ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಭಾಗದ ಮಹಿಳೆಯರ ಸ್ವಾವಲಂಬನೆ, ವಿದ್ಯಾರ್ಥಿಗಳ ಏಳಿಗೆ, ಅನಾಥರಿಗೆ ಊರುಗೋಲಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಗತಿಪರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್ ಎಸ್ ಚಂಡಕಿ ಹೇಳಿದರು
ಅವರು ತಾಲೂಕಿನ ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ವತಿಯಿಂದ, ವಿದ್ಯಾರ್ಥಿಗಳಿಗೆ ಉಚಿತವಾಗಿ ಮೂರು ತಿಂಗಳ ಟ್ಯೂಷನ್ ಕ್ಲಾಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಗ್ರಾಮೀಣ ಭಾಗಕ್ಕೆ ತಲುಪಿಸುತ್ತಿರುವ ಪೂಜ್ಯ ಹೆಗ್ಗಡೆ ದಂಪತಿಗಳಿಗೆ ನಮ್ಮ ಶಾಲೆಯ ಪರವಾಗಿ ಕೃತಜ್ಞತೆಗಳು ಸಲ್ಲಿಸಬೇಕಿದೆ, ಗಾಂಧೀಜಿಯವರ ಗ್ರಾಮ ಅಭಿವೃದ್ಧಿ ಕನಸನ್ನು ಧರ್ಮಸ್ಥಳ ಸಂಸ್ಥೆ ನನಸು ಮಾಡುತ್ತಿದೆ, ಮಹಿಳೆಯರ ಸಬಲೀಕರಣ, ಅನಾಥರ, ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುತ್ತಿದೆ ಇಂದಿನಿಂದ ಪ್ರಾರಂಭವಾಗುವ ಟ್ಯೂಷನ್ ಕ್ಲಾಸ್ ಸದುಪಯೋಗ ಪಡೆದುಕೊಂಡು ಉತ್ತಮ ರೀತಿಯಲ್ಲಿ ಅಂಕಗಳನ್ನು ಗಳಿಸಬೇಕು ಎಂದರು.
ಸಿಂದಗಿ ತಾಲೂಕು ಯೋಜನಾಧಿಕಾರಿ ಕೃಷ್ಣಮೂರ್ತಿ
ಪ್ರಾಸ್ತಾವಿಕ ಮಾತನಾಡಿ ಯೋಜನೆಯು ನಡೆದು ಬಂದ ಹಾದಿ, ಸ್ವ ಸಹಾಯ ಸಂಘಗಳ ರಚನೆ ಬಗ್ಗೆ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಮಾಸಾಶನ, ವಾತ್ಸಲ್ಯ ಕಾರ್ಯಕ್ರಮ, ಸುಜ್ಞಾನ ನಿಧಿ ಶಿಷ್ಯ ವೇತನ, ಯೋಜನೆಯಿಂದ ನೀಡುವ ಕೃಷಿ ಕಾರ್ಯಕ್ರಮಗಳು ಹಾಗೂ ಸಂಸ್ಥೆಯಿಂದ ನೀಡುವ ಅನುದಾನಗಳ ಬಗ್ಗೆ ಮಾಹಿತಿ ತಿಳಿಸಿ,ಮೂರು ತಿಂಗಳ ಕಾಲ ನಡೆಯುವ ಉಚಿತ ಟ್ಯೂಷನ್ ಕ್ಲಾಸ್ ಗಳ ಪ್ರಯೋಜನ ಪಡೆದುಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಿ ತಂದೆ ತಾಯಿಯರ ಕನಸು ನನಸು ಮಾಡಿ ಒಳ್ಳೆಯ ಹೆಸರು ಗಳಿಸಿ ಉತ್ತಮ ನಾಗರಿಕರಾಗಿ ಎಂದರು.
ಪ್ರಗತಿಪರ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಎಸ್ ಎಸ್ ಗಂಗನಳ್ಳಿ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕಾವ್ಯ, ವಲಯ ಮೇಲ್ವಿಚಾರಕಿ ಸವಿತಾ, ಸ್ಥಳೀಯ ಸೇವಾ ಪ್ರತಿನಿಧಿ ಹಾಗೂ ಶಾಲೆಯ ಮುದ್ದು ಮಕ್ಕಳು ಉಪಸ್ಥಿತರಿದ್ದರು.

