ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಾದ್ಯಂತ ಅತಿ ಹೆಚ್ಚು ಪ್ರಮಾಣದಲ್ಲಿ ಈ ಬಾರಿ ತೊಗರಿ ಬೆಳೆಯನ್ನು ರೈತರು ಬೆಳೆದಿದ್ದಾರೆ. ಮುಂಗಾರು ಮಳೆ ಹುಲಸಾಗಿ ಬಂದಿದ್ದರಿಂದಾಗಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತರು ತೊಗರೆ ಬೆಳೆಯನ್ನು ಬಿತ್ತನೆ ಮಾಡಿದ್ದಾರೆ. ಹೂ ಕಾಯಿ ಹಿಡಿಯುವ ಹಂತದಲ್ಲಿರುವಾಗ ವಿಪರೀತ ಮಂಜಿನ ವಾತಾವರಣದಿಂದ ತೊಗರಿಯ ಫಲಗಳು ಉದುರಿ ಬಿದ್ದು ಬರಡು ಕಟ್ಟಿಗೆಯಾಗಿ ನಿಂತಿವೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಲವು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ವಿಷಯದ ಕುರಿತು ಬೆಳಗಾವಿ ಅಧಿವೇಶನದಲ್ಲಿ ದೇವರ ಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ್ ಅವರು ಸದನದ ಗಮನಕ್ಕೆ ತಂದಿರುವುದು ತೊಗರಿ ಬೆಳೆದ ರೈತರ ಮೊಗದಲ್ಲಿ ಆಶಾಭಾವ ಮೂಡಿಸಿದೆ. ಸರ್ಕಾರ ಈ ಕೂಡಲೇ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಬೆಂಬಲ ಬೆಲೆಯನ್ನು ಘೋಷಿಸಿ ಉತ್ತರ ಕರ್ನಾಟಕದ ಬರಗಾಲ ಪೀಡಿತ ತೊಗರಿ ಬೆಳೆ ಬೆಳೆಯುವ ರೈತರ ಹಿತ ಕಾಪಾಡಲು ಮುಂದಾಗಬೇಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ.
ಈ ಸಂದರ್ಬದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಹಮೀದ ಇನಾಮದಾರ, ದುರ್ಗಪ್ಪ ಬೂದಿಹಾಳ, ಶೀನು ಹಿಪ್ಪರಗಿ, ವಿಕ್ರಮ ವಾಘಮೋರೆ, ಪ್ರವೀಣ ಕನಸೇ, ರಾಕೇಶ ಇಂಗಳಗಿ, ಸುರೇಂದ್ರ ಕುನಸಲೇ, ಭೀಮಾಶಂಕರ ಕಾಂಬಳೆ ಇತರರು ಇದ್ದರು

