Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಂಚಮಸಾಲಿಗರ ಮೇಲಿನ ಲಾಠಿಪ್ರಹಾರ ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಪಂಚಮಸಾಲಿಗರ ಮೇಲಿನ ಲಾಠಿಪ್ರಹಾರ ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಲಿಂಗಾಯತ ಒಳಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಶಿಫಾರಸ್ಸು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಲಿಂಗಾಯತ ಸಮಾಜ ಬಾಂಧವರ ಮೇಲೆ ಲಾಠಿ ಪ್ರಹಾರ ನಡೆಸಿ, ಸ್ವಾಮೀಜಿಗಳನ್ನು, ಶಾಸಕರು, ಸಂಸದರು, ಮುಖಂಡರು ಗಳನ್ನು ಬಂಧಿಸಿರುವ ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಶುಕ್ರವಾರ ಪಕ್ಷಾತೀತವಾಗಿ ವಿವಿಧ ಸಮುದಾಯ ಬಾಂಧವರು ನಗರದ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.
ಇಲ್ಲಿಯ ರಾಷ್ಟೀಯ ಹೆದ್ದಾರಿಯಲ್ಲಿ ಜಮಾಯಿಸಿದ ನೂರಾರು ಪ್ರತಿಭಟನಾಕಾರರು, ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಹೆದ್ದಾರಿ ಬಂದ್ ಮಾಡಿದರು. ನಂತರ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯುದ್ದಕ್ಕೂ ಲಿಂಗಾಯತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಪಂಚಮಸಾಲಿ ವಿರೋಧಿ ಸರ್ಕಾರಕ್ಕೆ ಧಿಕ್ಕಾರ, ಸರ್ವಾಧಿಕಾರಿ ಧೋರಣೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಬೊಲೋ ಭಾರತ್ ಮಾತಾಕಿ ಜೈ, ಪಂಚಮಸಾಲಿ ಸಮಾಜಕ್ಕೆ ಜಯವಾಗಲಿ, ಹಿಂದೂ ಹುಲಿ ಬಸನಗೌಡ ಪಾಟೀಲ ಯತ್ನಾಳ ರವರಿಗೆ ಜಯವಾಗಲಿ, ಸಮಾಜಕ್ಕೆ ಅನ್ಯಾಯ ಮಾಡುತ್ತಿರುವ ಶಾಸಕ ವಿಜಯಾನಂದ ಕಾಶಪನವರನ್ನು ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕಿತ್ತಾಕಲೇಬೇಕು ಎಂಬಿತ್ಯಾದಿ ಘೋಷಣೆಗಳನ್ನು ಮೊಳಗಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವ ಮುಖಂಡ ರಾಮನಗೌಡ ಪಾಟೀಲ ಯತ್ನಾಳ, ಸಮಾಜದ ಬಡ ಮಕ್ಕಳ ಭವಿಷ್ಯಕ್ಕಾಗಿ ಮೀಸಲಾತಿ ಅಗತ್ಯವಿದೆ. ಅದನ್ನು ಪಡೆದುಕೊಳ್ಳಲು ಸರ್ಕಾರದ ಗಮನಸೆಳೆಯಲು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಏಕಾಏಕಿ ವೃದ್ಧರು ಎನ್ನದೆ ಎಲ್ಲರ ಮೇಲೆಯೂ ಲಾಠಿ ಪ್ರಹಾರ ಮಾಡಿಸಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯದ ನಡೆ ಖಂಡನೀಯ. ಬೆಂಗಳೂರಿನಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಸೇರಿದಾಗಲೂ ಶಾಂತ ರೀತಿಯಲ್ಲಿ ಹೋರಾಟ ಮಾಡಿದ ಸಮಾಜ ನಮ್ಮದು. ಈ ಹೋರಾಟ ಹತ್ತಿಕ್ಕುವ ಹುನ್ನಾರದಿಂದಲೇ ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾರು ಏನೇ ಮಾಡಿದರೂ ನಮ್ಮ ಸಮಾಜದ ಬಡ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮೀಸಲಾತಿಗಾಗಿ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಅದನ್ನು ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಅಧಿವೇಶನದಲ್ಲಿಯೂ ಸಹ ನಮ್ಮ ತಂದೆಯವರಾದ ಶ್ರೀ ಬಸನಗೌಡ ರಾ.ಪಾಟೀಲ ಯತ್ನಾಳ ರವರು, ಸರ್ಕಾರದ ಗಮನಸೆಳೆದು, ಮೀಸಲಾತಿ ನೀಡುವಂತೆ ಹಾಗೂ ಅಮಾಯಕರ ಮೇಲೆ ಲಾಠಿ ಪ್ರಹಾರ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮತ್ತೆ ಬರುತ್ತೇವೆ ಎನ್ನುವ ಮಹಾನುಭಾವರು, ಅಧಿಕಾರ ಸಿಕ್ಕ ಮೇಲೆ ದಾರಿ ತಪ್ಪಿಸುತ್ತಿದ್ದಾರೆಂದು ಕಿಡಿಕಾರಿದರು.
ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಎಂ.ಎಸ್.ರುದ್ರಗೌಡ್ರ ಮಾತನಾಡಿ, ಸಮಾಜದ ಬಡವರ ಮಕ್ಕಳ ಭವಿಷ್ಯಕ್ಕಾಗಿ ಬಸವ ಜಯಮೃತ್ಯುಂಜ ಶ್ರೀಗಳ ನೇತೃತ್ವದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ನಿರಂತವಾಗಿ ವಿವಿಧ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದೇವೆ. ಎಂದೂ ಕೂಡ ಶಾಂತಿ ಕದಡಲು ಯತ್ನಿಸಿಲ್ಲ. ಆದರೆ, ಬೆಳಗಾವಿಯಲ್ಲಿ ಹೋರಾಟ ದಿಕ್ಕು ತಪ್ಪಿಸಲೆಂದೇ, ಕಾಂಗ್ರೆಸ್ ಅಮಾಯಕರ ಮೇಲೆ ಪೊಲೀಸರ ಮೂಲಕ ಮನಬಂದಂತೆ ದೌರ್ಜನ್ಯ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಕ್ಕಾಗಿ ಸಮಾಜ ಬಳಸಿಕೊಂಡ ಶಾಸಕ ವಿಜಯಾನಂದ ಕಾಶಪ್ಪನವರ, ಶಾಸಕನಾದ ಮೇಲೆ ಈಗ ಕಾಂಗ್ರೆಸ್ ಪಕ್ಷ ಆಡಿಸಿದಂತೆ ಆಡುತ್ತಿದ್ದು, ಹೋರಾಟದ ದಾರಿ ತಪ್ಪಿಸುವ ಹುನ್ನಾರ ನಡೆಸಿದನ್ನು ಸಮಾಜ ಗಮನಿಸುತ್ತಿದೆ. ಅಧಿಕಾರ ಇಲ್ಲದಾಗ ಮೀಸಲಾತಿಗಾಗಿ ಪ್ರಾಣ ಕೊಡುತ್ತೇನೆ ಎನ್ನುವ ನಿನ್ನ ಮಾತು ನೆನಪಿಲ್ಲವೆ? ನಿನ್ನ ಸ್ವಾರ್ಥಕ್ಕಾಗಿ ಸಮಾಜಕ್ಕಾಗಿ ಅವಿರತ ಶ್ರಮಿಸುತ್ತಿರುವ ಸ್ವಾಮೀಜಿಗಳು ಹಾಗೂ ಯತ್ನಾಳರ ಬಗ್ಗೆ ಮಾತನಾಡಿದರೆ ಸಮಾಜ ಸುಮ್ಮನಿರುವುದಿಲ್ಲ. ನಿನ್ನ ಸಮಾಜ ವಿರೊಧಿ ಧೋರಣೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಸಮಾಜದ ಮತ ಪಡೆದು ಅಧಿಕಾರ ಅನುಭವಿಸುತ್ತಿರುವ ಸಚಿವರು, ಶಾಸಕರು ಬಾಯಿ ಬಿಟ್ಟು ಮಾತನಾಡಿ. ಇಲ್ಲದಿದ್ದರೆ, ರಾಜಿನಾಮೆ ಕೊಟ್ಟು ಸಮಾಜದ ಮತ ಪಡೆಯದೆ ಗೆದ್ದು ಬನ್ನಿ ಎಂದು ಸವಾಲು ಹಾಕಿದರು.
ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ಮಳುಗೌಡ ಪಾಟೀಲ, ಪಂಚಮಸಾಲಿ ರಾಜ್ಯ ವಕೀಲರ ಪರಿಷತ್ ಸದಸ್ಯ ಶ್ರೀಶೈಲ ಮುಳಜಿ ಮಾತನಾಡಿದರು. ಪಂಚಮಸಾಲಿ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗನಗೌಡ ಸೋಲಾಪುರ, ನಗರ ಘಟಕದ ಅಧ್ಯಕ್ಷ ಶ್ರೀಶೈಲ ಬುಕ್ಕಣಿ, ಪಂಚಸೈನ್ಯ ಜಿಲ್ಲಾಧ್ಯಕ್ಷ ಶರಣಬಸಪ್ಪ ಗಂಗಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ್ ಜಾಧವ, ಪ್ರೇಮಾನಂದ ಬಿರಾದಾರ, ಕಿರಣ ಪಾಟೀಲ, ಮಳುಗೌಡ ಬಿರಾದಾರ, ರಾಜಶೇಖರ ಕುರಿಯವರ, ಗಿರೀಶ ಪಾಟೀಲ, ಮುಖಂಡರಾದ ಪಾಂಡುಸಾಹುಕಾರ ದೊಡ್ಡಮನಿ, ಅನೀಲ ಪಾಟೀಲ, ವಿಶ್ವನಾಥ ಸಾರವಾಡ, ನಿತೀಶ ಬಿರಾದಾರ, ಉಮೇಶ ಕೊಳಕೂರ, ಕಿರಣ ಉಳ್ಳಾಗಡ್ಡಿ, ಶಂಕರಗೌಡ ಹೊನಗನಹಳ್ಳಿ, ಸಾಹೇಬಗೌಡ ಬಿರಾದಾರ, ಸಿದ್ದು ಬಿರಾದಾರ, ದಾನೇಶ ಅವಟಿ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.