ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ದೇಶದ ಪ್ರತಿಯೊಬ್ಬ ನಾಗರಿಕನು ಸಂವಿಧಾನವನ್ನು ಅರಿಯುವುದು ಅಗತ್ಯವಾಗಿದೆ ಎಂದು ಪಿಯು ಪ್ರಥಮ ವರ್ಷದ ವಿದ್ಯಾರ್ಥಿ ಕಾಶಿನಾಥ ಬಳುಂಡಗಿ ಹೇಳಿದರು.
ಪಟ್ಟಣದ ರಾಂಪೂರ ಪಿಎ ರಸ್ತೆಯಲ್ಲಿರುವ ಪಿ.ಇ.ಎಸ್.ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ-ಪೂರ್ವ ಕಾಲೇಜಿನಲ್ಲಿ ಜರುಗಿದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕಾಶಿನಾಥ ಬಳುಂಡಗಿ ಸಹಮಿತ್ರರನ್ನು ಕುರಿತು ಮಾತನಾಡಿದರು.
ದೇಶದ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಅದನ್ನು ಅರಿತು ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಸಂವಿಧಾನವನ್ನು ಪಾಲಿಸಬೇಕಾದ ಜನಪ್ರತಿನಿಧಿಗಳು, ಅಧಿಕಾರಿಗಳು ಸಂವಿಧಾನದ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಸಮಾಜದಲ್ಲಿ ಅಸಮಾನತೆ, ಜಾತೀಯತೆ, ಭಿನ್ನತೆಗೆ ಕಾರಣವಾಗಿದೆ. ಇಂತಹ ಘಟನೆಗಳು ದೇಶದ ಏಕತೆಗೆ ಮಾರಕವಾಗುತ್ತಿವೆ. ವಿದ್ಯಾವಂತ ಯುವಪೀಳಿಗೆ ದೇಶದ ಸಂವಿಧಾನದ ಆಶಯಗಳನ್ನು ಈಡೇರಿಸಲು ಕಂಕಣಬದ್ಧರಾಗಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಆರ್.ಬಿ.ಗೋಡಕರ, ಗುರು ಕಡಣಿ, ಅಮೀರಬಾಷಾ ಮೋಪಗಾರ, ಮಹಾಂತೇಶ ದಂಡವತ, ಎಸ್.ಎಸ್.ಬಿರಾದಾರ, ಕೆ.ಎಚ್.ಸೋಮಾಪೂರ, ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರೇರಣಾ ಶಾಲೆ
ಪಟ್ಟಣದ ಹೊರವಲಯದ ಪ್ರೇರಣಾ ಶಾಲೆಯಲ್ಲಿ ಸಂವಿಧಾನ ಪೀಠಿಕೆ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಈ ವೇಳೆ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ, ನಿರ್ದೇಶಕ ಪಿ.ಡಿ. ಕುಲಕರ್ಣಿ, ಮುಖ್ಯ ಗುರಮಾತೆ ಎಸ್.ಐ ಅಸ್ಕಿ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು
ಶ್ರೀ ಪದ್ಮರಾಜ ಮಹಿಳಾ ಕಾಲೇಜು
ಪಟ್ಟಣದ ಶ್ರೀಪದ್ಮರಾಜ ಮಹಿಳಾ ಮಹಾವಿದ್ಯಾಲಯದಲ್ಲಿ ಸಂವಿಧಾನ ಪೀಠಿಕೆ ದಿನಾಚರಣೆ ಆಚರಣೆ ಮಾಡಲಾಯಿತು.
ಇದೇ ವೇಳೆ ಪದವಿ ಪ್ರಾಚಾರ್ಯ ಎಸ್.ಎಂ.ಪೂಜಾರಿ, ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎಸ್.ಕುಲಕರ್ಣಿ, ಎಸ್.ಸಿ.ದುದ್ದಗಿ, ಹೇಮಾ ಕಾಸರ, ಸತೀಶ ಕಕ್ಕಸಗೇರಿ, ಶಂಕರ ಕುಂಬಾರ, ವಿಜಯಲಕ್ಷ್ಮಿ ಭಜಂತ್ರಿ ಸೇರಿದಂತೆ ಅನೇಕರಿದ್ದರು.
ಆರ್.ಡಿ ಪಾಟೀಲ ಮಹಾವಿದ್ಯಾಲಯ
ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸಂವಿಧಾನ ಪೀಠಿಕೆ ದಿನಾಚರಣೆ ಆಚರಣೆ ಮಾಡಲಾಯಿತು.
ಈ ವೇಳೆ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪನ್ಯಾಸಕರಾದ ಪಿ.ವ್ಹಿ.ಮಹಲಿನಮಠ, ಬಿ.ಬಿ.ಜಮಾದಾರ, ಎನ್.ಬಿ.ಪೂಜಾರಿ, ವ್ಹಿ.ಪಿ.ನಂದಿಕೋಲ, ಶಿವಶರಣ ಬೂದಿಹಾಳ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ಡಾ.ಶರಣು ಜೋಗೂರ, ಶರಣು ಹೂಗಾರ, ಗವಿಸಿದ್ದಪ್ಪ ಆನೆಗುಂದಿ, ಎಸ್.ಜಿ.ಮಾರ್ಸನಳ್ಳಿ, ಪ್ರಸನ್ನಕುಮಾರ ಜೋಗೂರ ಸೇರಿದಂತೆ ಇನ್ನಿತರರು ಇದ್ದರು.
ವಿದ್ಯಾಚೇತನ ಶಾಲೆ
ಪಟ್ಟಣದ ಹೂಗಾರ ಲೇಔಟ್ನಲ್ಲಿರುವ ವಿದ್ಯಾಚೇತನ ಶಾಲೆಯಲ್ಲಿ ಸಂವಿಧಾನ ಪೀಠಿಕೆ ದಿನವನ್ನು ಆವರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಕುಸುಮಾ ಯಾಳಗಿ, ಸಕ್ಕುಬಾಯಿ ಡಾಂಗಿ, ವಿಕಾಸ ಚೌರ, ಅಕ್ಷಯ ದೀಕ್ಷಾ, ಸುಮಾ ಬಿರಾದಾರ, ರೂಪಾ, ಪ್ರಗತಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.
ಕಾವ್ಯಾ ಶಿಕ್ಷಣ ಸಂಸ್ಥೆ
ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪಾರ್ಮಸಿ ಹಾಗೂ ಕಾವ್ಯಾ ಶಾಲೆಯಲ್ಲಿ ಸಂವಿಧಾನ ಪೀಠಿಕೆ ದಿನವನ್ನು ಆಚರಣೆ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಸಂದೀಪ, ಎಂ.ಎಂ. ಹಂಗರಗಿ, ಪಾಟೀಲ ಇಬ್ರಾಹಿಂಪೂರ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

