದ ಪ್ರೊ.ನಾರಾಯಣ ಪವಾರ ಮಾತನಾಡಿ, ಬಂಜಾರ ಭಾಷೆಯು ಅದ್ಭುತವಾದ ವ್ಯಾಕರಣಾಂಶಗಳನ್ನು ಹೊಂದಿರುವ ಭಾಷೆಯಾಗಿದೆ. ಲಂಬಾಣಿ ಮಹಿಳೆಯರ ಸೌಭಾಗ್ಯದ ಸಂಕೇತವಾದ ಆಭರಣ ತಯಾರಿಸುವ ನೀವುಗಳು ಶ್ರೇಷ್ಠ ಕಲಾವಿದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಮಾತನಾಡಿ, ಬಂಜಾರ ಅಕಾಡೆಮಿಯು ಒಳ್ಳೆಯ ಕಾರ್ಯವನ್ನು ಮಾಡುತ್ತಿದೆ. ಎಲ್ಲ ಕಡೆ ಈ ರೀತಿಯ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದರು.
ಜಾನಪದ ವಿಶ್ವವಿದ್ಯಾಲಯ ಗೊಟಗೊಡಿಯ ಸಹಾಯಕ ಪ್ರಾಧ್ಯಪಕ ಉತ್ತಮ ಮೂಡ ಮಾತನಾಡಿ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿಯು ತುಂಬಾ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಆರ್ ಬಿ ನಾಯಕ್, ಅಧ್ಯಕ್ಷತೆ ವಹಿಸಿದ ರಾಮನಗೌಡ ಎನ್ ಬಿರಾದಾರ ಮಾತನಾಡಿ, ತಾಂಡಾದಲ್ಲಿಯೇ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಬಂದು ಕೆಲಸ ಮಾಡಿರುವುದು ಶ್ಲಾಘನೀಯ ಎಂದರು.
ಕಾರ್ಯಾಗಾರಕ್ಕೆ ಆಗಮಿಸಿದ ಗಣ್ಯರೆಲ್ಲರನ್ನು ಸ್ವಾಗತಿಸಿ, ೧೦ ದಿನಗಳ ಕಾರ್ಯಾಗಾರದ ಸಂಕ್ಷಿಪ್ತ ವರದಿಯನ್ನು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯೆ ಡಾ.ಸುರೇಖಾ ಜಿ ರಾಠೋಡ, ಪ್ರಸ್ತುತಪಡಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸಂಗೀತಾ ನಾಯಕ್ ಅವರು ಮಾಡಿದರು. ಶ್ರೀಮತಿ ಶಾರದಾ ನಾಯಕ್ ವಂದಿಸಿದರು.
ಕಾರ್ಯಕ್ರಮದಲ್ಲಿ ಧನರಾಜ್ ಪತ್ತಾರ್, ಸದಸ್ಯರು ಗ್ರಾಪಂ ಬರಟಗಿ, ಗೊವಿಂದ ಸಿಂದೆ ಸದಸ್ಯರು ಗ್ರಾಪಂ ಬರಟಗಿ, ವಿನೋದ ಪತ್ತಾರ, ಕಲ್ಯಾಣಸಿಂಗ್ ಪತ್ತಾರ್, ಕಿಷನ್ ಪತ್ತಾರ್, ದೀವಿಚಂದ ಪತ್ತಾರ, ಶಿಬಿರಾರ್ಥಿಗಳು ಮತ್ತು ಗ್ರಾಮದ ಹಿರಿಯರು ಭಾಗವಹಿಸಿದ್ದರು.

ಬಹುಮಾನ ವಿತರಣೆ

ಈ ಕಾರ್ಯಾಗಾರದಲ್ಲಿ ಶಿಬಿರಾರ್ಥಿಗಳು ತಯಾರಿಸಿದ ಆಭರಣಗಳನ್ನು ನಾಲ್ಕು ಗುಂಪುಗಳಾಗಿ ವರ್ಗಿಕರಿಸಿ ಆಭರಣಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಅತ್ಯಂತ ಸುಂದರವಾಗಿ ಆಭರಣಗಳನ್ನು ತಯಾರಿಸಿದ ಗುಂಪುಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು. ಪ್ರಥಮ ಬಹುಮಾನ ೧೦೦೦, ಎರಡನೇಯ ಬಹುಮಾನ ೭೦೦, ತೃತಿಯ ಬಹುಮಾನ ೫೦೦ ಮತ್ತು ಸಮಾಧಾನಕರ ೪೦೦ರೂ ವಿತರಣೆಯ ಪ್ರಯೋಜಕತ್ವವನ್ನು ಶ್ರೀಮತಿ ಸಂಗೀತಾ ನಾಯಕ್ ಅವರು ವಹಿಸಿಕೊಂಡಿದ್ದರು.

ಅನಿಸಿಕೆ ವ್ಯಕ್ತ

ಈ ಕಾರ್ಯಾಗಾರದ ಕುರಿತು ಶಿಬಿರಾರ್ಥಿಗಳಾದ ಮನು ಪತ್ತಾರ, ಗೀತಾ ಪತ್ತಾರ್, ಸೋನ್ಯಾ ಪತ್ತಾರ್, ಕಾವೇರಿ ಪತ್ತಾರ್, ಉಷಾ ಪತ್ತಾರ್, ಅಶೋಕ ಪತ್ತಾರ, ಮಿನಾಕ್ಷಿ ಪತ್ತಾರ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.