Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂದು “ತನು ಕನ್ನಡ ಮನ ಕನ್ನಡ” ಪ್ರಶಸ್ತಿ ಪ್ರದಾನ ಸಮಾರಂಭ

ಮಾದಕ ದ್ರವ್ಯಗಳ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ

ಶ್ರೀಶೈಲಗೌಡ ರ ಮೆದು ನುಡಿಗಳಂತೆ ಅವರ ನಡೆಯೂ ಸಹ ಶುಭ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಡ ಗ್ರಾ.ಪಂ ಅಧ್ಯಕ್ಷರ ವಿರುಧ್ದ ಅವಿಶ್ವಾಸ ನಿಲುವಳಿಗೆ ಜಯ
(ರಾಜ್ಯ ) ಜಿಲ್ಲೆ

ಚಿಮ್ಮಡ ಗ್ರಾ.ಪಂ ಅಧ್ಯಕ್ಷರ ವಿರುಧ್ದ ಅವಿಶ್ವಾಸ ನಿಲುವಳಿಗೆ ಜಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೨೮ ಜನ ಸದಸ್ಯರಲ್ಲಿ ೧೯ ಸದಸ್ಯರು ನಿಲುವಳಿ ಪರ ಮತದಾನ | ತೀವ್ರ ಬಂದೋಬಸ್ತ | ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ತೀವೃ ಕುತೂಹಲ ಕೆರಳಿಸಿದ್ದ ಇಲ್ಲಿನ ಗ್ರಾ.ಪಂ. ಅಧ್ಯಕ್ಷೆ ಮಾಲಾ ಅಶೋಕ ಮೋಟಗಿಯವರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ನಿಲುವಳಿಗೆ ಜಯ ದೊರೆತಿದ್ದು ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.
ಸ್ಥಳಿಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಉಪ-ವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅಧ್ಯಕ್ಷತೆಯಲ್ಲಿ ಶನಿವಾರ ಮುಂಜಾನೆ ನಡೆದ ಗ್ರಾ.ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ಪರ್ಯಾಲೋಚನಾ ಸಭೆಯಲ್ಲಿ ಗ್ರಾ.ಪಂ. ಒಟ್ಟು ೨೮ ಜನ ಸದಸ್ಯರಲ್ಲಿ ೨೩ ಜನ ಸದಸ್ಯರು ಹಾಜರಿದ್ದು ೧೯ ಜನ ಸದಸ್ಯರು ನಿಲುವಳಿ ಪರ ಮತದಾನ ಮಾಡಿದರೆ ನಾಲ್ವರು ವಿರುದ್ದ ಮತ ನೀಡಿದರು. ನಿಲುವಳಿಗೆ ಅಗತ್ಯವಿದ್ದ (೨/೩ ಅನುಪಾತದಂತೆ) ೧೯ ಜನ ಸದಸ್ಯರು ಅವಿಶ್ವಾಸ ಮಂಡನೆಯ ಪರ ಮತ ನೀಡಿದ್ದರಿಂದ ಉಪ-ವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸದರೀ ಅಧ್ಯಕ್ಷರು ಸದಸ್ಯರ ವಿಶ್ವಾಸ ಕಳೆದುಕೊಂಡಿದ್ದು ಅವರು ಅಧ್ಯಕ್ಷರಾಗಿ ಮುಂದುವರಿಯುವಂತಿಲ್ಲವೆಂದು ಘೋಷಿಸಿದರು. ರಬಕವಿ-ಬನಹಟ್ಟಿ ತಹಶೀಲ್ದಾರ ಗಿರೀಶ ಸ್ವಾದಿ, ಉಪ ತಹಶೀಲ್ದಾರ ಸಂತೋಷ ರಬಕವಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪಾ ಪಟ್ಟಿಹಾಳ, ಕಂದಾಯ ನಿರೀಕ್ಷಕ ಎಂ.ಐ ಮಠಪತಿ, ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ, ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ ನೀಲನ್ನವರ ಉಪಸ್ಥಿತರಿದ್ದರು
ತೀವೃ ಬಂದೋಬಸ್ತ; ಚಿಮ್ಮಡ ಗ್ರಾ.ಪಂ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ದ ಅವಿಶ್ವಾಸ ಮಂಡನೆಯಾಗಿದ್ದು ತೀವೃ ಬಂದೋಬಸ್ತ ಏರ್ಪಡಿಸಲಾಗಿತ್ತು. ಬನಹಟ್ಟಿ ಸಿಪಿಐ ಸಂಜೀವ ಬಳಗಾರ, ಮುಧೋಳ ಸಿಪಿಐ ಮಹಾದೇವ ಶಿರಹಟ್ಟಿ, ಜಮಖಂಡಿ ಸಿಪಿಐ ಮಲ್ಲಪ್ಪಾ ಮಡ್ಡಿ ಬನಹಟ್ಟಿ ಠಾಣಾಧಿಕಾರಿ ಶಾಂತಾ ಹಳ್ಳಿ ಸೇರಿದಂತೆ ಮುಧೋಳ, ಜಮಖಂಡಿ, ತೇರದಾಳ, ಸಾವಳಗಿ ಮಹಾಲಿಂಗಪೂರ ಠಾಣಾಧಿಕಾರಿಗಳೊಂದಿಗೆ ನೂರಾರು ಜನ ಪೋಲಿಸ್ ಸಿಬ್ಬಂದಿಗಳಿಂದ ಗ್ರಾಮ ಪಂಚಾಯತಿ ಸುತ್ತ ತೀವೃ ಭದ್ರತೆ ನೀಡಲಾಗಿತ್ತು. ಅಲ್ಲದೇ ೨೦ಕ್ಕೂ ಹೆಚ್ಚು ಖಾಸಗೀ ಅಂಗರಕ್ಷಕ ಪಡೆಯನ್ನು ಗ್ರಾ.ಪಂ. ಸದಸ್ಯರು ತಮ್ಮ ರಕ್ಷಣೆಗೆ ಕರೆತಂದಿದ್ದರು.
ಅವಿಶ್ವಾಸ ಮಂಡನೆಗೆ ಜಯ ಸಿಗುತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಗ್ರಾಮದ ಹಲವೆಡೆ ಗುಲಾಲು, ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು
ವಿಜಯೋತ್ಸವದಲ್ಲಿ ಜಿ.ಪಂ. ಮಾಜಿ ಸದಸ್ಯ ಬಾಬಾಗೌಡ ಪಾಟೀಲ, ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಶಂಕರ ಬಟಕುರ್ಕಿ. ಪರಪ್ಪಾ ಪಾಲಭಾವಿ, ಬೀರಪ್ಪಾ ಹಳೆಮನಿ, ಪರಪ್ಪಾ ನೇಸೂರ, ಬಸವರಾಜ ಕುಂಚನೂರ, ವಿಜಯಕುಮಾರ ಪೂಜಾರಿ, ತಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಆನಂದ ಕವಟಿ, ಪ್ರಕಾಶ ಪಾಟೀಲ, ಮನೋಜ ಹಟ್ಟಿ ಸೇರಿದಂತೆ ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂದು “ತನು ಕನ್ನಡ ಮನ ಕನ್ನಡ” ಪ್ರಶಸ್ತಿ ಪ್ರದಾನ ಸಮಾರಂಭ

