Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಬಾಳು-ಸಮಪಾಲು ತತ್ವದಡಿ ಗ್ಯಾರಂಟಿ ಯೋಜನೆಗಳ ಜಾರಿ
(ರಾಜ್ಯ ) ಜಿಲ್ಲೆ

ಸಮಬಾಳು-ಸಮಪಾಲು ತತ್ವದಡಿ ಗ್ಯಾರಂಟಿ ಯೋಜನೆಗಳ ಜಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟಿಸಿದ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಇಂಡಿ: ರಾಜ್ಯದಲ್ಲಿ ಯಾರೂ ಸಹ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶ ಇಟ್ಟುಕೊಂಡು ಸರ್ಕಾರ ಅನ್ನಭಾಗ್ಯ ಯೋಜನೆ ಸೇರಿ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಅವರು ಮಂಗಳವಾರ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಈ ಹಿಂದೆ ದೇವರಾಜ್ ಅರಸು ಅವರು ಉಳುವವನೇ ಭೂಮಿಯ ಒಡೆಯ ಎನ್ನುವ ಯೋಜನೆಯಿಂದ ಬಡವರಿಗೆ ನ್ಯಾಯ ಒದಗಿಸಿದ್ದರು. ಅವರ ಮಾದರಿಯಲ್ಲಿಯೇ ರಾಜ್ಯದ ಎಲ್ಲಾ ಜನರಿಗೆ ಸಮಬಾಳು, ಸಮಪಾಲು ಎನ್ನುವ ತತ್ವದ ಅಡಿಯಲ್ಲಿ ಇಂದಿನ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
೨೦೧೩ ರಿಂದ ೨೦೧೮ರ ವರೆಗೆ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ, ದೀನ ದಲಿತರಿಗಾಗಿ ೮೫೭೧೮ ಕೋಟಿ ವೆಚ್ಚ ಮಾಡಿದೆ. ನೀರಾವರಿಗಾಗಿ ೪೦೦೦೦ ಕೋಟಿ ವೆಚ್ಚ ಮಾಡಿದೆ. ಪ್ರಸಕ್ತ ವರ್ಷದಲ್ಲಿ ೫೮೦೦೦ ಕೋಟಿ ಅನುದಾನ ಮೀಸಲಿಟ್ಟಿದೆ. ಸ್ತ್ರೀಯರಿಗೆ ಸಮಾನತೆ ಸಿಗಬೇಕೆನ್ನುವ ತತ್ವದ ಮೇಲೆ ಅವರಿಗೆ ಫ್ರೀ ಬಸ್ ವ್ಯವಸ್ಥೆ ಮಾಡಿದೆ. ಸರ್ವರಿಗೂ ಗ್ಯಾರಂಟಿ ಯೋಜನೆಗಳ ಲಾಭ ತಲುಪಬೇಕೆಂದು ಪ್ರೀ ವಿದ್ಯುತ್ ನೀಡಲಾಗಿದೆ. ಇವೆಲ್ಲವುಗಳು ಸಮಾನತೆಯ ಸಂಕೇತಗಳು ಎಂದು ವಿವರಿಸಿದರು.
ಜಿಲ್ಲಾ ಸಮಿತಿ ಅಧ್ಯಕ್ಷ ಇಲಿಯಾಸ್ ಬೋರಾಮಣಿ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ತಾವು ಮಾಡಿದ ಕೆಲಸಗಳ ಬಗ್ಗೆ ವಿವರಿಸಿದರು. ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಎಂ.ಆರ್.ಪಾಟೀಲ ಮಾತನಾಡಿ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರದಿಂದ ಇಲ್ಲಿಯವರೆಗೆ ವಿಜಯಪೂರ ಜಿಲ್ಲೆಗೆ ೨೮೦ ಕೋಟಿ ರೂ, ಬಿಡುಗಡೆಯಾಗಿದೆ ಎಂದರು.
ವೇದಿಕೆಯಲ್ಲಿ ಕಂದಾಯ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ, ತಹಶೀಲ್ದಾರ ಬಿ.ಎಸ್.ಕಡಕಬಾಬಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ್, ಸದಾಶಿವ ಪ್ಯಾಟಿ, ಬಿ.ಕೆ.ಪಾಟೀಲ, ಭೀಮಣ್ಣ ಕವಲಗಿ, ಗುರನಗೌಡ ಪಾಟೀಲ, ಕೆಂಪೇಗೌಡ ಪರಗೊಂಡ, ಭೀಮಾಶಂಕರ ಹಂಜಗಿ, ದೀಪಾ ಕುಲಕರ್ಣಿ, ನಿರ್ಮಲಾ ತಳಕೇರಿ, ಶೈಲಜಾ ಜಾಧವ, ಮಹೇಶ ಹೊನ್ನಬಿಂದಗಿ, ಸಂಜೀವ ನಾಯ್ಕೋಡಿ, ಸತೀಶ ಹತ್ತಿ, ಶಶಿಕಲಾ ಹಿರೇಮಠ, ಸಿದ್ದು ಕಟ್ಟೀಮನಿ, ಸಣ್ಣಪ್ಪ ತಳವಾರ, ಪ್ರಭು ಕುಂಬಾರ, ಸಂಕೇತ ಜ್ಯೋಶಿ, ಮಲ್ಲೇಶಿ ಭೋಸಗಿ, ರುದ್ರು ಅಲಗೊಂಡ, ಭೀಮರಾಯ ಮೇತ್ರಿ, ಸೋಮಣ್ಣ ಪ್ರಚಂಡಿ ಸೇರಿದಂತೆ ಇನ್ನಿತರರು ಇದ್ದರು.
ಇಓ ನಂದೀಪ ರಾಠೋಡ ಸ್ವಾಗತಿಸಿದರು. ಧನರಾಜ ಮುಜಗೊಂಡ ನಿರೂಪಿಸಿದರು.

“ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಲ್ಲಿ ತೊಂದರೆಯಾಗಿರುವದು ನಿಜ. ಅದನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳಲಾಗುತ್ತದೆ. ನುಡಿದಂತೆ ನಡೆಯುವುದು ನಮ್ಮ ಸರ್ಕಾರದ ನೀತಿ. ಇಂಡಿ ತಾಲ್ಲೂಕಿನಲ್ಲಿ ನೀರು, ವಿದ್ಯುತ್, ಶಿಕ್ಷಣ, ಲಿಂಬೆ ಅಭಿವೃದ್ಧಿ ಮಂಡಳಿ, ಕೃಷಿ ಕಚೇರಿ, ಕಾರ್ಖಾನೆ ಮುಂತಾದವುಗಳನ್ನು ಮಾಡಿ ಮತಕ್ಷೇತ್ರವನ್ನು ಅಭಿವೃದ್ಧಿ ಮಾಡಲಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಇಂಡಿ ಜಿಲ್ಲೆಯನ್ನಾಗಿ ಮಾಡುವ ಉದ್ದೇಶವಿದೆ.”

– ಯಶವಂತರಾಯಗೌಡ ಪಾಟೀಲ
ಶಾಸಕರು, ಇಂಡಿ

“ಶಾಸಕರು ಸಮ ಸಮಾಜದ ಹರಿಕಾರರು. ತಾಲ್ಲೂಕಿನಲ್ಲಿ ಇನ್ನೂ ೫೦೦೦ ಜನರಿಗೆ ವಿವಿಧ ಕಾರಣಗಳಿಂದ ಗ್ಯಾರಂಟಿ ಯೋಜನೆಗಳ ಲಾಭ ಸಿಕ್ಕಿಲ್ಲ. ಅವುಗಳ ಬಗ್ಗೆ ಅಧಿಕಾರಿಗಳ ಜೊತೆಗೂಡಿ ಚರ್ಚೆ ಮಾಡಿ ಅವರಿಗೂ ಕೂಡಾ ಲಾಭ ಸಿಗುವಂತೆ ಶ್ರಮಿಸುವೆ.”

– ಪ್ರಶಾಂತ ಕಾಳೆ
ಅಧ್ಯಕ್ಷರು, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ, ಇಂಡಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.