Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಿಂ.ಮಲ್ಲಪ್ಪ ಸಿಂಹಾಸನ ಅವರ ಸೇವೆ ಸ್ಮರಣೀಯ :ಜಯಶ್ರೀ
(ರಾಜ್ಯ ) ಜಿಲ್ಲೆ

ಲಿಂ.ಮಲ್ಲಪ್ಪ ಸಿಂಹಾಸನ ಅವರ ಸೇವೆ ಸ್ಮರಣೀಯ :ಜಯಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲಿಂ.ಮಲ್ಲಪ್ಪ ಸಿಂಹಾಸನ ಪುಣ್ಮಸ್ಮರಣೆ | ಕೂಡಲಸಂಗಮ ಅಭಿವೃದ್ಧಿ ಮಂಡಳಿ ಕಾರ್ಯಕ್ರಮ

ಬಸವನಬಾಗೇವಾಡಿ: ಬಸವೇಶ್ವರ ದೇವಾಲಯ ಸಂಸ್ಥೆಯ ಮೂಲಸಂಸ್ಥಾಪಕರಾಗಿ ಬಸವೇಶ್ವರ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿರುವ ಲಿಂ.ಮಲ್ಲಪ್ಪ ಶಂಕ್ರೆಪ್ಪ ಸಿಂಹಾಸನ ಅವರ ಸೇವೆ ಸ್ಮರಣೀಯವಾಗಿದೆ ಎಂದು ಜಯಶ್ರೀ ಮೊಕಾಶಿ ಹೇಳಿದರು.
ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಹಮ್ಮಿಕೊಂಡಿದ್ದ ಬಸವೇಶ್ವರ ದೇವಾಲಯ ಸಂಸ್ಥೆಯ ಮೂಲ ಸಂಸ್ಥಾಪಕ ಲಿಂ.ಮಲ್ಲಪ್ಪ ಶಂಕ್ರೆಪ್ಪ ಸಿಂಹಾಸನ ಅವರ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಆಗಿನ ಕಾಲದಲ್ಲಿ ಮಾಮಲೇದಾರರಾಗಿ ಜನಪರ ಕಾರ್ಯಗಳನ್ನು ಲಿ.ಮಲ್ಲಪ್ಪ ಸಿಂಹಾಸನ ಅವರು ಮಾಡಿದರು. ಇವರ ಸೇವೆಯನ್ನು ಗುರುತಿಸಿ ಆಗಿನ ಬ್ರಿಟಿಷರ ಸರ್ಕಾರ ರಾವ್ ಸಾಹೇಬ ಎಂಬ ಸನ್ನದು ನೀಡಿ ಗೌರವಿಸಿತ್ತು. ತಮ್ಮ ಸರ್ಕಾರಿ ನೌಕರಿಯಿಂದ ನಿವೃತ್ತರಾದ ನಂತರ ಬಸವೇಶ್ವರ ದೇವಾಲಯ ಸಂಸ್ಥೆಯನ್ನು ಸ್ಥಾಪಿಸಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾದರು. ಜನರ ವಂತಿಗೆ ಹಣ ಸಂಗ್ರಹಿಸಿ ದೇವಾಲಯದ ಸುತ್ತಲಿನ ಪರಿಸರ, ದೇವಾಲಯದ ಜೀರ್ಣೋದ್ಧಾರ ಕಾರ್ಯಕೈಗೊಳ್ಳುವ ಮೂಲಕ ಮನದ ಸೇವೆ ಸಲ್ಲಿಸಿದರು. ಇವರ ಕಾರ್ಯವನ್ನು ಇಂದಿನ ಪೀಳಿಗೆಗೆ ತಿಳಿಸಿಕೊಡುವ ಕಾರ್ಯ ಮಾಡಬೇಕಿದೆ. ಇವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ಆಚರಣೆಗೆ ತರುವಲ್ಲಿ ನಂದಿ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಹಾಂತೇಶ ಸಂಗಮ ಅವರ ಕಾರ್ಯ ಶ್ಲಾಘನೀಯ ಎಂದರು.
