ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಸಿಂದಗ ನಗರವನ್ನು ಶಾಸಕ ಅಶೋಕ ಮನಗೂಳಿ ಅವರು ಅಭಿವೃದ್ಧಿ ಪಡಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕಾಂಗ್ರೆಸ್ ಮುಖಂಡೆ ಸುನಂದಾ ಯಂಪುರೆ ಹೇಳಿದರು.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ೨೪ದಿನಗಳ ಹಿಂದೆ ಬಸವೇಶ್ವರ ವೃತ್ತದಲ್ಲಿ ಸಿಂದಗಿ ನಗರವನ್ನು ಸೌಂದರ್ಯೀಕರಣಗೊಳಿಸುವ ದಿಸೆಯಲ್ಲಿ ಬೀದಿ ದ್ವೀಪಗಳ ಕಂಬ ಅಳವಡಿಕೆಗೆ ಚಾಲನೆ ನೀಡಿದ್ದರು. ಬರುವ ದೀಪಾವಳಿಗೆ ಅಲಂಕಾರಿಕ ಬೀದಿ ದ್ವೀಪಗಳ ಕಂಬಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕೊಡಿಸುವುದಾಗಿ ಹೇಳಿದ್ದರು. ಕೊಟ್ಟ ಮಾತಿನಂತೆ ಇಮದು ದೀಪಾವಳಿ ಹಬ್ಬದಂದು ಅಲಂಕಾರಿಕ ವಿದ್ಯುತ್ ದ್ವೀಪಗಳಿಗೆ ಚಾಲನೆ ನೀಡಿದ್ದಾರೆ. ಇದಕ್ಕೆ ಸಿಂದಗಿ ನಗರದ ಜನತೆಯ ವತಿಯಿಂದ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹರ್ಷವ್ಯಕ್ತಪಡಿಸುತ್ತಿದ್ದಾರೆ. ರಾಜಕೀಯ ಜೀವನದಲ್ಲಿ ಸವಾಲುಗಳನ್ನು ಎದುರಿಸಿ ಮುನ್ನಡೆಯುದೇ ನಿಜವಾದ ನಾಯಕ. ಆ ನಿಟ್ಟಿನಲ್ಲಿ ನಿಮ್ಮ ಕಾರ್ಯಗಳು ಸದಾ ಹೀಗೆ ಮುಂದುವರೆಯಲಿ ಎಂದು ಹೇಳಿದ್ದಾರೆ.

