Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯ ವಿವಿಧೆಡೆ ಸಂವಿಧಾನ ಪೀಠಿಕೆ ದಿನ ಆಚರಣೆ
(ರಾಜ್ಯ ) ಜಿಲ್ಲೆ

ಸಿಂದಗಿಯ ವಿವಿಧೆಡೆ ಸಂವಿಧಾನ ಪೀಠಿಕೆ ದಿನ ಆಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ದೇಶದ ಪ್ರತಿಯೊಬ್ಬ ನಾಗರಿಕನು ಸಂವಿಧಾನವನ್ನು ಅರಿಯುವುದು ಅಗತ್ಯವಾಗಿದೆ ಎಂದು ಪಿಯು ಪ್ರಥಮ ವರ್ಷದ ವಿದ್ಯಾರ್ಥಿ ಕಾಶಿನಾಥ ಬಳುಂಡಗಿ ಹೇಳಿದರು.
ಪಟ್ಟಣದ ರಾಂಪೂರ ಪಿಎ ರಸ್ತೆಯಲ್ಲಿರುವ ಪಿ.ಇ.ಎಸ್.ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ-ಪೂರ್ವ ಕಾಲೇಜಿನಲ್ಲಿ ಜರುಗಿದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕಾಶಿನಾಥ ಬಳುಂಡಗಿ ಸಹಮಿತ್ರರನ್ನು ಕುರಿತು ಮಾತನಾಡಿದರು.
ದೇಶದ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಅದನ್ನು ಅರಿತು ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಸಂವಿಧಾನವನ್ನು ಪಾಲಿಸಬೇಕಾದ ಜನಪ್ರತಿನಿಧಿಗಳು, ಅಧಿಕಾರಿಗಳು ಸಂವಿಧಾನದ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಸಮಾಜದಲ್ಲಿ ಅಸಮಾನತೆ, ಜಾತೀಯತೆ, ಭಿನ್ನತೆಗೆ ಕಾರಣವಾಗಿದೆ. ಇಂತಹ ಘಟನೆಗಳು ದೇಶದ ಏಕತೆಗೆ ಮಾರಕವಾಗುತ್ತಿವೆ. ವಿದ್ಯಾವಂತ ಯುವಪೀಳಿಗೆ ದೇಶದ ಸಂವಿಧಾನದ ಆಶಯಗಳನ್ನು ಈಡೇರಿಸಲು ಕಂಕಣಬದ್ಧರಾಗಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಆರ್.ಬಿ.ಗೋಡಕರ, ಗುರು ಕಡಣಿ, ಅಮೀರಬಾಷಾ ಮೋಪಗಾರ, ಮಹಾಂತೇಶ ದಂಡವತ, ಎಸ್.ಎಸ್.ಬಿರಾದಾರ, ಕೆ.ಎಚ್.ಸೋಮಾಪೂರ, ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರೇರಣಾ ಶಾಲೆ
ಪಟ್ಟಣದ ಹೊರವಲಯದ ಪ್ರೇರಣಾ ಶಾಲೆಯಲ್ಲಿ ಸಂವಿಧಾನ ಪೀಠಿಕೆ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಈ ವೇಳೆ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ, ನಿರ್ದೇಶಕ ಪಿ.ಡಿ. ಕುಲಕರ್ಣಿ, ಮುಖ್ಯ ಗುರಮಾತೆ ಎಸ್.ಐ ಅಸ್ಕಿ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು
ಶ್ರೀ ಪದ್ಮರಾಜ ಮಹಿಳಾ ಕಾಲೇಜು
ಪಟ್ಟಣದ ಶ್ರೀಪದ್ಮರಾಜ ಮಹಿಳಾ ಮಹಾವಿದ್ಯಾಲಯದಲ್ಲಿ ಸಂವಿಧಾನ ಪೀಠಿಕೆ ದಿನಾಚರಣೆ ಆಚರಣೆ ಮಾಡಲಾಯಿತು.
ಇದೇ ವೇಳೆ ಪದವಿ ಪ್ರಾಚಾರ್ಯ ಎಸ್.ಎಂ.ಪೂಜಾರಿ, ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎಸ್.ಕುಲಕರ್ಣಿ, ಎಸ್.ಸಿ.ದುದ್ದಗಿ, ಹೇಮಾ ಕಾಸರ, ಸತೀಶ ಕಕ್ಕಸಗೇರಿ, ಶಂಕರ ಕುಂಬಾರ, ವಿಜಯಲಕ್ಷ್ಮಿ ಭಜಂತ್ರಿ ಸೇರಿದಂತೆ ಅನೇಕರಿದ್ದರು.
ಆರ್.ಡಿ ಪಾಟೀಲ ಮಹಾವಿದ್ಯಾಲಯ
ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸಂವಿಧಾನ ಪೀಠಿಕೆ ದಿನಾಚರಣೆ ಆಚರಣೆ ಮಾಡಲಾಯಿತು.
ಈ ವೇಳೆ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪನ್ಯಾಸಕರಾದ ಪಿ.ವ್ಹಿ.ಮಹಲಿನಮಠ, ಬಿ.ಬಿ.ಜಮಾದಾರ, ಎನ್.ಬಿ.ಪೂಜಾರಿ, ವ್ಹಿ.ಪಿ.ನಂದಿಕೋಲ, ಶಿವಶರಣ ಬೂದಿಹಾಳ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ಡಾ.ಶರಣು ಜೋಗೂರ, ಶರಣು ಹೂಗಾರ, ಗವಿಸಿದ್ದಪ್ಪ ಆನೆಗುಂದಿ, ಎಸ್.ಜಿ.ಮಾರ್ಸನಳ್ಳಿ, ಪ್ರಸನ್ನಕುಮಾರ ಜೋಗೂರ ಸೇರಿದಂತೆ ಇನ್ನಿತರರು ಇದ್ದರು.
ವಿದ್ಯಾಚೇತನ ಶಾಲೆ
ಪಟ್ಟಣದ ಹೂಗಾರ ಲೇಔಟ್‌ನಲ್ಲಿರುವ ವಿದ್ಯಾಚೇತನ ಶಾಲೆಯಲ್ಲಿ ಸಂವಿಧಾನ ಪೀಠಿಕೆ ದಿನವನ್ನು ಆವರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಕುಸುಮಾ ಯಾಳಗಿ, ಸಕ್ಕುಬಾಯಿ ಡಾಂಗಿ, ವಿಕಾಸ ಚೌರ, ಅಕ್ಷಯ ದೀಕ್ಷಾ, ಸುಮಾ ಬಿರಾದಾರ, ರೂಪಾ, ಪ್ರಗತಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.
ಕಾವ್ಯಾ ಶಿಕ್ಷಣ ಸಂಸ್ಥೆ
ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪಾರ್ಮಸಿ ಹಾಗೂ ಕಾವ್ಯಾ ಶಾಲೆಯಲ್ಲಿ ಸಂವಿಧಾನ ಪೀಠಿಕೆ ದಿನವನ್ನು ಆಚರಣೆ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಸಂದೀಪ, ಎಂ.ಎಂ. ಹಂಗರಗಿ, ಪಾಟೀಲ ಇಬ್ರಾಹಿಂಪೂರ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.