ಮಾದಕ ದ್ರವ್ಯಗಳ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ

ಶ್ರೀಶೈಲಗೌಡ ರ ಮೆದು ನುಡಿಗಳಂತೆ ಅವರ ನಡೆಯೂ ಸಹ ಶುಭ್ರ

ಮಕ್ಕಳ ಸೃಜನಶೀಲ ವ್ಯಕ್ತಿತ್ವ ರೂಪಿಸುವಲ್ಲಿ ಅಕಾಡೆಮಿ ಪಾತ್ರ ಅನನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂದು “ತನು ಕನ್ನಡ ಮನ ಕನ್ನಡ” ಪ್ರಶಸ್ತಿ ಪ್ರದಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯಗಳ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಗೌಡ ರ ಮೆದು ನುಡಿಗಳಂತೆ ಅವರ ನಡೆಯೂ ಸಹ ಶುಭ್ರ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸೃಜನಶೀಲ ವ್ಯಕ್ತಿತ್ವ ರೂಪಿಸುವಲ್ಲಿ ಅಕಾಡೆಮಿ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
  • ಸೋಮದೇವರಹಟ್ಟಿ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇಗುಲ
    In (ರಾಜ್ಯ ) ಜಿಲ್ಲೆ
  • ಆರೋಗ್ಯಪೂರ್ಣ ಪರಿಸರಕ್ಕೆ ವಿಜ್ಞಾನ-ತಂತ್ರಜ್ಞಾನ & ಸಹಾನುಭೂತಿ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ
    In ವಿಶೇಷ ಲೇಖನ
  • ವಿಜಯಪುರ ಜಿಲ್ಲೆಗೆ ರಾಷ್ಟ್ರೀಯ ಪುರಸ್ಕಾರ :ಸಚಿವ ಎಂ.ಬಿ.ಪಾಟೀಲ ಸಂತಸ
    In (ರಾಜ್ಯ ) ಜಿಲ್ಲೆ
  • ಕೆಂಭಾವಿ: ತಿಮ್ಮಕ್ಕನ ಸ್ಮರಣಾರ್ಥ ಸಸಿ ನೆಟ್ಟು ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.