Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ದತೆ: ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ :ನ್ಯಾಮಗೌಡ
(ರಾಜ್ಯ ) ಜಿಲ್ಲೆ

ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ದತೆ: ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ :ನ್ಯಾಮಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹರಳಯ್ಯ ಪ್ರೌಢಶಾಲೆಗೆ ವಿಷಯ ಪರಿವೀಕ್ಷಕರ ಅನಿರೀಕ್ಷಿತ ಭೇಟಿ | ಎಸ್ಸೆಸ್ಸೆಲ್ಸಿ ಮಕ್ಕಳ ಜೊತೆ ಸಂವಾದ | ಬದ್ದತೆಯಿಂದ ಪರೀಕ್ಷೆ ಎದುರಿಸಲು ಸಲಹೆ

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಪ್ರಸ್ತುತ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ತಯಾರಿಗೆ ಮಕ್ಕಳು ಈಗಿಂದಲೇ ಮಾನಸಿಕವಾಗಿ ಸಿದ್ದತೆಗೊಳ್ಳಬೇಕು. ಆ ದಿಸೆಯಲ್ಲಿ ಎಲ್ಲ ಎಸ್ಸೆಸ್ಸೆಲ್ಸಿ ಮಕ್ಕಳನ್ನು ಪರೀಕ್ಷಾ ಮುಖ್ಯ ವಾಹಿನಿಗೆ ತರಲು ಶಿಕ್ಷಕರು ಪ್ರಯತ್ನಿಸಬೇಕಲ್ಲದೇ ಫಲಿತಾಂಶ ಸುಧಾರಣೆಗೆ ನಿರಂತರ ಶ್ರಮ ವಹಿಸಬೇಕು ಎಂದು ಬಾಗಲಕೋಟೆ ಶಾಲಾ ಶಿಕ್ಷಣ ಇಲಾಖೆ ಉಪನಿದೇ೯ಶಕರ ಕಚೇರಿಯ ವಿಷಯ ಪರಿವೀಕ್ಷಕ ಎಂ.ಎಸ್.ನ್ಯಾಮಗೌಡ ಸಲಹೆಯಿತ್ತರು.
ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಗೆ ಶುಕ್ರವಾರ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿ ಮಕ್ಕಳ ಜೊತೆಗೆ ಪರೀಕ್ಷಾ ಪೂರ್ವ ತಯಾರಿ ಹಾಗೂ ಪಠ್ಯ ವಿಷಯ ಕುರಿತು ಸಂವಾದ ನಡೆಸಿದ ಅವರು, ಪರೀಕ್ಷೆಗೆ ಸಿದ್ದರಾಗಲು ಈಗಿನಿಂದಲೇ ಸಕಲ ಓದಾಭ್ಯಾಸದ ತಯಾರಿ ಮಾಡಿಕೊಳ್ಳಬೇಕು. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸನ್ನದ್ಧರಾಗಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.
ಮಕ್ಕಳ ಕಲಿಕಾ ಹಾಗೂ ಫಲಿತಾಂಶ ಪ್ರಗತಿಗೆ ಶಿಕ್ಷಕರು ಒತ್ತು ನೀಡಬೇಕು. ಈ ಬಾರಿ ಗ್ರೇಡ್‌ ಅಂಕಗಳಿಲ್ಲ.ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳಾಗಿವೆ. ಕಟ್ಟುನಿಟ್ಟಾಗಿ ಪರೀಕ್ಷೆಗಳು ಜರುಗಲಿವೆ. ಇದನ್ನು ಮಕ್ಕಳು ಹಾಗೂ ಶಿಕ್ಷಕರು ಸೂಕ್ಷ್ಮತೆಯಿಂದ ಗಮನಿಸಿ ತಮ್ಮ ಜವಾಬ್ದಾರಿಗಳನ್ನು ನಿಭಾಯಿಸಲು ಮುಂದಾಗಬೇಕು ಎಂದರು.
ವಿಜ್ಞಾನ ವಿಷಯದ ಪಾಠ ಪ್ರವಚನ ನಡೆಸಿದ ನ್ಯಾಮಗೌಡ, ಮಕ್ಕಳಿಗೆ ಹಲ ಪ್ರಶ್ನೆಗಳನ್ನು ಕೇಳಿ ಸಮರ್ಪಕ ಉತ್ತರ ಪಡೆದರು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರ ಬಗ್ಗೆ ವಿಶೇಷ ನಿಗಾವಹಿಸಿ ಪ್ರಗತಿ ಕಂಡುಕೊಳ್ಳಬೇಕೆಂದು ಶಿಕ್ಷಕ ಬಳಗಕ್ಕೆ ಸಲಹೆ ನೀಡಿದರು.
