Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಾಡೋದು ಗ್ಯಾರಂಟಿ :ಸುಣಗಾರ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಾಡೋದು ಗ್ಯಾರಂಟಿ :ಸುಣಗಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸುಭದ್ರ ಸರಕಾರ ರಚನೆಗೆ ಕ್ಷೇತ್ರದ ಮತದಾರ ಪ್ರಭುಗಳು ಬೆಂಬಲಿಸಿ ಆಶೀರ್ವಾದ ಮಾಡಬೇಕು. ಉತ್ತಮ ಆಡಳಿತಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ ಮನವಿ ಮಾಡಿದರು.
ದೇವರಹಿಪ್ಪರಗಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮಗಳಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸ್ವಯಂಪ್ರೇರಣೆಯಿAದ ಪಕ್ಷದ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳೆಲ್ಲ ಮುಂದಾಳತ್ವ ವಹಿಸಿ ಪ್ರತಿಯೊಂದು ಸಮುದಾಯದ ಮತ ಪಡೆಯುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಡೀ ಕ್ಷೇತ್ರದ ಜನ ಹೋದಲ್ಲಿ ಪ್ರೀತಿ ವಿಶ್ವಾಸ, ಅಭಿಮಾನದಿಂದ ಬರಮಾಡಿಕೊಂಡು ಶುಭ ಹರಸುತ್ತಿದ್ದಾರೆ. ಅದಕ್ಕಾಗಿ ಈ ಸಲ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಾಡುವುದು ಗ್ಯಾರಂಟಿಯಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದು ಕ್ಷೇತ್ರದ ಅಭಿವೃದ್ದಿಗೆ ಕಾಂಗ್ರೆಸ್‌ಗೆ ಮತ ನೀಡಿ, ಪ್ರತಿಯೊಬ್ಬರು ಬೆಂಬಲಿಸಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಕೆಪಿಸಿಸಿ ಸದಸ್ಯ ಬಿ ಎಸ್ ಪಾಟೀಲ ಯಾಳಗಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ ಮಾತನಾಡಿ, ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ. ಈ ಸಲ ಕಾಂಗ್ರೆಸ್ ಗಾಳಿ ಬೀಸುತ್ತಿದ್ದು, ಉತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪ್ರತಿಯೊಬ್ಬರು ಕಾಂಗ್ರೆಸ್ ಬೆಂಬಲಿಸಿ ನಮ್ಮ ಅಭ್ಯರ್ಥಿ ಶರಣಪ್ಪ ಸುಣಗಾರ ಇವರನ್ನು ಗೆಲ್ಲಿಸಬೇಕೆಂದು ವಿನಂತಿಸಿದರು.
ಹುಣಶ್ಯಾಳ, ಆಲಗೂರ, ಯಲಗೋಡ, ವಂದಾಲ, ಕದರಾಪೂರ, ಸಲಾದಹಳ್ಳಿ, ಚಟ್ನಳ್ಳಿ, ಆನೆಮಡು, ಹಾಳಗುಂಡಕನಾಳ, ಬೂದಿಹಾಳ ಸೇರಿದಂತೆ ಹತ್ತಾರು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಆನಂದಗೌಡ ದೊಡ್ಡಮನಿ, ಡಾ. ಪ್ರಭುಗೌಡ ಲಿಂಗದಳ್ಳಿ, ಡಾ. ನಂದಕುಮಾರ ಭೈರಿ, ಮಲ್ಲನಗೌಡ ಬಿರಾದಾರ, ಕೆಸರಟ್ಟಿ, ಬ್ಲಾಕ್ ಅಧ್ಯಕರಾದ ಬಶೀರಹಮ್ಮದ ಬೇಪಾರಿ, ಬಾಳನಗೌಡ ಪಾಟೀಲ ಸಾತಿಹಾಳ ಸರಿತಾ ನಾಯಿಕ, ಲಲಿತಾ ದೊಡ್ಡಮನಿ, ಮೈನುದ್ದೀನ ಬಾಗವಾನ ಸೇರಿದಂತೆ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.

congress devara hippargai sunagar udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.