ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದಲ್ಲಿ ಡಿ.೨ ರಂದು ನಡೆಯಲಿರುವ ಬಸವನಬಾಗೇವಾಡಿ ತಾಲೂಕಿನ ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಜಾಗೃತಿ ಮೂಡಿಸುವ ಬರಹವನ್ನು ಕಲಾ ಶಿಕ್ಷಕ ಗುರಲಿಂಗ ಸಬರದ ಅವರು ಬರೆಯುವ ಕಾರ್ಯದಲ್ಲಿ ಮಂಗಳವಾರ ತೊಡಗಿರುವದು ಕಂಡುಬಂದಿತ್ತು.
ಈ ಸಂದರ್ಭದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ಕೊಟ್ರೇಶ ಹೆಗ್ಡಾಳ, ಸಿದ್ದಪ್ಪ ಅವಜಿ, ಎ.ಎಂ.ಉಪಾಧ್ಯೆ, ಎಸ್.ಆರ್.ಮಠ, ಬಿ.ವ್ಹಿ.ಚಕ್ರಮನಿ ಇತರರು ಇದ್ದರು.

