Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ಒಳಗೊಂಡಿರಲಿ
(ರಾಜ್ಯ ) ಜಿಲ್ಲೆ

ಮಕ್ಕಳ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ಒಳಗೊಂಡಿರಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಮಕ್ಕಳಲ್ಲಿ ಕುತೂಹಲ ಕೆರಳಿಸುವ, ಅವರು ಏಕಾಗ್ರತೆಯಿಂದ ನೋಡುವ, ಮಾನವೀಯ ಮೌಲ್ಯಗಳನ್ನು ಬೀರುವಂತಹ ಅಂಶಗಳು ಮಕ್ಕಳ ಸಾಹಿತ್ಯದಲ್ಲಿರಬೇಕು. ಈ ನಿಟ್ಟಿನಲ್ಲಿ ಇಂದು ಬಿಡುಗಡೆಗೊಂಡ ಇಂದುಮತಿ ಲಮಾಣಿಯವರ ಕಾಡಿನ ಕರಡಿ ನಾಡಿಗೆ ಬಂತು ಶಿಶು ಕಥಾ ಸಂಕಲನ ಒಳಗೊಂಡಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ಸಾಹಿತಿ ಜಂಬುನಾಥ ಕಂಚ್ಯಾಣಿ ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ವಿಜಯಪುರದ ಗೋರಬಾಯಿ ಟೋಳಿ ಮಹಿಳಾ ಸಮೂಹ ಸಂಸ್ಥೆಯ ಸಹಯೋಗದಲ್ಲಿ ದಿ.ಶಂಕರ ಡಾಕಪ್ಪ ಲಮಾಣಿ ಸ್ಮರಣಾರ್ಥ ಶನಿವಾರ ಹಮ್ಮಿಕೊಂಡಿದ್ದ ಶಂಕರಶ್ರೀ ದತ್ತಿನಿಧಿ ಪ್ರಶಸ್ತಿ ಪ್ರಧಾನ ಮತ್ತು ಇಂದುಮತಿ ಲಮಾಣಿಯವರ ಕಾಡಿನ ಕರಡಿ ನಾಡಿಗೆ ಬಂತು ಶಿಶು ಕಥಾ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳ ಬುದ್ಧಿಮಟ್ಟವನ್ನು ವಿಕಾಸಗೊಳಿಸುವ ಶಕ್ತಿ ಸಾಮರ್ಥ್ಯ ಮಕ್ಕಳ ಸಾಹಿತ್ಯದಲ್ಲಿರಬೇಕು. ಮಕ್ಕಳ ಒಡನಾಡಿಗಳು, ಅವರ ಪ್ರೀತಿ ವಿಶ್ವಾಸಗಳಿಸಿದ್ದರೆ ಮಾತ್ರ ಅಂತಹವರಿಂದ ಉತ್ತಮ ಮಕ್ಕಳ ಸಾಹಿತ್ಯ ಹೊರಬರುತ್ತದೆ ಎಂದರು.
ಗ್ರಾಮೀಣ ಭಾಗದಲ್ಲಿ ಜನಿಸಿದ ಇಂದುಮತಿ ಲಮಾಣಿ ಅವರು ಹಲವಾರು ಕೃತಿಗಳನ್ನು ರಚಿಸಿ ಸಾಹಿತ್ಯ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ಇಂದು ಬಿಡುಗಡೆಗೊಂಡ ಅವರ ಶಿಶು ಕಥಾ ಸಂಕಲನ ಕಾಡಿನ ಕರಡಿ ನಾಡಿಗೆ ಬಂತು ಕೃತಿಯಲ್ಲಿ ಮೂಢನಂಬಿಕೆಗಳನ್ನು ಯಾವ ರೀತಿಯಿಂದಲೂ ನಂಬಬಾರದು ಸೇರಿದಂತೆ ಹಲವಾರು ಅಂಶಗಳು ಮಕ್ಕಳು ಕುತೂಹಲದಿಂದ ಓದುವಂತೆ ಕಥೆಗಳು ಮೂಡಿ ಬಂದಿವೆ ಎಂದರು.
