Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನದಲ್ಲಿ ಗುರಿ ಹೊಂದಿದಾಗ ಮಾತ್ರ ಸಾಧನೆ ಸಾಧ್ಯ
(ರಾಜ್ಯ ) ಜಿಲ್ಲೆ

ಜೀವನದಲ್ಲಿ ಗುರಿ ಹೊಂದಿದಾಗ ಮಾತ್ರ ಸಾಧನೆ ಸಾಧ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜೀವನದಲ್ಲಿ ಪ್ರತಿಯೊಬ್ಬರು ಗುರಿಯನ್ನಿಟ್ಟುಕೊಳ್ಳಬೇಕು. ಗುರಿ ಹೊಂದಿದಾಗ ಮಾತ್ರ ಏನನ್ನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜೀವನದಲ್ಲಿನ ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಕರೆ ನೀಡಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತ್ಯಂತ ಶಿಸ್ತು ಪ್ರದರ್ಶಿಸುವ ಕಾರ್ಯಕ್ರಮ ಇದಾಗಿದೆ. ಒಬ್ಬ ಮಹಿಳೆಯಾಗಿ, ತಾಯಿಯಾಗಿ, ರೈತನ ಮಗಳಾಗಿ ನಾನು ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡಿದ್ದೇನೆ. ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ, ಇಂದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಿ, ಸರ್ಕಾರದಲ್ಲಿ ಸಚಿವೆಯಾಗಿದ್ದೇನೆ ಎಂದು ಹೇಳಿದರು.
ಒಂದು ಕಾಲದಲ್ಲಿ ಮಹಿಳೆ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತ ಎಂಬುದಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ಮಹಿಳೆ ಇಂದಿನ ದಿನಗಳಲ್ಲಿ ಅಬಲೆಯಲ್ಲ-ಸಬಲೆ ಎಂಬುದು ಸಾಬೀತಾಗಿದೆ. ಮಹಿಳೆಯರು ಸಾಧನೆ ಮಾಡದ ಯಾವುದೇ ಕ್ಷೇತ್ರ ಇಂದು ಉಳಿದಿಲ್ಲ. ಶೈಕ್ಷಣಿಕ, ಕ್ರೀಡಾ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರ ಸೇರಿದಂತೆ ಪ್ರತಿಯೊಂದು ಕ್ಷೇತ್ರಗಳಲ್ಲಿ-ರಂಗಗಳಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ. ವಿವಿಧ ಮಹನೀಯರ ಸಾಧನೆಗಳಿಂದ ಪ್ರೇರಣೆ ಪಡೆದು ನೀವು ಸಹ ಉತ್ತಮ ಗುರಿಯನ್ನಿಟ್ಟುಕೊಂಡು ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ಶಕ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ರಾಜ್ಯದ 30 ಮಹಾವಿದ್ಯಾಲಯಗಳಿಂದ 600 ವಿದ್ಯಾರ್ಥಿನಿಯರು ತಮ್ಮ ಸೃಜನಾತ್ಮಕ ಕಲೆಗಳನ್ನು ಈ ವೇದಿಕೆ ಮೂಲಕ ಪ್ರಸ್ತುತ ಪಡಿಸಲಿದ್ದಾರೆ. ಹಿಂದೂಸ್ತಾನಿ ಕರ್ನಾಟಕ ಶಾಸ್ತ್ರೀಯ ಸಂಗೀತ, ವಿವಿಧ ವಾದ್ಯಗಳ ಸ್ಪರ್ಧೆ, ತಾಳ ವಾದ್ಯ, ಲಘು ಗಾಯನ, ಪಾಶ್ಚಾತ ಸಂಗೀತ, ಸಮೂಹ ಗಾಯನ, ಜಾನಪದ, ಪಾಶ್ಚಿಮಾತ್ಯ ವಾದ್ಯ ಸಂಗೀತ, ನೃತ್ಯ, ಸಾಹಿತ್ಯ ಚಟುವಟಿಕೆ, ರಂಗಭೂಮಿ, ಕಲೆ, ಚಿತ್ರಕಲೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.
ತೊರವಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪದ್ಮಾಬಾಯಿ ನಡಗಡ್ಡಿ, ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವರಾದ ಎಚ್.ಎಂ.ಚಂದ್ರಶೇಖರ, ವಿದ್ಯಾರ್ಥಿನಿ ಕ್ಷೇಮ ಪಾಲನಾ ನಿರ್ದೇಶನಾಲಯದ ನಿರ್ದೇಶಕರಾದ ಪ್ರೊ.ಶಾಂತಾದೇವಿ, ಸಿಂಡಿಕೇಟ್ ಮತ್ತು ಅಕಾಡೆಮಿ ಕೌನ್ಸಿಲ್ ಸದಸ್ಯರು, ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

“ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ತಮ್ಮ ಸೃಜನಶೀಲತೆ ಕಲೆಗಳನ್ನು ಅನಾವರಣಗೊಳಿಸುವ ವೇದಿಕೆಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.”

– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ

“ಶಿಕ್ಷಣದ ಮೂಲಕ ಸಬಲೀಕರಣ, ಆ ಮೂಲಕ ಸ್ವಾವಲಂಬಿ, ಸ್ವಾಭಿಮಾನದ ಜೀವನ ಕಟ್ಟಿಕೊಂಡು ಈ ಸಮಾಜಕ್ಕೆ ಆದರ್ಶ ಮಹಿಳೆಯನ್ನು ನೀಡುವುದು ವಿಶ್ವವಿದ್ಯಾಲಯದ ಮುಖ್ಯ ಧ್ಯೇಯವಾಗಿದೆ. ಇದಕ್ಕೆ ಪೂರಕವಾಗಿ ವಿಶ್ವವಿದ್ಯಾಲಯವು ಹಲವಾರು ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸುತ್ತಿದೆ. ಸಮಾಜ ಕಾರ್ಯ, ಎನ್‍ಸಿಸಿ, ಎನ್‍ಎಸ್‍ಎಸ್ ಸೇರಿದಂತೆ ವಿವಿಧ ನಿಕಾಯಗಳ ಮೂಲಕ ಸಮಗ್ರ, ಸಂತುಲಿತ ವ್ಯಕ್ತಿತ್ವ ವಿಕಸನಕ್ಕೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಇದರ ಭಾಗವಾಗಿ ಶಕ್ತಿ ಸಂಭ್ರಮ ಎಂಬ ವಿದ್ಯಾರ್ಥಿನಿಯರ ಸುಪ್ತವಾಗಿ ಹುದುಗಿರುವ ಕಲೆಗಳನ್ನು ಅನಾವರಣಗೊಳಿಸುವ ವೇದಿಕೆಯನ್ನು ಕಲ್ಪಿಸಿದೆ.”

– ಪ್ರೊ.ಬಿ.ಕೆ.ತುಳಸಿಮಾಲ
ಕುಲಪತಿಗಳು, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.