Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಶೋಕ ಮನಗೂಳಿ ಗೆಲುವು ರಾಜ್ಯದ ಗೆಲುವು :ಶಿವಾನಂದ ಪಾಟೀಲ
(ರಾಜ್ಯ ) ಜಿಲ್ಲೆ

ಅಶೋಕ ಮನಗೂಳಿ ಗೆಲುವು ರಾಜ್ಯದ ಗೆಲುವು :ಶಿವಾನಂದ ಪಾಟೀಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ರಾಜ್ಯ ರಾಜಕಾರಣ ಮತ್ತು ವಿಧಾನ ಸಭಾಕ್ಷೇತ್ರಗಳಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಅದರಂತೆ ಮೇ.೧೦ರಂದು ಮತದಾರರು ಸಹ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಗೆಲ್ಲಿಸುತ್ತಾರೆ ಎಂದು ಬಸವನ ಬಾಗೇವಾಡಿಯ ಶಾಸಕ ಹಾಲಿ ಅಭ್ಯರ್ಥಿ ಶಿವಾನಂದ ಪಾಟೀಲ ಹೇಳಿದರು.
ನಗರದ ಮಾಂಗಲ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ನಾವೆಲ್ಲ ಒಗ್ಗಟ್ಟಾಗಿ ಗೆಲ್ಲಬೇಕಾಗಿತ್ತು. ಆದರೆ ಕೆಲವು ವೈಮನಸ್ಸಿನಿಂದ ಸಾಧ್ಯವಾಗಲಿಲ್ಲ. ಮತ್ತು ಆಗಿನ ಬಿಜೆಪಿ ಸರಕಾರ ದುಡ್ಡಿನ ಮಳೆಯನ್ನು ಹರಿಸಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಕಾರಣ ಆ ಗೆಲುವು ನಿರಂತರವಲ್ಲ. ಈ ಬಾರಿ ಸಿಂದಗಿ ಕಾಂಗ್ರೆಸ್ ಮತಕ್ಷೇತ್ರದ ಅಭ್ಯರ್ಥಿಯಾದ ಅಶೋಕ ಮನಗೂಳಿ ಗೆದ್ದರೆ ಅದು ಇಡೀ ರಾಜ್ಯದ ಗೆಲುವಾಗುತ್ತದೆ ಎಂದರು.
ಈ ವೇಳೆ ಇಂಡಿ ಶಾಸಕ ಹಾಲಿ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಮಾತನಾಡಿ, ಕಳೆದ ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಸರಕಾರ ಹಣವನ್ನು ನೀರು ಹರಿದ ಹಾಗೆ ದುಡ್ಡಿನ ಸುರಿಮಳೆಯಲ್ಲಿ ಸುರಿಸುವುದರ ಜೊತೆಗೆ ಲಕ್ಷö್ಮಣ ಸವದಿ ಅವರ ಪರಿಶ್ರಮದಿಂದ ಗೆಲುವಾಗಿತ್ತು. ಅದೇ ರೀತಿ ಸವದಿಯವರ ಮೂಲಕವೇ ಮತ್ತೇ ಸಿಂದಗಿಯಲ್ಲಿ ಈ ಸಲ ಕಾಂಗ್ರೆಸ್ ಗೆಲುವು ಆಗಲಿದೆ. ರಾಜ್ಯದಲ್ಲಿ ಒಳ್ಳೆಯ ಸರಕಾರ ಬರಬೇಕು, ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆಯಬೇಕು ಎಂದು ಮತದಾರರು ತೀರ್ಮಾನ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗೆ ಮತ ನೀಡುವ ಮೂಲಕ ನಾವು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಇವರ ಕೈ ಬಲಪಡಿಸುವ ಮೂಲಕ ಪ್ರತಿಯೊಬ್ಬ ಕಾರ್ಯಕರ್ತರೂ ಮನೆ ಮನೆಗೆ ತೆರಳಿ ಸರಕಾರದ ಗ್ಯಾರಂಟಿ ಭರವಸೆಯ ಯೋಜನೆ, ಸಾಧನೆಗಳನ್ನು ಕ್ರಮ ಸಂಖ್ಯೆ ಒಂದಕ್ಕೆ ನಿಮ್ಮ ಮತ ಹಾಕಿ ಎಂದು ಮನವರಿಕೆ ಮಾಡಿ ಕೊಡಿ ಎಂದರು.
ಇದೇ ಸಂದರ್ಭದಲ್ಲಿ ಬಬಲೇಶ್ವರ ಕ್ಷೇತ್ರದ ಶಾಸಕ, ಹಾಲಿ ಅಭ್ಯರ್ಥಿ ಎಂ.ಬಿ.ಪಾಟೀಲ ಮಾತನಾಡಿ, ಕಾಂಗ್ರೆಸ್ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕಾಂಗೆಸ್ ಸರಕಾರವಿದ್ದರೆ ಮಾತ್ರ ಜನ ನೆಮ್ಮದಿಯಿಂದ ಬದುಕಲು ಸಾಧ್ಯ. ಮಹಿಳೆಯರಿಗೆ, ನಿರುದ್ಯೋಗಿಗಳಿಗೆ, ಬಡವರಿಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿದೆ. ನಾಳೆಯ ನೆಮ್ಮದಿಗಾಗಿ ಪತ್ರಿಯೊಬ್ಬರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮುಖಾಂತರ ಕ್ಷೇತ್ರದ ಅಭಿವೃದ್ಧಿಗಾಗಿ ಆಶೀರ್ವಾದ ಮಾಡಿ. ನಮ್ಮ ಸರಕಾರ ಈಗಾಗಲೇ ಕೊಟ್ಟ ಮಾತಿನಂತೆ ಹಲವಾರು ಯೋಜನೆಯ ನೀಡಿ ನುಡಿದಂತೆ ನಡೆದಿದ್ದೇವೆ. ಆದರೆ ಬಿಜೆಪಿ ಸರಕಾರ ೨೦೧೮ರಲ್ಲಿ ೬೦೦ ಭರವಸೆಗಳನ್ನು ನೀಡಿತ್ತು, ಅದರಲ್ಲಿ ಸುಮಾರು ೪೮ರಷ್ಟು ಮಾತ್ರ ಈಡೇರಿಸಿದೆ ಎಂದು ಟೀಕಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ರಾಜು ಆಲಗೂರ, ಎಸ್.ಎಂ.ಪಾಟೀಲ ಗಣಿಹಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಠ್ಠಲ ಕೋಳೂರ, ಮಲ್ಲಣ್ಣ ಸಾಲಿ, ಎಂ.ಆರ್.ತಾAಬೋಳ್ಳಿ, ಶರಣಪ್ಪ ವಾರದ, ಗುರಣ್ಣಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಹಣಮಂತ ಸುಣಗಾರ, ಬಸನಗೌಡ ಪಾಟೀಲ, ಚನ್ನು ವಾರದ, ರಾಕೇಶ ಕಲ್ಲೂರ, ಮಹಾನಂದ ಬಮ್ಮಣ್ಣಿ, ಸುನಂದಾ ಯಂಪುರೆ, ಸಿದ್ದಣ್ಣ ಹಿರೆಕುರುಬರ, ರಾಜಶೇಖರ ಕೂಚಬಾಳ, ಸೇರಿದಂತೆ ಕಾರ್ಯಕರ್ತರು ಇದ್ದರು.

congress sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.