ಸಿಎಂ ಸಿದ್ಧರಾಮಯ್ಯ ಸಿಂದಗಿಗೆ ಇಂದು
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ಡಿ.೧೨ರಂದು ಸಂಜೆ ೪ ಗಂಟೆಗೆ ಬೆಳಗಾವಿಯಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಸಂಜೆ ೫-೦೦ ಗಂಟೆಗೆ ಜಿಲ್ಲೆಯ ಸಿಂದಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ರಾತ್ರಿ ೭ ಗಂಟೆಗೆ ಸಿಂದಗಿಯಿಂದ ಹೊರಟು ೭-೪೫ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ.
ಡಿ.೧೨ರಂದು ವಿಜಯಪುರದ ಬಿಎಲ್ಡಿಇ ಎನ್ಆರ್ಐ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿ, ಡಿ.೧೩ರಂದು ಬೆಳಿಗ್ಗೆ ೯ ಗಂಟೆಗೆ ವಿಜಯಪುರದಿಂದ ಬೆಳಗಾವಿಗೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
