Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರದ್ಧಾ ಭಕ್ತಿಯ ಹಾನಗಲ್ ಸದಾಶಿವ ಸ್ವಾಮೀಜಿ ೪೧ ನೇ ಪುಣ್ಯಸ್ಮರಣೆ
(ರಾಜ್ಯ ) ಜಿಲ್ಲೆ

ಶ್ರದ್ಧಾ ಭಕ್ತಿಯ ಹಾನಗಲ್ ಸದಾಶಿವ ಸ್ವಾಮೀಜಿ ೪೧ ನೇ ಪುಣ್ಯಸ್ಮರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಅಂತರಾಷ್ಟ್ರೀಯ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿರುವ ಹಾನಗಲ್ ಸದಾಶಿವ ಸ್ವಾಮೀಜಿಯವರ ದೇವಸ್ಥಾನದಲ್ಲಿ ಸೋಮವಾರ ಹಾನಗಲ್ ಸದಾಶಿವ ಸ್ವಾಮೀಜಿಯವರ ೪೧ ನೇ ಪುಣ್ಯಸ್ಮರಣೆಯನ್ನು ಭಕ್ತರು ಶ್ರದ್ಧಾ-ಭಕ್ತಿಯಿಂದ ಆಚರಿಸಿದರು.
ಬೆಳಗ್ಗೆ ದೇವಸ್ಥಾನದಲ್ಲಿ ಹಾನಗಲ್ ಸದಾಶಿವ ಸ್ವಾಮೀಜಿಯವರ ಕರ್ತೃ ಗದ್ದುಗೆಗೆ ಹಾಗೂ ಅವರ ಪಾದುಕೆಗಳಿಗೆ ಬಸವೇಶ್ವರ ದೇವಸ್ಥಾನದ ಅರ್ಚಕ ಗೌರಿಶಂಕರ ಚರಂತಿಮಠ ಅವರು ರುದ್ರಾಭಿಷೇಕ, ವಿಶೇಷ ಪೂಜೆ ನೆರವೇರಿಸಿದರು. ಭಕ್ತರು ಕಾಯಿ-ಕರ್ಪೂರ ಅರ್ಪಿಸಿ ಸ್ವಾಮೀಜಿಯವರ ಕರ್ತೃ ಗದ್ದುಗೆ ಹಾಗೂ ಸ್ವಾಮೀಜಿಯವರ ಪಾದುಕೆಗಳ ದರ್ಶನ ಪಡೆದುಕೊಂಡರು.
ಪೂಜೆ ನೆರವೇರಿದ ನಂತರ ಹಾನಗಲ್ ಸದಾಶಿವ ಸ್ವಾಮೀಜಿಯವರ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಎತ್ತಿನ ಬಂಡಿಯಲ್ಲಿ ಡೊಳ್ಳಿನ ಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಪಟ್ಟಣದಲ್ಲಿ ೧೯೮೩ ರ ನ. ೧೮ ರಂದು ಆರು ತಿಂಗಳಿಂದ ಸ್ಥಳೀಯ ವಿರಕ್ತಮಠದ ಮುರುಘೇಂದ್ರ ಸ್ವಾಮೀಜಿಯವರು ನಡೆಸಿಕೊಂಡು ಬಂದಿದ್ದ ಬಸವ ಪುರಾಣ ಮಂಗಲ ಹಾಗೂ ೬೩ ಪುರಾತನ ಶರಣರ ಮಂಟಪ ಮಹಾಪೂಜೆಗೆ ಹಾನಗಲ್ ಸದಾಶಿವ ಸ್ವಾಮೀಜಿಯವರು ಬಸವ ನೆಲ ಬಸವನಬಾಗೇವಾಡಿಗೆ ಆಗಮಿಸಿದ್ದರು. ಈ ಕಾರ್ಯಕ್ರಮದ ಸಾನಿಧ್ಯ ವಹಿಸಿ ಪೂಜೆ, ಪ್ರಸಾದಕ್ಕೆ ಚಾಲನೆ ನೀಡಿ ಮಾತನಾಡುವ ಸಂದರ್ಭದಲ್ಲಿ ಅವರು ನಿಮಗೆಲ್ಲ ಆನಂದ ನಮಗೆ ಕೈಲಾಸ ಎನ್ನುತ್ರಾ ಇದೇ ಸ್ಥಳದಲ್ಲಿ ಲಿಂಗೈಕ್ಯರಾದರು. ಸ್ವಾಮೀಜಿಯವರು ಲಿಂಗೈಕ್ಯರಾದ ನಂತರ ಅವರ ಶರೀರವನ್ನು ಅಲ್ಲಿನ ಭಕ್ತರು ಹಾನಗಲ್ಗೆ ತೆಗೆದುಕೊಂಡು ಹೋಗಿ ಅಂತಿಮ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಅಲ್ಲಿಯೇ ಸ್ವಾಮೀಜಿಯವರ ಕರ್ತೃಗದ್ದುಗೆ ನಿರ್ಮಿಸಿದ್ದಾರೆ. ಇಲ್ಲಿನ ಭಕ್ತರು ಸ್ವಾಮೀಜಿಯವರು ಇಲ್ಲಿಯೇ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ದೇವಸ್ಥಾನ ಕಟ್ಟಿಸಿ ಪ್ರತಿ ವರ್ಷ ಅವರ ಪುಣ್ಯಸ್ಮರಣೆ ಮಾಡಿಕೊಂಡು ಬರುತ್ತಿದ್ದೇವೆ ಎಂದು ಬಸನಗೌಡ ಪಾಟೀಲ, ಮಲ್ಲು ಇವಣಗಿ ಹೇಳಿದರು.
ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸುಭಾಸ ಗಬ್ಬೂರ, ಮಲ್ಲು ಬಿದರಿ, ಚಂದಪ್ಪ ಹಡಪದ, ಮುರುಗೇಶಿ ನಾಯ್ಕೋಡಿ, ರವಿ ಚಟ್ಟೇರ, ಈರಪ್ಪ ಅಡಗಿಮನಿ, ಅನಿಲ ಅಗರವಾಲ, ಸದು ಮಿಣಜಗಿ, ಶ್ರೀಶೈಲ ಮಿಣಜಗಿ, ಮುತ್ತು ಮಿಣಜಗಿ ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.