ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಬಾರ್ಕಲೇಸ್ ಇವರ ಸಹಯೋಗದಲ್ಲಿ ದಿನಾಂಕ ೨೦-೧೧-೨೦೨೪ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನಗರದ ಲಿಂಗದ ಗುಡಿ ರಸ್ತೆಯಲ್ಲಿರುವ ಖೇಡ ಕಾಲೇಜು ಆವರಣದಲ್ಲಿ ಸ್ಥಳೀಯ ಖಾಸಗಿ ಹಾಗೂ ರಾಜ್ಯದ ಪ್ರತಿಷ್ಠಿತ ಎಂ.ಎನ್.ಸಿ. ಕಂಪನಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ‘ಉದ್ಯೋಗ ಮೇಳ’ ಆಯೋಜಿಸಲಾಗಿದೆ.
ಈ ಮೇಳದಲ್ಲಿ ವಿಶೇಷಚೇತನರು ವiತ್ತು ಸಾಮಾನ್ಯ ಅಭ್ಯರ್ಥಿಗಳು ಭಾಗವಹಿಸಬಬಹುದಾಗಿದೆ. ಈ ಉದ್ಯೋಗ ಮೇಳದಲ್ಲಿ ವಿಶೇಷ ಚೇತನರಿಗೆ ಪ್ರತ್ಯೇಕ ಸಂದರ್ಶನ ವ್ಯವಸ್ಥೆ ಮಾಡಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ. ಡಿಪ್ಲೋಮಾ, ಹಾಗೂ ಯಾವುದೇ ಪದವಿ ಪಾಸಾದಂತಹ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಶಾಲಾ ದಾಖಲಾತಿಗಳು, ಆಧಾರ ಕಾರ್ಡ, ಬಾಯೋಡೆಟಾಗಳ ೫ ಸೆಟ್ ಝರಾಕ್ಸನೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. ೯೧೪೮೧೫೭೮೮೮ / ೯೯೪೫೦೦೦೭೯೩ ಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
