ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಡಿ.೧ ರಿಂದ ೩ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿ.೧ರಂದು ಮಧ್ಯಾಹ್ನ ೧-೪೫ಕ್ಕೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪಡೇಕನೂರ ಗ್ರಾಮಕ್ಕೆ ಆಗಮಿಸಿ ಅಂದು ವಾಸ್ತವ್ಯ ಮಾಡಲಿದ್ದಾರೆ.
ಡಿ.೨ರಂದು ಬೆಳಿಗ್ಗೆ ೯ ಗಂಟೆಗೆ ವಿವಿಧ ಗ್ರಾಮ ಪಂಚಾಯತ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ ೨-೩೦ರಿಂದ ಸಂಜೆ ೫-೩೦ರವರೆಗೆ ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಡಿ.೩ರಂದು ಬೆಳಿಗ್ಗೆ ೧೦-೩೦ಕ್ಕೆ ವಿವಿಧ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಹಾಗೂ ವಿವಿಧ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಸಂಜೆ ೬ ಗಂಟೆಗೆ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯವಾದಿಗಳ ಬಾರ್ ಅಸೋಸಿಯೇಶ್ ವತಿಯಿಂದ ಹಮ್ಮಿಕೊಂಡ ‘ನ್ಯಾಯವಾದಿಗಳ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ೭-೩೦ಕ್ಕೆ ವಿಜಯಪುರದಿಂದ ಹೊಸಪೇಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
