Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾವಲಂಬನೆ-ಸ್ವಾಭಿಮಾನದ ಬದುಕೇ ನಿಜ ಸಾಧನೆ :ಪಟ್ಟಣಶೆಟ್ಟಿ
(ರಾಜ್ಯ ) ಜಿಲ್ಲೆ

ಸ್ವಾವಲಂಬನೆ-ಸ್ವಾಭಿಮಾನದ ಬದುಕೇ ನಿಜ ಸಾಧನೆ :ಪಟ್ಟಣಶೆಟ್ಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಪರಿಶ್ರಮದಿಂದ ಸಾಧನೆ ಮಾಡುವ ಮೂಲಕ ತಮ್ಮ ಮನೆಗೆ, ತಾವು ಕಲಿಯುವ ಕಾಲೇಜಿಗೆ, ಊರಿಗೆ ಕೀರ್ತಿ ತರುವ ತರಬೇಕೆಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ೨೦೨೪-೨೫ ನೇ ಶೈಕ್ಷಣಿಕ ಸಾಲಿನ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕಾಲೇಜಿನ ವಿವಿಧ ಘಟಕಗಳ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ನಿರಂತರ ಅಧ್ಯಯನದಲ್ಲಿ ತೊಡಗುವ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು. ಕಾಲೇಜಿನ ಅಭಿವೃದ್ಧಿಗೆ ಸದಾ ನಿಮ್ಮೊಂದಿಗೆ ಇರುವುದಾಗಿ ಹೇಳಿದರು.
ಬೀಳಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂಪತ್ ಲಮಾಣಿ ಮಾತನಾಡಿ, ಸರ್ಕಾರಿ ಕೆಲಸ ಗಿಟ್ಟಿಸುವುದು ಸಾಧನೆ ಅಲ್ಲ. ಸ್ವಾವಲಂಬನೆ, ಸ್ವಾಭಿಮಾನದ ಬದುಕೇ ನಿಜವಾದ ಸಾಧನೆ. ಬಡತನ ಮತ್ತು ಹಸಿವು ಶಾಪವಲ್ಲ. ಸಾಧಕರಿಗೆ ಅದು ಎಂದು ವರವಾಗಬೇಕು. ತನ್ನ ಎರಡು ಕಾಲುಗಳನ್ನು ಕಳೆದುಕೊಂಡ ಅರುಣಿಮಾ ಸಿನ್ಹ ಜಗತ್ತಿನ ಏಳು ಪರ್ವತಗಳನ್ನು ಏರಿದ್ದು ನಮಗೆ ಸ್ಪೂರ್ತಿ. ಪದವಿ ಶಿಕ್ಷಣದ ಹಂತದ ಅವಧಿಯಲ್ಲಿ ಅಗಾಧ ಸಾಧನೆ ಮಾಡಲು ಅರ್ಪಣಾಭಾವದಿಂದ ಓದಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ನೀಲಪ್ಪ ಹೊಸಮನಿ ಮಾತನಾಡಿ, ಗೂಗಲ್ ಮ್ಯಾಪ್ ನಂಬಿ ವಿದ್ಯಾರ್ಥಿ ಜೀವನ ಯಾವುದೇ ಗುರಿಯನ್ನು ಮುಟ್ಟಲು ಸಾಧ್ಯವಿಲ್ಲ. ನಿಮ್ಮಲ್ಲಿರುವ ಬೌದ್ಧಿಕ ಶಕ್ತಿಯನ್ನು ಬಳಸಿಕೊಂಡು ಸಾಧಕರ ಪ್ರಭಾವಳಿ ಹೊಂದಬೇಕೆಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ.ಅಮಿತ ಮಿರ್ಜಿ, ಎನ್ಎಸ್ಎಸ್ ಘಟಕದ ಸಂಚಾಲಕ ಡಾ.ಎಚ್.ಎಂ.ನಾಟೀಕಾರ, ಡಾ.ರೇಣುಕಾ ಅಂಬಲಿ, ಡಾ.ಪ್ರಶಾಂತ ನಾಯಕ, ಡಾ.ಬಾನು, ಮಮತಾ ಎನ್., ಇಸ್ಮಾಯಿಲ್ ಶಫಿವುಲ್ಲಾ, ಪ್ರಿಯಾಂಕಾ ಜಿಂದೆ ಇತರರು ಇದ್ದರು. ಪ್ರಾಧ್ಯಾಪಕ ಶ್ರೀಶೈಲ ಬಳವಾಟ ಪ್ರಾಸ್ತವಿಕವಾಗಿ ಮಾತನಾಡಿದರು. ಭೀಮಶಿ ಹಡಪದ ಸ್ವಾಗತಿಸಿದರು. ಪ್ರೊ.ಲೀಲಾವತಿ ನಿರೂಪಿಸಿದರು. ಎಸ್.ಬಿ.ವಾಲೀಕಾರ ವಂದಿಸದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಯನ್ನು, ಕಾಲೇಜಿಗೆ ಹೊಸದಾಗಿ ಬಂದ ಬೋಧಕರನ್ನು, ಪಿಎಚ್ಡಿ ಪದವಿ ಪಡದೆ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026
    In ದಿನಪತ್ರಿಕೆ
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.