ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶನ (ರಿ) ಕಡಲಬಾಳು, ಹಗರಿಬೊಮ್ಮನಹಳ್ಳಿ ತಾಲೂಕು, ವಿಜಯನಗರ ಜಿಲ್ಲೆ ಇವರ ಸಹಯೋಗದಲ್ಲಿ ಇಂದು ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನ, ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ನಾಡು-ನುಡಿ, ನೆಲ-ಜಲ, ಸಾಹಿತ್ಯ-ಸಾಂಸ್ಕೃತಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅನುಪಮವಾದ ಸೇವೆ ಸಲ್ಲಿಸಿದ ಪ್ರಯುಕ್ತ ವಿಜಯಪುರ ಬಾಲಿಕೆಯರ ಸರಕಾರಿ ಪದವಿ-ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಡಾ. ಸಿದ್ದು ಸಾವಳಸಂಗ ಇವರಿಗೆ ರಾಜ್ಯ ಮಟ್ಟದ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ ಮಾಡಲಾಯಿತು.
ಡಾ.ಅವಧೂತ ಮಹರ್ಷಿ ಸಿದ್ದಾರ್ಥ ಸ್ವಾಮೀಜಿ, ಚನ್ನಾಪೂರ ಧಾರವಾಡ ಜಿಲ್ಲೆ ಇವರು ದಿವ್ಯ ಸಾನಿಧ್ಯ ವಹಿಸಿದ್ದು, ವೇದಿಕೆಯ ಮೇಲೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ.ಮಡ್ಡೀಕೆರೆ ಗೋಪಾಲ, ಡಾ.ನಾಗರಾಜ ತಂಬ್ರಹಳ್ಳಿ, ಡಾ.ಟಿ.ತ್ಯಾಗರಾಜು, ಡಾ.ಪ್ರವೀಣರಾಜ್, ಡಾ.ಎ.ಡಿ.ಕೊಟ್ನಾಳ್ ಹಾಗೂ ಸುಮಾ ಬಸವರಾಜ ಹಡಪದ ಉಪಸ್ಥಿತರಿದ್ದು, ಹಲವಾರು ಸಾಧಕರ ನಡುವೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ.ಸಿದ್ದು ಸಾವಳಸಂಗ ಇವರಿಗೆ ಅವರ ಕಾಲೇಜು ಸಿಬ್ಬಂದಿ ವರ್ಗ, ಸ್ನೇಹಿತರು ಹಾಗೂ ಕುಟುಂಬ ಸದಸ್ಯರು ಶುಭ ಹಾರೈಸಿದ್ದಾರೆ.