ಪ್ರತಿಯೊಬ್ಬ ಶಿಕ್ಷಕರು ನಿಮ್ಮ ವಿಷಯಕ್ಕೆ ಹಾಗೂ ಫಲಿತಾಂಶಕ್ಕೆ ಹೊಸಬೆಳಕಿನ ಸ್ಪರ್ಶ ನೀಡಬೇಕು. ಆ ಹಿನ್ನೆಲೆಯಲ್ಲಿ ಮಕ್ಕಳ ಭವಿಷ್ಯತ್ತಿನ ಏಳಿಗೆ ಚೈತನ್ಯಭರಿತವಾಗಿರಲು ಶಿಕ್ಷಣದ ಅಮೃತ ಸಿಂಚನ ಉಣಬಡಿಸಿ, ಅಂಥದೊಂದು ವಿಶೇಷತೆ ಮೂಡಿಸುವ ಹೊಣೆಗಾರಿಕೆ ಸಮಸ್ತ ಶಿಕ್ಷಕರ ಮೇಲಿದೆ. ಮಕ್ಕಳಿಗೆ ನಮ್ಮಿಂದ ಏನಾದರೂ ಉತ್ತಮ ಕೊಡುಗೆ ನೀಡಬೇಕು. ಆ ನಿಟ್ಟಿನಲ್ಲಿ ಶಿಕ್ಷಕ ಬಳಗದವರು ಸಂಕಲ್ಪ ಮಾಡಬೇಕೆಂದು ಕಿವಿಮಾತು ಹೇಳಿದರು.
ನಿತ್ಯ ಬೆಳಿಗಿನ ಜಾವ ಎಸ್ಸೆಸ್ಸೆಲ್ಸಿ ಮಕ್ಕಳ ಪೋಷಕರಿಗೆ ಪೋನ ಕರೆ ಮಾಡಲಾಗುತ್ತಿದೆ. ಮಕ್ಕಳನ್ನು ಎಬ್ಬಿಸಿ ಅಭ್ಯಾಸದಲ್ಲಿ ನಿರತರಾಗುವಂತೆ ಮುತುವರ್ಜಿ ವಹಿಸಬೇಕೆಂದು ಕೋರಲಾಗುತ್ತಿದೆ. ತಮ್ಮ ಶಿಕ್ಷಕರ ಕರೆಗೆ ಸ್ಪಂದಿಸಿ ಮಕ್ಕಳನ್ನು ಎಬ್ಬಿಸಿ ಅಭ್ಯಾಸ ಪ್ರಕ್ರಿಯೆಯಲ್ಲಿ ಪಾಲಕರು ಸಹಕಾರ ನೀಡುತ್ತಿದ್ದಾರೆ.ಶಾಲೆಯಲ್ಲಿ ಗುಂಪು ಅಭ್ಯಾಸ, ರಸಪ್ರಶ್ನೆ, ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಪಾಠ ಪ್ರವಚನ ನಡೆಸಲಾಗುತ್ತಿದೆ.ಮಕ್ಕಳ ಅಭ್ಯುದಯಕ್ಕೆ ಇಲ್ಲಿ ಕಾಳಜಿ ವಹಿಸಲಾಗಿದೆ ಎಂದು ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ ಈ ವೇಳೆ ವಿಷಯ ಪರಿವೀಕ್ಷಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಷಯ ಪರಿವೀಕ್ಷಕರಾದ ಎಂ.ಎಸ್.ನ್ಯಾಮಗೌಡ ಅವರನ್ನು ಶಾಲೆ,ಸಂಸ್ಥೆಯ ಪರವಾಗಿ ಮುಖ್ಯ ಶಿಕ್ಷಕ ಬಸವರಾಜ ಜಾಲೋಜಿ ಹಾಗೂ ಸಿಬ್ಬಂದಿಗಳು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು. ವಿಶ್ರಾಂತ ಹಿರಿಯ ಶಿಕ್ಷಕ ಬಸವರಾಜ ಜಾಲೋಜಿ, ಗುಲಾಬಚಂದ ಜಾಧವ, ಈರಪ್ಪ ದೇಸಾಯಿ, ಲೋಹಿತ ಮಿಜಿ೯, ಶ್ರೀಶೈಲ ಹುಣಶಿಕಟ್ಟಿ, ಸಹನಾ ಕಲ್ಯಾಣಿ (ಹತ್ತಳ್ಳಿ), ಪ್ರಮೀಳಾ ತೇಲಸಂಗ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.