ಶಂಕರಶ್ರೀ ದತ್ತಿನಿಧಿ ಪ್ರಶಸ್ತಿ ಸ್ವೀಕರಿಸಿದ ಸಾಹಿತಿ ಬಾಬು ಕೃಷ್ಣಮೂರ್ತಿ ಮಾತನಾಡಿ, ಸಾಹಿತಿಗಳಿಗೆ ಜಾತಿಬೇಧಭಾವ ಇರುವದಿಲ್ಲ. ಸಾಹಿತ್ಯಕ್ಕೆ ಬಡತನ-ಶ್ರೀಮಂತಿಕೆ ಇರುವದಿಲ್ಲ. ಸಾಹಿತ್ಯಾಸಕ್ತರೆಲ್ಲರೂ ಸರಸ್ವತಿಯ ಆರಾಧಕರು. ಈ ಸಾಲಿನಲ್ಲಿ ಗ್ರಾಮೀಣ ಸೊಗಡಿನಲ್ಲಿ ಬೆಳೆದ ಬಂಜಾರ ಸಮುದಾಯಕ್ಕೆ ಸೇರಿದ ಸಾಹಿತ್ಯ ಕ್ಷೇತ್ರಕ್ಕೆ ಹಲವಾರು ಕೃತಿಗಳನ್ನು ನೀಡಿರುವ ಇಂದುಮತಿ ಲಮಾಣಿ ಅವರು ನಿಲ್ಲುತ್ತಾರೆ ಎಂದರೆ ತಪ್ಪಾಗಲಾರದು. ಇವರಿಂದ ಸಮಾಜಕ್ಕೆ ಆದರ್ಶಪ್ರಾಯವಾಗುವಂತಹ ಒಳ್ಳೆಯ ಕೃತಿಗಳು ಮುಂಬರುವ ದಿನಗಳಲ್ಲಿಯೂ ಬರುವಂತಾಗಲೆಂದು ಆಶಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ವಿಜಯಪುರದ ಅಂಬಾಭವಾನಿ ಮಹಿಳಾ ಸಂಘದ ಅಧ್ಯಕ್ಷೆ ಸುಧಾ ಬಿಜ್ಜರಗಿ ಮಾತನಾಡಿ, ಜಿಲ್ಲೆಯ ಮಹಿಳಾ ಸಾಹಿತಿಗಳಲ್ಲಿ ಒಬ್ಬರಾಗಿರುವ ಇಂದುಮತಿ ಲಮಾಣಿ ಅವರು ಇದುವರೆಗೂ ಒಳ್ಳೆಯ ಕೃತಿಗಳನ್ನು ನೀಡಿದ್ದಾರೆ. ಇವರಿಂದ ಉತ್ತಮ ಕೃತಿಗಳು ಮೂಡಿಬರುವಂತಾಗಲೆಂದರು.
ಸಾಹಿತಿ ಕಮಲಾ ಗೆಜ್ಜಿ ಕಾಡಿನ ಕರಡಿ ನಾಡಿಗೆ ಬಂತು ಶಿಶು ಕಥಾ ಸಂಕಲನ ಕೃತಿ ಪರಿಚಯಿಸಿದರು. ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ, ರಾಷ್ಟ್ರೋತ್ಥಾನ ಸಾಹಿತ್ಯ ಪರಿಷತ್ತಿನ ವಿಘ್ನೇಶ್ವರ ಮಾತನಾಡಿದರು.
ವೇದಿಕೆಯಲ್ಲಿ ಜನಪದ ಕಲಾವಿದರಾದ ವಸಂತ ಚವ್ಹಾಣ, ಆರ್.ಬಿ.ನಾಯಕ, ಡಾವಣಗೇರಿ ಡಿವೈಎಸ್ಪಿ ಬಿ.ಎಸ್.ಬಸವರಾಜ, ತುಕರಾಮ ರಜಪೂತ, ರಾಜು ರಾಠೋಡ, ಶಾಂತಾ ಪಾಟೀಲ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ ಇತರರು ಇದ್ದರು. ವಿವೇಕಾನಂದ ಕಲ್ಯಾಣಶೆಟ್ಟಿ ಸ್ವಾಗತಿಸಿದರು. ಆರ್.ಜಿ.ಅಳ್ಳಗಿ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲೆಯ ಎಲ್ಲ ತಾಲೂಕುಗಳ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.