– ಡಾ.ಶಶಿಕಾಂತ ಪಟ್ಟಣ
ರಾಮದುರ್ಗ
ಉದಯರಶ್ಮಿ ದಿನಪತ್ರಿಕೆ
ಸಾಹಿತ್ಯ ಸಮ್ಮೇಳನ
ದೊಡ್ಡ ಶಾಮಿಯಾನ
ಝಗ ಮಗಿಸುವ
ಲೈಟು ಬೆಳಕು
ಮೈಕಿನ ಕಿರುಚಾಟ
ವೇಷಧಾರಿಗಳ ಕುಣಿತ
ಡೊಳ್ಳು ವಾದ್ಯ ಬಡಿತ
ಅಕ್ಷರ ಜಾತ್ರೆ
ಶಬ್ದಗಳ ಸಂಭ್ರಮ
ಬಂದವರ ಮಾತು
ಉಂಡು ಸಾಗುವ
ಕೊಂಡು ಹೋಗುವ
ಪುಂಡರ ಸಂತೆ
ಬಾಡೂಟಕೆ ಸಂಪು
ಭರ್ಜರಿ ಊಟ
ಕನ್ನಡ ಉಳಿಸ ಬನ್ನಿ
ಸಂಜೆ ಮಂತ್ರಿಯ ಕರೆ
ಟಿವಿ ಪತ್ರಿಕೆ
ಮಾಧ್ಯಮದವರ ಹಬ್ಬ
ಮೂಲೆಯಲ್ಲಿ
ಸೊರಗುವ ಪುಸ್ತಕ
ಸಾಯದೆ ಕೈ ಕಟ್ಟಿ
ನಿಂತ ಲೇಖಕ ಪ್ರಕಾಶಕ
ಮಾಡಿ ಮುಗಿಸುವರು
ಸಾಹಿತ್ಯ ಯಾತ್ರೆ
ಮೊದಲಿನಂತೆ
ಬದಲಾಗಿಲ್ಲ
ಬದಲಾಗುವುದಿಲ್ಲ
ಬಡವಾಯಿತು ಕನ್ನಡ
