ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಉತ್ತರ ಕನ್ನಡ ಜಿಲ್ಲೆ ಶಿರಸಿಯ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧೀಶರಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ೨೦೦೭ ರಿಂದ ನಾಡಿನಾದ್ಯಂತ ಗೀತಾ ಅಭಿಯಾನ ಹಮ್ಮಿಕೊಂಡಿದ್ದು ಈ ಬಾರಿಯು ಗೀತೆಯ ೯ನೇ ಅಧ್ಯಾಯದ ಕಂಠಪಾಠ ಮತ್ತು ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ನಡೆಸಲಾಗುವುದು.
ಪ್ರಾಥಮಿಕ ವಿಭಾಗ(೫ ರಿಂದ ೭ನೇ ತರಗತಿ), ಪ್ರೌಢ ವಿಭಾಗ (೮ ರಿಂದ ೧೦ನೇ ತರಗತಿ) ಪದವಿ ಪೂರ್ವ ವಿಭಾಗ (೧೧ ಮತ್ತು ೧೨ನೇ ತರಗತಿ) ವಿದ್ಯಾರ್ಥಿಗಳಿಗೆ ಪ್ರತಿ ಸ್ಪರ್ಧೆಗಳಿಗೆ ಒಂದು ಶಾಲೆಯಿಂದ ಒಂದು ವಿದ್ಯಾರ್ಥಿ ಭಾಗವಹಿಸಲು ಅವಕಾಶವಿರುತ್ತದೆ. ಕಂಠಪಾಠ ಸ್ವರ್ಧೆ ೫ನಿಮಿಷಗಳದ್ದಾಗಿರುತ್ತದೆ. ನಿರ್ಣಾಯಕರು ಸೂಚಿಸಿದ ಯಾವುದೆ ೧೦ಶ್ಲೋಕವನ್ನು ಕ್ರಮವಾಗಿ ಪಠಿಸಬೇಕಾಗಿರುತ್ತದೆ. (ಯೂಟ್ಯೂಬ್ ಲಿಂಕ https://youtu.be/nofRgLsyCOs?feature=shared ಇದರಲ್ಲಿ ಲಭ್ಯವಿರುವ ೯ನೇ ಅಧ್ಯಾಯವನ್ನು ಅಭ್ಯಾಸ ಮಾಡಿರಬೇಕು.) ಮೂರು ಹಂತಗಳಲ್ಲಿ ನಡೆಯುವ ೫ ನಿಮಿಷಗಳ ಕಾಲಾವಧಿಯ ಭಾಷಣ ಸ್ಪರ್ಧೆಗೆ ಪ್ರಾಥಮಿಕ ವಿಭಾಗಗಳಿಗೆ ವಿಷಯ ಭಗವದ್ಗೀತೆಯಿಂದ ಸಾಮಾಜಿಕ ಸಾಮರಸ್ಯ, ಪ್ರೌಢ ವಿಭಾಗದ ವಿಷಯ ಭಗವದ್ಗೀತೆಯಿಂದ ದೇಶದ ಸಮಗ್ರತೆ/ರಾಷ್ಟ್ರೀಯ ಭಾವೈಕ್ಯ, ಪದವಿ ಪೂರ್ವ ವಿಭಾಗದ ವಿಷಯ ಭಗವದ್ಗೀತೆಯಿಂದ ವಿಶ್ವ ಭ್ರಾತೃತ್ವ ಮತ್ತು ಪ್ರೌಢ ಶಾಲಾ ಹಂತದವರಿಗೆ ರಸಪ್ರಶ್ನೆ ಸ್ಪರ್ಧೆಗಳಿರುತ್ತದೆ. ತಾಲೂಕಾ ಹಂತದಲ್ಲಿ ಪ್ರಥಮ, ದ್ವಿತೀಯ ಪಡೆದ ವಿದ್ಯಾರ್ಥಿಗಳು ಮಾತ್ರ ಡಿ. ೭ರಂದು ನಡೆಯುವ ಜಿಲ್ಲಾ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಮುದ್ದೇಬಿಹಾಳ ತಾಲೂಕು ಮಟ್ಟದ ಸ್ಪರ್ಧೆಯನ್ನು ಡಿ.೫ರಂದು ಬೆ.೫ಗಂಟೆಗೆ ಪಟ್ಟಣದ ತಂಗಡಗಿ ರಸ್ತೆಯ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ನಡೆಸಲಾಗುತ್ತದೆ. ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ಮಕ್ಕಳ ಯಾದಿಯನ್ನು ಆಯಾ ಶಾಲೆಯ ಶಿಕ್ಷಕರು ಡಿ.೪ರ ಒಳಗಾಗಿ ಮೋಬೈಲ್ ೯೪೮೦೪೬೨೧೭೯ ಸಂಖ್ಯೆಗೆ ವಾಟ್ಸ್ಅಪ್ ಮೂಲಕ ಕಳುಹಿಸಿರಬೇಕು.
ಸ್ಪರ್ಧೆ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ವಿಷಯ ಪ್ರಮುಖರಾದ ಶ್ರೀರಾಮ ಜಿ.ಭಟ್ಟ (ಮೋ೯೪೮೧೫೭೫೮೫೪), ಗುರುರಾಜ ಕುಲಕರ್ಣಿ (ಮೋ- ೯೩೭೯೫೭೩೭೩೮) ಸಂತೋಷ ಕಳ್ಳಿಗುಡ್ಡ (ಮೋ – ೯೯೮೦೬೯೨೬೮೬)ಸಂಪರ್ಕಿಸ ಬಹುದೆಂದು ತಾಲೂಕಾ ಅಭಿಯಾನದ
ಅಧ್ಯಕ್ಷ ಶ್ರೀಶೈಲ ದೊಡಮನಿ ರೂಢಗಿ, ಸಂಚಾಲಕ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆ ಮುಖ್ಯಾಧ್ಯಾಪಕ ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
