Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಳಿಗನುಗುಣವಾಗಿ ಸಾಹಿತ್ಯ ರಚನೆ :ಸೂಳಿಬಾವಿ
(ರಾಜ್ಯ ) ಜಿಲ್ಲೆ

ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಳಿಗನುಗುಣವಾಗಿ ಸಾಹಿತ್ಯ ರಚನೆ :ಸೂಳಿಬಾವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೇ.27-28 ರಂದು ವಿಜಯಪುರದಲ್ಲಿ ರಾಜ್ಯಮಟ್ಟದ ೯ನೇ ಮೇ ಸಾಹಿತ್ಯ ಮೇಳ

ವಿಜಯಪುರ: ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಳಿಗನುಗುಣವಾಗಿ ಇಂದು ಸಾಹಿತ್ಯ ರಚನೆ ಹಾಗೂ ಪ್ರಚಾರಗಳು ಆಗುತ್ತಿದೆ. ಸಾಹಿತ್ಯವನ್ನು ಜನತೆಯಿಂದ ದೂರ ಮಾಡಿ ಕಾರ್ಪೋರೇಟಿಕರಣಗೊಳಿಸುವ ಕೆಲಸ ನಡೆಯುತ್ತಿದೆ. ಆ ಮೂಲಕ ಕನ್ನಡ ಸಾಹಿತ್ಯವನ್ನು ಬೂಸಾದ ಕಡೆ ಹೊರಳಿಸುವ ಪ್ರಯತ್ನ ವ್ಯಾಪಕವಾಗಿ ನಡೆಯುತ್ತಿದೆ ಎಂದು ಲಡಾಯಿ ಪ್ರಕಾಶನದ ಪ್ರಕಾಶಕರಾದ ಬಸವರಾಜ ಸೂಳಿಬಾವಿ ವಿಷಾದಿಸಿದರು.
ಶುಕ್ರವಾರ ನಗರದ ಬುದ್ಧವಿಹಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕನ್ನಡ ಸಾಹಿತ್ಯ ಪರಂಪರೆ ಜನಮುಖಿ, ಜನತೆಗೋಸ್ಕಕರ ಸಾಹಿತ್ಯ ಪರಂಪರೆಯನ್ನು ಮರುಕಳುಸುವ ಉದ್ದೇಶವನ್ನು ಹೊಂದಿ ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶನ, ಕವಲಕ್ಕಿ ಚಿತ್ತಾರ ಕಲಾ ಬಳಗ ಧಾರವಾಡ, ಮೇ ಸಾಹಿತ್ಯ ಮೇಳ ಬಳಗ ವಿಜಯಪುರದ ವತಿಯಿಂದ ಮೇ 27, 28 ರಂದು ನಗರದ ಕಂದಗಲ್ಲ ಹನುಮಂತಾಯ ರಂಗಮAದಿರದಲ್ಲಿ ರಾಷ್ಟ್ರ ಮಟ್ಟದ ಚಿಂತಕರು ಪ್ರತಿನಿಧಿಗಳು ಸೇರಿದಂತೆ ರಾಜ್ಯದ ಸಾಹಿತಿಗಳು ಚಿಂತಕರು ಪ್ರತಿನಿಧಿಗಳು ಭಾಗವಹಿಸುವ ೯ನೇ ಮೇ ಸಾಹಿತ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ವಿಜಯಪುರ ಜಿಲ್ಲೆಗೂ ಪ್ರಗತಿಪರ ವಿಚಾರಕ್ಕೂ ಅವಿನಾಭಾವ ಸಂಬAಧವಿದೆ. ವಿಜಯಪುರದಲ್ಲಿ ಹಿಂದೆ ಬಂಡಾಯ ಸಾಹಿತ್ಯ ಸಮ್ಮೇಳನ, ಸಮಾವೇಶ ಕೂಡ ಆಗಿತ್ತು. ದಲಿತ ಸಾಹಿತ್ಯ ಸಮಾವೇಶ ಆಗಿದೆ. ಈಗ ಬಹುಮುಖ್ಯವಾಗಿ ಪ್ರಗತಿಪರವಾದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವAತಹ ಜನತೆಗಾಗಿ ಸಾಹಿತ್ಯದ ಉದ್ದೇಶವನ್ನು ಹೊಂದಿ ಈ ಮೇ ೯ನೇ ಸಮ್ಮೇಳವನ್ನು ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಾಹಿತ್ಯ ಮೇಳಕ್ಕೆ ಸರ್ಕಾರದಿಂದಾಗಲಿ ಯಾವುದೇ ಸಂಸ್ಥೆಗಳಿAದಾಗಲಿ, ರಾಜಕಾರಣಿಗಳಿಂದಾಗಲಿ ಯಾವುದೇ ರೀತಿಯ ಅನುದಾನವನ್ನು ನಾವು ತೆಗೆದುಕೊಳ್ಳುತ್ತಿಲ್ಲ. ಮುಖ್ಯವಾಗಿ ಸಮಾನ ಮನಸ್ಕ, ಸಹಭಾಗಿ ಗೆಳೆಯರು ಸ್ವತ ತಮ್ಮ ಕೈಲಾದ ತನು,ಮನ,ಧನ ಸಹಕಾರವನ್ನು ಪಡೆದು ಆಯೋಜಿಸಲಾಗಿದೆ ಎಂದರು.
