ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಅಂದು ಡಾ.ಅಂಬೇಡ್ಕರ್ ಅವರು ಸಂವಿಧಾನ ಬರೆಯದಿದ್ದರೆ ನಮ್ಮ ದೇಶದಲ್ಲಿಯಿರುವ ಸಣ್ಣ ಪುಟ್ಟ ಸಮುದಾಯಗಳು ಸಾವಿಗೆ ಶರಣಾಗುವ ಸಮಯ ಬರುತಿತ್ತು. ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನ ನಮ್ಮದು ಎಂದು ಟಿಪ್ಪು ಕ್ರಾಂತಿ ಸೇನೆಯ ಸಂಸ್ಥಾಪಕ ದಸ್ತಗೀರ ಮುಲ್ಲಾ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಟಿಪ್ಪು ಕ್ರಾಂತಿ ಸೇನೆ ವತಿಯಿಂದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಕೈಬಿಡುವಂತೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು.ಜೊತೆಗೆ ಅಲಹಾಬಾದ ಹೈಕೋರ್ಟ್ ನ್ಯಾಯಮೂರ್ತಿ ಶೇಖರ ಯಾದವ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಈ ವೇಳೆ ಉತ್ತರ ಕರ್ನಾಟಕ ಅಧ್ಯಕ್ಷ ರಜಾಕ್ ನಾಟೀಕಾರ ಮಾತನಾಡಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಘಟಕದ ಅಧ್ಯಕ್ಷ ಆಸೀಫ್ ಇಂಡಿಕರ್, ನಗರ ಘಟಕ ಅಧ್ಯಕ್ಷ ಇಮ್ರಾನ್ ಭಾಗವಾನ, ಸಾಜೀದ್ ಮುಲ್ಲಾ ಸೇರಿದಂತೆ ಟಿಪ್ಪು ಕ್ರಾಂತಿ ಸೇನೆಯ ಪದಾಧಿಕಾರಿಗಳು ಇದ್ದರು

