ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಾಡಿನ ಅಭಿವೃದ್ಧಿಯಲ್ಲಿ ಎಸ್.ಎಮ್.ಕೃಷ್ಣ ಅವರು ಪಾತ್ರ ಮಹತ್ವದ್ದಾಗಿದೆ. ಮಾದರಿಯ ರಾಜಕರಣ ಮಾಡಿದ ಧೀಮಂತ ನಾಯಕ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಮ್.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಸರಕಾರ ಆರ್ಥಿಕ ಅವಲಂಬನೆ ಹೆಚ್ಚಿಗಿರೋಕೆ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಯೇ ಕಾರಣ. ಕರ್ನಾಟಕ ಕಂಡಂತಹ ಅತ್ಯಂತ ಧೀಮಂತ ಹಿರಿಯ ರಾಜಕಾರಣಿ, ಸ್ವಾತಂತ್ರö್ಯ ಪೂರ್ವದ ತಲೆಮಾರು. ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಆಡಳಿತಾತ್ಮಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಕೃಷ್ಣಾಜಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖ ಹಾಗೂ ದಿಗಭ್ರಮೆಯಾಗಿದೆ ಎಂದು ತೀವ್ರ ಸಂತಾಪ ಸೂಚಿಸಿದರು.
ಈ ವೇಳೆ ಮಾಜಿ ಶಾಸಕ ಶರಣಪ್ಪ ಸುಣಗಾರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುರೇಶ ಪೂಜಾರಿ, ಪುರಸಭೆ ಸದಸ್ಯ ಹಾಸೀಂಪಿರ ಆಳಂದ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಪುರಸಭೆ ನಾಮನಿರ್ದೇಶಿತ ಸದಸ್ಯ ಸಿದ್ದು ಮಲ್ಲೇದ, ಮುಖಂಡರಾದ ರವಿರಾಜ ದೇವರಮನಿ, ಶಿವನಗೌಡ ಬಿರಾದಾರ, ಎಂ.ಎ.ಖತೀಬ, ಸಿದ್ದಣ್ಣ ಹಿರೇಕುರುಬರ, ವರ್ಷಾ ಪಾಟೀಲ, ಶಾರದಾ ಬೇಟಗೇರಿ, ಪ್ರವೀಣ ಕಂಠಿಗೊಂಡ, ಅಶೋಕ ಸುಲ್ಪಿ ಸೇರಿದಂತೆ ಕಾಂಗ್ರೇಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.

