Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಯಲ್ಲಿ ಹೋರಾಟಕ್ಕಿಂತ ಭಿನ್ನಮತದ್ದೇ ಹೆಚ್ಚು ಸದ್ದು
(ರಾಜ್ಯ ) ಜಿಲ್ಲೆ

ಬಿಜೆಪಿಯಲ್ಲಿ ಹೋರಾಟಕ್ಕಿಂತ ಭಿನ್ನಮತದ್ದೇ ಹೆಚ್ಚು ಸದ್ದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಬಣ ಸಂಘರ್ಷಕ್ಕೆ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಬೇಸರ | ಯತ್ನಾಳ್ & ಜಾರಕಿಹೊಳಿ ವಿರುದ್ಧ ಕಿಡಿ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಬಿಜೆಪಿ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಹಾಗೂ ನೋವಿನ ಸಂಗತಿ ಎಂದು ರಾಜ್ಯದ ಬಿಜೆಪಿಯ‌ ಬಣ ಸಂಘರ್ಷಕ್ಕೆ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ಒಂದು ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕರ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ. ಈ ಬಗ್ಗೆ ಹೈಕಮಾಂಡ್ ಗೆ ಎರಡು ಬಾರಿ ಪತ್ರ ಬರೆದರೂ ಅವರು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಹೇಳಿದರು.
ತಮ್ಮ ಪತ್ರಗಳ ಹೊರತಾಗಿಯೂ ಪಕ್ಷದ ಹೈಕಮಾಂಡ್ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರಲ್ಲದೇ ಇನ್ನು ಮುಂದಾದರೂ ಪಕ್ಷದೊಳಗಿನ ಗುಂಪುಗಾರಿಕೆ ಬಗ್ಗೆ ಹೈಕಮಾಂಡ್‌ನ ಮೌನ ಮುರಿಯಬೇಕು ಎಂದು ಒತ್ತಾಯಿಸಿದ್ದಾರೆ.
ನಾನು ಎರಡು ಪತ್ರಗಳನ್ನು ಬರೆದಿದ್ದೇನೆ, ಆದರೆ ಎರಡು ಪತ್ರಕ್ಕೂ ಉತ್ತರವಿಲ್ಲ, ಕೇಂದ್ರ ನಾಯಕತ್ವವು ಇಲ್ಲಿನ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ. ದಕ್ಷಿಣ ಭಾರತಕ್ಕೆ ಬಿಜೆಪಿಯ ಹೆಬ್ಬಾಗಿಲು ಎಂದು ಪರಿಗಣಿಸಲ್ಪಟ್ಟಿರುವ ಕರ್ನಾಟಕವು ಇಂದು ಹಲವಾರು ಬಾಗಿಲುಗಳನ್ನು ಹೊಂದಿದೆ (ಒಳಗಿನ ಗುಂಪುಗಳನ್ನು ಉಲ್ಲೇಖಿಸಿ) ಇದು ದೊಡ್ಡ ದುರಂತ ಎಂದು ಅವರು ಹೇಳಿದರು.
ಕರ್ನಾಟಕ ಬಿಜೆಪಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಕ್ಷದೊಳಗಿನ ಆಂತರಿಕ ಗೊಂದಲಗಳು ಬೀದಿಗೆ ಬಂದಿರುವುದು ನೋವಿನ ಸಂಗತಿ. ಪರಿಸ್ಥಿತಿಯನ್ನು ಸರಿಮಾಡಲು, ನಾನು ಸೇರಿದಂತೆ ರಾಜ್ಯದಲ್ಲಿ ಪಕ್ಷದ ಹಿರಿಯ ನಾಯಕರೆಂದು ಕರೆಸಿಕೊಳ್ಳುವ ಯಾರೊಬ್ಬರೂ ಇಲ್ಲಿಲ್ಲ. ಕೆಲವರು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತಿಲ್ಲ, ಹೀಗಾಗಿ ಹೈಕಮಾಂಡ್ ಮಧ್ಯಪ್ರವೇಶಿಸಬೇಕು ಎಂದು ಅವರು ಹೇಳಿದರು.
ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಿಗೆ ‘ಚಿನ್ನದ ಬಟ್ಟಲಿನಲ್ಲಿ’ ವಿಷಯಗಳನ್ನು ನೀಡುತ್ತಿದ್ದರೂ, ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು ಅದನ್ನು ಮರೆಮಾಚುತ್ತಿವೆ ಮತ್ತು ಇದು ಪಕ್ಷದ ಕಾರ್ಯಕರ್ತರಿಗೆ ನೋವುಂಟು ಮಾಡಿದೆ ಎಂದು ಮಾಜಿ ಸಿಎಂ ಹೇಳಿದರು.

ಮಾಜಿ ಸಿಎಂ ಬೇಸರ

ರಾಜ್ಯದ ಜನರು ಬಿಜೆಪಿಯನ್ನು ಬಯಸುತ್ತಿದ್ದಾರೆ. ಶಿಗ್ಗಾಂವ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಪ್ರಸ್ತಾಪಿಸಿದ ಗೌಡರು, ಜನರು ಕಾಂಗ್ರೆಸ್‌ನ ದುರಾಡಳಿತದ ಬಗ್ಗೆ ಚರ್ಚಿಸುತ್ತಿಲ್ಲ, ಆದರೆ ಬಿಜೆಪಿಯಲ್ಲಿನ ವಿಭಜನೆ ಮತ್ತು ಗುಂಪುಗಾರಿಕೆಯ ಬಗ್ಗೆ ಚರ್ಚಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸದಾನಂದಗೌಡ ಬೇಸರ ವ್ಯಕ್ತ ಪಡಿಸಿದರು.

ಯತ್ನಾಳ್ & ಜಾರಕಿಹೊಳಿ ವಿರುದ್ಧ ಡಿವಿಎಸ್ ಕಿಡಿ

ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದ್ದು ಹೈಕಮಾಂಡ್, ಅವರನ್ನ ವಿರೋಧ ಮಾಡುವವರು ದೆಹಲಿಗೆ ಹೋಗಿ ಮಾತನಾಡಬೇಕು. ಅದು ಬಿಟ್ಟು ಬೀದರ್ ನಲ್ಲಿ ನಿಂತು ತಮಟೆ ಬಾರಿಸುತ್ತಿದ್ದಾರೆ. ಅವರು ಎಲ್ಲರು ಹೈಕಮಾಂಡ್ ಗೆ ಹತ್ತಿರ ಇರೋರೇ. ಈಗ ಬೀದಿಯಲ್ಲಿ ಮಾತನಾಡ್ತಿದ್ದಾರೆ ಅಂದರೆ ಅವರು ಯೋಗ್ಯರಲ್ಲ ಎಂದು ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ವಿರುದ್ಧ ಡಿವಿಎಸ್ ಕಿಡಿಕಾರಿದರು.
ಯತ್ನಾಳ್ ಮತ್ತು ಜಾರಕಿಹೊಳಿ ಅವರು ವಿಜಯೇಂದ್ರ ಅವರನ್ನು ಬಹಿರಂಗವಾಗಿ ಟೀಕಿಸಿದ್ದಾರೆ, ಅವರು ಆಡಳಿತಾರೂಢ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಮಾಜಿ ಸಿಎಂ ಸದಾನಂದಗೌಡ ಆರೋಪಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.