Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಳೆಯಿಂದ ಇಬ್ರಾಹಿಂಪುರ ಶ್ರೀ ನಂದಬಸವೇಶ್ವರ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ನಾಳೆಯಿಂದ ಇಬ್ರಾಹಿಂಪುರ ಶ್ರೀ ನಂದಬಸವೇಶ್ವರ ಜಾತ್ರಾ ಮಹೋತ್ಸವ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರ ಹೊರವಲಯದ ಇಬ್ರಾಹಿಂಪುರ ಪೇಠದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಶ್ರೀ ನಂದಬಸವೇಶ್ವರ ಜಾತ್ರಾ ಮಹೋತ್ಸವವು ಇದೇ ದಿ. ೨೩ ರಿಂದ ೨೫ ರ ವರೆಗೆ ವಿಜೃಂಭಣೆಯಿಂದ ಜರುಗಲಿದೆ.
ಜಾತ್ರೆಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಜಾತ್ರೆಯ ಹಿನ್ನೆಲೆಯಲ್ಲಿ ನಂದಬಸವೇಶ್ವರ ದೇವಸ್ಥಾನ ಕಟ್ಟಡಕ್ಕೆ ಸುಣ್ಣ ಬಣ್ಣ ಹಚ್ಚಿ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಅಲಂಕೃತ ನಂದಿಕೋಲ ಮೆರವಣಿಗೆ ಈ ಜಾತ್ರೆಯ ಒಂದು ಪ್ರಮುಖ ಆಕರ್ಷಣೆ. ಜಾತ್ರೆ ಎಂದಮೇಲೆ ನಾಟಕ ಪ್ರದರ್ಶನವಿದ್ದದ್ದೇ. ಸ್ಥಳೀಯ ಯುವಕರೇ ನಾಟಕ ಕಲಿತು ಈ ಜಾತ್ರೆಯಲ್ಲಿ ಅಭಿನಯಿಸಲಿದ್ದಾರೆ.
ಜಾತ್ರೆಯ ಮೊದಲ ದಿನವೇ
ಅಂದರೆ ದಿ. ೨೩ ರಂದು ರಾತ್ರಿ ೧೦.೩೦ಕ್ಕೆ ಸ್ಥಳೀಯ ಯುವ ಕಲಾವಿದರನ್ನೊಳಗೊಂಡ ಶ್ರೀ ನಂದಬಸವೇಶ್ವರ ನಾಟ್ಯ ಸಂಘದಿಂದ “ಹುಚ್ಚ ಹಚ್ಚಿದ ಕಿಚ್ಚು” ಎಂಬ ಸುಂದರ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳುವುದು.
ದಿ.೨೪ ರಂದು ಬೆಳಿಗ್ಗೆ ೬ಕ್ಕೆ ಅಭಿಷೇಕ, ೯ಕ್ಕೆ ನಂದಿಕೋಲ ಮೆರವಣಿಗೆ ನಡೆಯುವುದು. ಶ್ರೀ ನಂದಬಸವೇಶ್ವರ ದೇವಸ್ಥಾನದಿಂದ ಹೊರಡುವ ನಂದಿಕೋಲ ಮೆರವಣಿಗೆ ಗ್ರಾಮದ ಎಲ್ಲ ಭಕ್ತಾದಿಗಳ ಮನೆಗಳಿಗೆ ಭೇಟಿಕೊಟ್ಟು ಮರಳಿ ಮಧ್ಯಾಹ್ನ ೧ ಗಂಟೆಗೆ ನಂದಬಸವೇಶ್ವರ ದೇವಸ್ಥಾನ ತಲುಪುವುದು. ನಂತರ ಮಧ್ಯಾಹ್ನ ೧.೩೦ ರಿಂದ ರಾತ್ರಿ ೯.೩೦ ರವರೆಗೆ ಮಹಾಪ್ರಸಾದ ನಡೆಯುವುದು.
೨೫ ರಂದು ಮಧ್ಯಾಹ್ನ ೧ ಕ್ಕೆ ನಂದಬಸವೇಶ್ವರ ದೇವಸ್ಥಾನದಿಂದ ನಂದಿಕೋಲ ಮೆರವಣಿಗೆ ಪ್ರಾರಂಭವಾಗಿ ಇಬ್ರಾಹಿಂಪುರದ ಎಲ್ಲ ಭಕ್ತಾದಿಗಳ ಮನೆಗಳಿಗೆ ಭೇಟಿಕೊಟ್ಟು ಸಂಜೆ ೪.೩೦ಕ್ಕೆ ಕನಕದಾಸ ಬಡಾವಣೆ, ಅಲ್ಲಾಪುರ ಓಣಿ ಮಾರ್ಗವಾಗಿ ಸಂಚರಿಸಿ ಭಕ್ತರ ಮನೆಗಳಿಗೆ ಭೇಟಿ ಕೊಡುತ್ತ ಸಂಜೆ ೬ಕ್ಕೆ ರೇಲ್ವೆ ಸ್ಟೇಷನ್ ಮುಂದಿರುವ ಕರ್ನಾಟಕ ಜಿನ್ನಿಂಗ್ ಫ್ಯಾಕ್ಟರಿ ಎದುರಿಗೆ ಶ್ರೀ ನಂದಬಸವೇಶ್ವರ ಹಾಗೂ ಶ್ರೀ ಪವಾಡಬಸವೇಶ್ವರ ದೇವರು ಎದುರುಗೊಳ್ಳುವುದು. ನಂತರ ಶ್ರೀ ಸವಳಿಯವರ ತೋಟದ ಬಾವಿಯಲ್ಲಿ ಅಣ್ಣ-ತಮ್ಮಂದಿರ ಗಂಗಾಭಿಷೇಕ, ರಾತ್ರಿ ೮ ಕ್ಕೆ ಮೆರವಣಿಗೆ ಮರಳಿ ಅಲ್ಲಾಪುರ ಅಗಸಿ, ಜುಮ್ಮಾಮಸೀದಿ, ದಿವಟಗೇರಿ ಗಲ್ಲಿ ಮಾರ್ಗವಾಗಿ ಹಾಯ್ದು ಬಡಿಕಮಾನ ಹತ್ತಿರದ ಕಸಬಾ ಚಾವಡಿಗೆ ಆಗಮಿಸುವುದು.‌ಅಲ್ಲಿ ಮಂಗಳಾರತಿ ಕಾಕಡಾರತಿ ನಡೆಯುವುದು. ನಂತರ ಶ್ರೀ ಪವಾಡ ಬಸವೇಶ್ವರರನ್ನು ಬೀಳ್ಕೊಟ್ಟು ಕಮಾನಖಾನ ಬಜಾರ ಮಾರ್ಗವಾಗಿ ಭಕ್ತಾದಿಗಳ ಮನೆಗೆ ಭೇಟಿ ಕೊಟ್ಟು ರಾತ್ರಿ ೧೦ಕ್ಕೆ ಶ್ರೀ ನಂದಬಸವೇಶ್ವರ ದೇವಸ್ಥಾನಕ್ಕೆ ಬಂದು ಗದ್ದುಗೆಗೊಳ್ಳುವುದು.
ಈ ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಂದಬಸವೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ನಂದಬಸವೇಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ ಹಾಗೂ ಶ್ರೀ ನಂದಬಸವೇಶ್ವರ ಜಾತ್ರಾ ಕಮೀಟಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.