ನಂದಿ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಹಾಂತೇಶ ಸಂಗಮ ಮಾತನಾಡಿ, ಬಸವೇಶ್ವರ ದೇವಾಲಯ ಸಂಸ್ಥೆಯ ಮೂಲಸಂಸ್ಥಾಪಕರಾದ ಲಿಂ.ಮಲ್ಲಪ್ಪ ಸಿಂಹಾಸನ ಅವರ ಸೇವೆ ಯಾರೂ ಮರೆಯಬಾರದು. ಅವರ ಸಲ್ಲಿಸಿದ ಸೇವೆಯಿಂದಾಗಿ ಬಸವೇಶ್ವರ ದೇವಾಲಯ ಜೀರ್ಣೋದ್ಧಾರವಾಯಿತು. ಇವರ ಪುಣ್ಯಸ್ಮರಣೆಯ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ಮಾಡಲು ಮೊದಲು ನಂದಿ ಸಾಹಿತ್ಯ ವೇದಿಕೆಯಿಂದ ೨೦೧೧ ರಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ತದನಂತರ ಕೂಡಲಸಂಗಮ ಅಭಿವೃದ್ಧಿ ಮಂಡಳಿಗೆ ಪತ್ರ ಬರೆದು ಮಂಡಳಿಯ ವಾರ್ಷಿಕ ಕಾರ್ಯಕ್ರಮದ ಪಟ್ಟಿಯಲ್ಲಿ ಇದನ್ನು ಹಾಕುವಂತೆ ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಮಂಡಳಿಯ ಅಽಕಾರಿಗಳು ಪ್ರತಿವರ್ಷ ಇವರ ಪುಣ್ಯಸ್ಮರಣೆಯನ್ನು ಮಾಡುತ್ತಾ ಬರುತ್ತಿದೆ. ಈ ವರ್ಷ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವದರಿಂದಾಗಿ ಕಾರ್ಯಕ್ರಮ ಸರಳವಾಗಿ ಆಚರಣೆಯಾಗುತ್ತಿದೆ ಎಂದರು.
ಸಾನಿಧ್ಯ ವಹಿಸಿದ್ದ ಸಿದ್ದಲಿಂಗ ಸ್ವಾಮೀಜಿ, ಸಮಾಜ ಸುಧಾರಣೆ, ಸಾಮಾಜಿಕ ಕಾರ್ಯ ಮಾಡಿರುವ ಮಹಾತ್ಮರನ್ನು ಎಂದಿಗೂ ಒಂದೇ ಜಾತಿಗೆ ಸೀಮಿತಗೊಳಿಸಬಾರದು. ಅವರ ಜಯಂತಿ, ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ಎಲ್ಲರೂ ಸಮಾನರಾಗಿ ಕೂಡಿಕೊಂಡು ಆಚರಣೆ ಮಾಡಿದಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ. ಮಹಾತ್ಮರ,ಸಂತರ ಸಂದೇಶಗಳನ್ನು ಅರಿತು ಜೀವನ ಮಾಡಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಬಸವೇಶ್ವರ ದೇವಾಲಯ ಇಂಟರ್‌ನ್ಯಾಷನಲ್ ಸ್ಕೂಲಿನ ಉಪಪ್ರಾಚಾರ್ಯ ಎಸ್.ಎಂ.ಬಿಸ್ಟಗೊಂಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗಂಗಪ್ಪ ಬೇವನೂರ ಉಪಸ್ಥಿತರಿದ್ದರು.
ಎಸ್.ಎಸ್.ಹಡಪದ ಸ್ವಾಗತಿಸಿದರು. ಬಸವರಾಜ ನಂದಿಹಾಳ ನಿರೂಪಿಸಿದರು. ಎಸ್.ಬಿ.ಮುತ್ತಗಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಬಸವೇಶ್ವರದ ದೇವಸ್ಥಾನದ ಹೊರಆವರಣದಲ್ಲಿರುವ ಲಿಂ.ಮಲ್ಲಪ್ಪ ಶಂಕ್ರೆಪ್ಪ ಸಿಂಹಾಸನ ಅವರ ಪ್ರತಿಮೆಗೆ ಪೂಜೆ ಸಲ್ಲಿಸಲಾಯಿತು.

BASAVAN BAGEWADI BIJAPUR NEWS udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.