ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ದಿ.೧೦-೦೫-೨೦೨೩ ರಂದು ಮತದಾನ ಜರುಗಲಿದ್ದು, ಮತದಾನ ದಿನ ಹಾಗೂ ಮತದಾನ ಪೂರ್ವ ದಿನದಂದು ಜಿಲ್ಲೆಯ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗುವ ಸಂತೆ, ಜಾತ್ರೆ ಮತ್ತು ಉತ್ಸವಗಳನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.
ಮತದಾನವು ಶಾಂತಿಯುತವಾಗಿ ಜರುಗಿಸುವ ದೃಷ್ಟಿಯಿಂದ ಮತದಾನ ಪೂರ್ವ ದಿನವಾದ ದಿನಾಂಕ : ೦೯-೦೫-೨೦೨೩ ಹಾಗೂ ಮತದಾನ ದಿನವಾದ ದಿನಾಂಕ : ೧೦-೦೫-೨೦೨೩ರ ಎರಡೂ ದಿನಗಳಂದು ಜಿಲ್ಲೆಯ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗುವ ಸಂತೆ, ಜಾತ್ರೆ ಮತ್ತು ಉತ್ಸವಗಳನ್ನು ನಿಷೇಧಿಸಿ ಅವರು ಆದೇಶ ಹೊರಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment