Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 24, 2026

ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಡ ಗ್ರಾ.ಪಂ ಅಧ್ಯಕ್ಷರ ವಿರುಧ್ದ ಅವಿಶ್ವಾಸ ನಿಲುವಳಿಗೆ ಜಯ
(ರಾಜ್ಯ ) ಜಿಲ್ಲೆ

ಚಿಮ್ಮಡ ಗ್ರಾ.ಪಂ ಅಧ್ಯಕ್ಷರ ವಿರುಧ್ದ ಅವಿಶ್ವಾಸ ನಿಲುವಳಿಗೆ ಜಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೨೮ ಜನ ಸದಸ್ಯರಲ್ಲಿ ೧೯ ಸದಸ್ಯರು ನಿಲುವಳಿ ಪರ ಮತದಾನ | ತೀವ್ರ ಬಂದೋಬಸ್ತ | ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ತೀವೃ ಕುತೂಹಲ ಕೆರಳಿಸಿದ್ದ ಇಲ್ಲಿನ ಗ್ರಾ.ಪಂ. ಅಧ್ಯಕ್ಷೆ ಮಾಲಾ ಅಶೋಕ ಮೋಟಗಿಯವರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ನಿಲುವಳಿಗೆ ಜಯ ದೊರೆತಿದ್ದು ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.
ಸ್ಥಳಿಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಉಪ-ವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅಧ್ಯಕ್ಷತೆಯಲ್ಲಿ ಶನಿವಾರ ಮುಂಜಾನೆ ನಡೆದ ಗ್ರಾ.ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ಪರ್ಯಾಲೋಚನಾ ಸಭೆಯಲ್ಲಿ ಗ್ರಾ.ಪಂ. ಒಟ್ಟು ೨೮ ಜನ ಸದಸ್ಯರಲ್ಲಿ ೨೩ ಜನ ಸದಸ್ಯರು ಹಾಜರಿದ್ದು ೧೯ ಜನ ಸದಸ್ಯರು ನಿಲುವಳಿ ಪರ ಮತದಾನ ಮಾಡಿದರೆ ನಾಲ್ವರು ವಿರುದ್ದ ಮತ ನೀಡಿದರು. ನಿಲುವಳಿಗೆ ಅಗತ್ಯವಿದ್ದ (೨/೩ ಅನುಪಾತದಂತೆ) ೧೯ ಜನ ಸದಸ್ಯರು ಅವಿಶ್ವಾಸ ಮಂಡನೆಯ ಪರ ಮತ ನೀಡಿದ್ದರಿಂದ ಉಪ-ವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸದರೀ ಅಧ್ಯಕ್ಷರು ಸದಸ್ಯರ ವಿಶ್ವಾಸ ಕಳೆದುಕೊಂಡಿದ್ದು ಅವರು ಅಧ್ಯಕ್ಷರಾಗಿ ಮುಂದುವರಿಯುವಂತಿಲ್ಲವೆಂದು ಘೋಷಿಸಿದರು. ರಬಕವಿ-ಬನಹಟ್ಟಿ ತಹಶೀಲ್ದಾರ ಗಿರೀಶ ಸ್ವಾದಿ, ಉಪ ತಹಶೀಲ್ದಾರ ಸಂತೋಷ ರಬಕವಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪಾ ಪಟ್ಟಿಹಾಳ, ಕಂದಾಯ ನಿರೀಕ್ಷಕ ಎಂ.ಐ ಮಠಪತಿ, ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ, ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ ನೀಲನ್ನವರ ಉಪಸ್ಥಿತರಿದ್ದರು
ತೀವೃ ಬಂದೋಬಸ್ತ; ಚಿಮ್ಮಡ ಗ್ರಾ.ಪಂ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ದ ಅವಿಶ್ವಾಸ ಮಂಡನೆಯಾಗಿದ್ದು ತೀವೃ ಬಂದೋಬಸ್ತ ಏರ್ಪಡಿಸಲಾಗಿತ್ತು. ಬನಹಟ್ಟಿ ಸಿಪಿಐ ಸಂಜೀವ ಬಳಗಾರ, ಮುಧೋಳ ಸಿಪಿಐ ಮಹಾದೇವ ಶಿರಹಟ್ಟಿ, ಜಮಖಂಡಿ ಸಿಪಿಐ ಮಲ್ಲಪ್ಪಾ ಮಡ್ಡಿ ಬನಹಟ್ಟಿ ಠಾಣಾಧಿಕಾರಿ ಶಾಂತಾ ಹಳ್ಳಿ ಸೇರಿದಂತೆ ಮುಧೋಳ, ಜಮಖಂಡಿ, ತೇರದಾಳ, ಸಾವಳಗಿ ಮಹಾಲಿಂಗಪೂರ ಠಾಣಾಧಿಕಾರಿಗಳೊಂದಿಗೆ ನೂರಾರು ಜನ ಪೋಲಿಸ್ ಸಿಬ್ಬಂದಿಗಳಿಂದ ಗ್ರಾಮ ಪಂಚಾಯತಿ ಸುತ್ತ ತೀವೃ ಭದ್ರತೆ ನೀಡಲಾಗಿತ್ತು. ಅಲ್ಲದೇ ೨೦ಕ್ಕೂ ಹೆಚ್ಚು ಖಾಸಗೀ ಅಂಗರಕ್ಷಕ ಪಡೆಯನ್ನು ಗ್ರಾ.ಪಂ. ಸದಸ್ಯರು ತಮ್ಮ ರಕ್ಷಣೆಗೆ ಕರೆತಂದಿದ್ದರು.
ಅವಿಶ್ವಾಸ ಮಂಡನೆಗೆ ಜಯ ಸಿಗುತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಗ್ರಾಮದ ಹಲವೆಡೆ ಗುಲಾಲು, ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು
ವಿಜಯೋತ್ಸವದಲ್ಲಿ ಜಿ.ಪಂ. ಮಾಜಿ ಸದಸ್ಯ ಬಾಬಾಗೌಡ ಪಾಟೀಲ, ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಶಂಕರ ಬಟಕುರ್ಕಿ. ಪರಪ್ಪಾ ಪಾಲಭಾವಿ, ಬೀರಪ್ಪಾ ಹಳೆಮನಿ, ಪರಪ್ಪಾ ನೇಸೂರ, ಬಸವರಾಜ ಕುಂಚನೂರ, ವಿಜಯಕುಮಾರ ಪೂಜಾರಿ, ತಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಆನಂದ ಕವಟಿ, ಪ್ರಕಾಶ ಪಾಟೀಲ, ಮನೋಜ ಹಟ್ಟಿ ಸೇರಿದಂತೆ ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 24, 2026

ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ

ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 24, 2026
    In ದಿನಪತ್ರಿಕೆ
  • ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿಗೆ ಕ್ರಮ ಕೈಕೊಳ್ಳಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಮಗ್ರ ಬೆಳವಣಿಗೆಗೆ ಕೈಜೋಡಿಸಿ :ಡಿಸಿ ಡಾ.ಆನಂದ.ಕೆ
    In (ರಾಜ್ಯ ) ಜಿಲ್ಲೆ
  • ಹೆಚ್ಚಿನ ಬೆಲೆಗೆ ರಸಗೊಬ್ಬರಮಾರಾಟ :ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಗಂಗಾ ಕೊಳೂರಗೆ ಶಾಸಕರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಮತೆ, ಮಮಕಾರದ ಮಾತೃ ಸ್ವರೂಪಿ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.