ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆ
ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಪ್ರತಿಷ್ಠಿತ ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕಿನ ಆಡಳಿತ ಮಂಡಳಿಯ ಎಂಟು ನಿರ್ದೇಶಕ ಸ್ಥಾನಗಳಿಗೆ ಭಾನುವಾರ ತೀವ್ರ ಕುತೂಹಲ ಮೂಡಿಸಿದ ಚುನಾವಣೆಯಲ್ಲಿ ಸಂಜೆ ಜರುಗಿದ ಚುನಾವಣೆಯ ಫಲಿತಾಂಶ ಹೊರಬಂದ ನಂತರ ಐವರು ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕರು ಆಯ್ಕೆಯಾದರೆ, ಹಿಂದಿನ ಆಡಳಿತ ಮಂಡಳಿಯ ಪೆನಲ್ ಬಿಟ್ಟು ಮೂವರು ಹೊಸದಾಗಿ ಸ್ಫರ್ಧೆ ಮಾಡಿದ್ದ ಹೊಸ ಪೆನಲ್ಗೆ, ಇನ್ನೊರ್ವ ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕರಿಗೆ ಮತದಾರರು ಅವಕಾಶ ನೀಡಿದ್ದು ಗಮನ ಸೆಳೆಯಿತು.
ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕು ಒಟ್ಟು ೧೩ ನಿರ್ದೇಶಕರ ಆಡಳಿತ ಮಂಡಳಿಯನ್ನು ಹೊಂದಿದೆ. ಇದರಲ್ಲಿ ಐದು ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ಎಂಟು ಸ್ಥಾನಗಳಿಗೆ ಸ್ಪರ್ಧೆ ನಡೆದ ಹಿನ್ನೆಲೆಯಲ್ಲಿ ಡಿ.೨೯ ರಂದು ಚುನಾವಣೆ ನಿಗದಿಯಾಗಿತ್ತು. ಚುನಾವಣೆ ಮತದಾನ ಪ್ರಕ್ರಿಯೆ ಸ್ಥಳೀಯ ಗುರುಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಬ್ಯಾಂಕಿನ ಒಟ್ಟು ೬೮೨ ಮತದಾರರ ಪೈಕಿ ೬೫೬ ಮತದಾರರು ಇಂದು ಜರುಗಿದ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.
ಮತ ಎಣಿಕೆ ಜರುಗಿದ ನಂತರ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಹಿಂದಿನ ಆಡಳಿತ ಮಂಡಳಿಯ ಅಧ್ಯಕ್ಷ ಲೋಕನಾಥ ನೇಮಿಚಂದ ಅಗರವಾಲ(೪೬೩ ಮತ), ಸಿದ್ರಾಮ(ಮುತ್ತು) ರೇವಣಸಿದ್ದಪ್ಪ ಕಿಣಗಿ (೩೨೬ ಮತ), ಜಗದೀಶ ಬಸಪ್ಪ ಕೊಟ್ರಶೆಟ್ಟಿ (೩೫೫ ಮತ), ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ಬಸವರಾಜ ಈರಪ್ಪ ಗೊಳಸಂಗಿ(೩೬೦ ಮತ), ಅನಿಲ ಈರಪ್ಪ ದುಂಬಾಳಿ (೪೪೨ ಮತ), ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ಶಂಕರಗೌಡ ಶಿವನಗೌಡ ಬಿರಾದಾರ(೪೦೮ ಮತ), ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ಉಮೇಶ ಸದಾಶಿವಪ್ಪ ಹಾರಿವಾಳ (೩೬೫ ಮತ), ಪರಿಶಿಷ್ಟ ಜಾತಿ ಕ್ಷೇತ್ರದಿಂದ ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ನೀಲು ಖುಬಾಜಿ ನಾಯಕ (೪೨೩ ಮತ) ಪಡೆದು ಉಳಿದ ಎಂಟು ನಿರ್ದೇಶಕ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಎಂ.ಹಂಗರಗಿ ಘೋಷಿಸಿದರು.
ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆ ವಿಜೇತ ಅಭ್ಯರ್ಥಿಗಳಿಗೆ ಅವರ ಬೆಂಬಲಿಗರು, ಹಿತೈಷಿಗಳು, ಸ್ನೇಹಿತರು ಗುಲಾಲು ಎರಚಿ ಹೂವಿನ ಹಾರ ಹಾಕಿ ಸನ್ಮಾನಿಸಿ ಸಿಹಿ ಹಂಚಿ ಸಂಭ್ರಮಾಚರಿಸಿದರು. ವಿಜೇತ ಅಭ್ಯರ್ಥಿಗಳು ತಮ್ಮ ತಮ್ಮ ಬೆಂಬಲಿಗರೊಂದಿಗೆ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನಕ್ಕೆ ತೆರಳಿ ದೇವರಿಗೆ ಆರತಿ ಬೆಳಗಿ ನಮನ ಸಲ್ಲಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಪಟಾಕ್ಷಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಅವಿರೋಧ ಆಯ್ಕೆಃ ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಸುರೇಖಾ ಈರಣ್ಣ ಪಟ್ಟಣಶೆಟ್ಟಿ,ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕಿ ಕಮಲಾ ಲಿಂಗನಗೌಡ ತಿಪ್ಪನಗೌಡರ, ಹಿಂದುಳಿದ ವರ್ಗ(ಬ) ಕ್ಷೇತ್ರದಿಂದ ಶಿವಾನಂದ ಬಸಪ್ಪ ಪಟ್ಟಣಶೆಟ್ಟಿ, ಹಿಂದುಳಿದ ವರ್ಗ(ಅ) ಕ್ಷೇತ್ರದಿಂದ ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ಶ್ರೀಶೈಲ ಚಂದ್ರಶೇಖರ ಪತ್ತಾರ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಯಮನಪ್ಪಗೌಡ ಕೃಷ್ಣಪ್ಪಗೌಡ ಪಾಟೀಲ ಅವರು ಉಳಿದ ಐದು ಸ್ಥಾನಗಳಿಗೆ ಆಯ್ಕೆಯಾಗಿದ್ದರು.