ಈ ಸಮ್ಮೇಳನಕ್ಕೆ ೧೫೦೦ ಜನ ಪ್ರತಿನಿಧಿಗಳು ರಾಜ್ಯಾದ್ಯಂತ ಆಗಮಿಸುತ್ತಿದ್ದಾರೆ. ಈ ಸಮ್ಮೇಳನದಲ್ಲಿ ಕಲ್ಕತ್ತದ ಹರ್ಷ ಮಂದೇರ, ಟೀಸ್ಟ್ ಸೆತಲ್ವಾಡ ಮೊದಲಾದ ಚಿಂತಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಈ ೯ನೇ ಮೇ ಸಮ್ಮೇಳನವನ್ನು ಹೋರಾಟ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪ್ರಕಾಶ ಹಿಟ್ನಳ್ಳಿ, ನಮ್ಜಾ ಬಾಂಗಿ, ಭೀಮಶಿ ಕಲಾದಗಿ, ಉಮಾ ಎಂ. ಕಲ್ಬುರ್ಗಿ, ತುಕಾರಾಂ ಚಂಚಲಕರ್, ವಿಹಾನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.
ದೇಶದ ಸಂವಿಧಾನವನ್ನು ಬದಲಾಯಿಸುವ, ಸಂವಿಧಾನವನ್ನೇ ನಗಣ್ಯಗೊಳಿಸುವಂತಹ ಕೆಲಸ ಕೂಡ ನಡೆಯುತ್ತಿದೆ. ಇದು ಆಗಕೂಡದು. ಪ್ರಜೆಗಳು ಈ ದೇಶವನ್ನು ಆಳುವಂತಾಗಬೇಕು. ಇದು ಇಡೀ ಸ್ವಾತಂತ್ರ‍್ಯ ಹೋರಾಟಗಾರರ ಕನಸು ಕೂಡ ಆಗಿತ್ತು. ಆದರೆ ಇವತ್ತು ಕನಸುಗಾರಿಕೆಯ ತಳಹದಿಯು ಅಲ್ಲಾಡುಸುವ ಪರಿಸ್ಥಿತಿಗೆ ತಲೆದೋರಿದೆ. ಪತ್ರಕರ್ತರನ್ನು ಸಹ ಜೈಲಿಗೆ ಅಟ್ಟುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ದಮನಗೊಳಿಸಲಾಗುತ್ತಿದೆ. ಧ್ವನಿ ಎತ್ತುವವರ ಧ್ವನಿ ಅಡಗಿಸುವ ಹುನ್ನಾರ ನಡೆಯುತ್ತಿದೆ. ಆದ್ದರಿಂದ ಈ ಸಮ್ಮೇಳನದಲ್ಲಿ ಭಾರತೀಯ ಪ್ರಜಾತಂತ್ರ ಚಾರಿತ್ರಿಕ ನೋಟ, ರಾಷ್ಟ್ರೀಯ ಹೋರಾಟ ಆಶಯಗಳು, ಸಮ ಸಮಾಜದ ಕನಸುಗಳು, ಸಂವಿಧಾನದ ಪರಿಕಲ್ಪನೆ ಮತ್ತು ಅಂಬೇಡ್ಕರ್ ಕನಸುಗಳು, ಪ್ರಜಾತಂತ್ರ ಸಾಗಿದ ದಾರಿ ಅಸ್ಮಿತೆ ರಾಜಕಾರಣ, ದಲಿತ , ಆದಿವಾಸಿ ಧಾರ್ಮಿಕ ಅಲ್ಪಸಂಖ್ಯಾತ ಹಿಂದುಳಿದ ವರ್ಗ, ಮಹಿಳಾ ನೆಲೆ, ಬೌದ್ಧ , ಸೂಫಿ, ಶರಣ ಪರಂಪರೆಯಲ್ಲಿ ಪ್ರಜಾತಂತ್ರದ ಆಶಯಗಳು, ಪ್ರಜಾಪ್ರಭುತ್ವ : ಯುವ ಸ್ಪಂದನ, ಪ್ರಜಾತಂತ್ರದ ಬಿಕ್ಕಟ್ಟುಗಳು, ಎದುರಿಸುವ ಬಗೆ ಕುರಿತು ವಿಶಿಷ್ಠ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸೂಳಿಬಾವಿ ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅನೀಲ ಹೊಸಮನಿ, ಪ್ರಭುಗೌಡ ಪಾಟೀಲ, ವಾಸುದೇವ ಕಾಳೆ, ಅಭಿಷೇಕ ಚಕ್ರವರ್ತಿ, ಅಕ್ರಂ ಮಾಶ್ಯಾಳಕರ, ದೊಡ್ಡಣ್ಣ ಭಜಂತ್ರಿ, ಎ.ಎಲ್.ನಾಗೂರ, ಚಂದ್ರಶೇಖರ ಘಂಟೆಪ್ಪಗೋಳ, ಅಬ್ದುಲರೆಹಮಾನ ಬಿದರಕುಂದಿ, ದ್ರಾಕ್ಷಾಯಿಣಿ ಬಿರಾದಾರ, ಚೆನ್ನು ಕಟ್ಟಿಮನಿ, ಸಿದ್ರಾಮ ಬಿರಾದಾರ, ಭರಮಣ್ಣ ತೋಳಿ, ಎಂ.ಬಿ.ಕಟ್ಟಿಮನಿ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public news udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.