Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿಯಲ್ಲಿ ಸಂಭ್ರಮದ ಎಳ್ಳ ಅಮವಾಸ್ಯೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿಯಲ್ಲಿ ಸಂಭ್ರಮದ ಎಳ್ಳ ಅಮವಾಸ್ಯೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸೋಮವಾರ ಎಳ್ಳ ಅಮವಾಸ್ಯೆದಂಗವಾಗಿ ರೈತ ಬಾಂಧವರು ತಮ್ಮ ಹೊಲ, ತೋಟಗಳಲ್ಲಿ ಬೆಳೆದು ನಿಂತ ಬೆಳೆಗೆ ಹಾಗೂ ಭೂತಾಯಿಗೆ ಪೂಜೆ ಸಲ್ಲಿಸಿ ಸಂಪ್ರದಾಯದಂತೆ ಚೆರಗ ಚೆಲ್ಲಿ ಸಂಭ್ರಮಿಸುವ ಎಳ್ಳ ಅಮವಾಸ್ಯೆಯನ್ನು ಆಚರಿಸಿದರು.
ಕೆಲ ರೈತ ಬಾಂಧವರು ತಮ್ಮ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಹೊಲಗಳಿಗೆ ತೆರಳಿದರೆ, ಅಲ್ಪಸ್ವಲ್ಪ ಬೆಳೆ ಇದ್ದ ರೈತ ಬಾಂಧವರು ಮನೆಯ ಸದಸ್ಯರೊಂದಿಗೆ ತಮ್ಮ ಜಮೀನಿಗೆ ತೆರಳಿ ಚೆರಗ ಚೆಲ್ಲುವ ಹಬ್ಬ ಆಚರಿಸಿದರು.
ಬೆಳಗ್ಗೆಯಿಂದಲೇ ಮನೆಗಳಲ್ಲಿ ಮಹಿಳೆಯರು ಎಳ್ಳ ಅಮವಾಸ್ಯೆ ಹಬ್ಬಕ್ಕಾಗಿ ಸಜ್ಜಿ ಕಡಬು, ಹೂರಣದ ಕಡಬು, ಹೂರಣದ ಹೋಳಗಿ, ಶೇಂಗಾ ಹೋಳಗಿ, ಸಜ್ಜಿ ರೊಟ್ಟಿ, ಚಪಾತಿ, ವಿವಿಧ ತರಹದ ಕಾಳು, ತರಕಾರಿ ಪಲ್ಯೆ ಸೇರಿದಂತೆ ವಿವಿಧ ಖಾದ್ಯಗಳನ್ನು ತಯಾರಿಸಿ ನಂತರ ಊರ ದೇವರಿಗೆ ನೈವೇದ್ಯ ಕೊಟ್ಟ ನಂತರ ಬುತ್ತಿ ಕಟ್ಟಿಕೊಂಡು ತಮ್ಮ ತಮ್ಮ ಹೊಲಗಳಿಗೆ ಎತ್ತಿನ ಬಂಡಿ, ಟ್ರ್ಯಾಕ್ಟರ್, ಟಂಟಂ ಸೇರಿದಂತೆ ಇತರೇ ವಾಹನಗಳ ಮೂಲಕ ಕುಟುಂಬ ಸದಸ್ಯರು ಹಾಗೂ ತಮ್ಮ ಬಂಧು ಬಳಗದೊಂದಿಗೆ ಹೊಲಗಳಿಗೆ ತೆರಳಿದರು. ಹೊಲದಲ್ಲಿ ಬೆಳೆದು ನಿಂತ ಬೆಳೆಗೆ , ಹೊಲದ ಬನ್ನಿ ಮರದ ಕೆಳಗಿರುವ ಲಕ್ಷ್ಮೀದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮನೆಯಿಂದ ತಂದ ನೈವೇದ್ಯವನ್ನು ಎಡೆ ಹಿಡಿದು ನಂತರ ಭೂತಾಯಿಗೆ ಸಾಮೂಹಿಕ ಚೆರಗ ಚೆಲ್ಲಿದರು. ನಂತರ ಸಾಮೂಹಿಕ ಭೋಜನದಲ್ಲಿ ಎಲ್ಲರೂ ಎಳ್ಳ ಅಮವಾಸ್ಯೆಯ ಊಟದ ಸವಿಯನ್ನು ಸವಿದರು.
ಊಟದ ನಂತರ ಮಕ್ಕಳು ವಿವಿಧ ರೀತಿಯ ಆಟಗಳನ್ನು ಆಡುವದರೊಂದಿಗೆ ಸಂತಸ ಪಟ್ಟರು. ಹಿರಿಯರು ಮಳೆ, ಬೆಳೆ ಕುರಿತಾಗಿ ಚರ್ಚಿಸುವುದರೊಂದಿಗೆ ಹಿಂದೆ ಅಚರಿಸುತಿದ್ದ ಎಳ್ಳ ಅಮವಾಸ್ಯೆ ಸಂಭ್ರಮವನ್ನು ನೆನಪಿಸಿಕೊಂಡರು.
ಸಂಜೆ ಸೂರ್ಯಾಸ್ತ ಸಮಯ ಹತ್ತಿರವಾಗುತ್ತಿದ್ದಂತೆ ಮತ್ತೊಮ್ಮೆ ಭೂತಾಯಿಗೆ ನಮಸ್ಕರಿಸಿ ತಮ್ಮ ತಮ್ಮ ಮನೆ ಕಡೆಗೆ ತೆರಳಿದ ದೃಶ್ಯ ಕಂಡು ಬಂದಿತು. ಎಳ್ಳ ಅಮವಾಸ್ಯೆ ಪ್ರಯುಕ್ತ ಸೋಮವಾರ ಸಂತೆ ದಿನ ಇದ್ದರೂ ಅಷ್ಟಾಗಿ ಜನರು ಮಾರುಕಟ್ಟೆಯಲ್ಲಿ ಕಂಡುಬರಲಿಲ್ಲ. ಮಾರುಕಟ್ಟೆಯಲ್ಲಿನ ಅಂಗಡಿ-ಮುಂಗಟ್ಟುಗಳು ಸ್ವಯಂ ಘೋಷಿತ ಮುಚ್ಚಲ್ಪಟ್ಟಿದ್ದವು. ಸಂಜೆಯಾಗುತ್ತಿದ್ದಂತೆ ಅಂಗಡಿ-ಮುಂಗಟ್ಟುಗಳು ತೆರೆಯಲ್ಪಟ್ಟವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.