Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಹಿತ್ಯಕ್ಕೆ ಅಂಧರ ಕೊಡುಗೆ ಅಪಾರ: ಅಭಿನವ ಸಿದ್ದಾರೂಢ ಶ್ರೀ
(ರಾಜ್ಯ ) ಜಿಲ್ಲೆ

ಸಾಹಿತ್ಯಕ್ಕೆ ಅಂಧರ ಕೊಡುಗೆ ಅಪಾರ: ಅಭಿನವ ಸಿದ್ದಾರೂಢ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಖಿಲ ಕರ್ನಾಟಕ ಅಂಧರ ಪ್ರಥಮ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಂಧತ್ವವನ್ನು ಮೆಟ್ಟಿನಿಂತು ಸಂಗೀತದ ಮೂಲಕ ಸಮಾಜಕ್ಕೆ ಬೆಳಕಾದವರು ಪಂಡಿತ್ ಪಂಚಾಕ್ಷರ ಗವಾಯಿಗಳು. ಅದನ್ನೇ ಧನಾತ್ಮಕವಾಗಿ ಸ್ವೀಕರಿಸಿ ಬದುಕಿನಲ್ಲಿ ಸಾಧಿಸಿದವರು ಬಹಳ ಜನರಿದ್ದಾರೆ. ಅಂಧರಿಗಾಗಿಯೇ ಲಿಪಿ ಸಿದ್ದಪಡಿಸಿದ ಲೂಯಿಸ್ ಬ್ರೆಲ ಅಂಧರಿಗೆ ಬೆಳಕಾದವರು.ಅಂಧರಿಗೆ ಅವಕಾಶ ಬೇಕಷ್ಟೇ, ಬೇಕಾದದ್ದನ್ನು ಸಾಧಿಸುವ ಶಕ್ತಿ ಅವರಲ್ಲಿದೆ ಎಂಬುದಕ್ಕೆ ಪಂಚಾಕ್ಷರ ಗವಾಯಿ ಮತ್ತು ಪುಟ್ಟರಾಜ ಗವಾಯಿಗಳೇ ಸಾಕ್ಷಿ ಎಂದು ಷಣ್ಮುಖಾರೂಢ ಮಠದ ಪೂಜ್ಯಶ್ರೀ ಅಭಿನವ ಸಿದ್ಧಾರೂಢ ಮಹಾಸ್ವಾಮಿಗಳು ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಅಂಧರ ಸಾಹಿತ್ಯ ಪರಿಷತ್ತು ಬೆಂಗಳೂರು, ಇವರು ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನ ವಿಜಯಪುರ ಇವರ ಆಯೋಜನೆಯಲ್ಲಿ ಹಮ್ಮಿಕೊಂಡ ‘ಅಖಿಲ ಕರ್ನಾಟಕ ಅಂಧರ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಂಧರ ಪ್ರಥಮ ಸಾಹಿತ್ಯ ಸಮ್ಮೇಳನ ವಿಜಯಪುರದಲ್ಲಿ ಹಮ್ಮಿಕೊಂಡಿರುವುದು ಇತಿಹಾಸದಲ್ಲಿ ಬರೆದಿಡುವಂತಹದ್ದು, ಸಾಮಾನ್ಯರಿಗಿಂತ ವಿಶಿಷ್ಟ ಸಾಹಿತ್ಯ ರಚಿಸಿದ ಅಂಧರ ಸಾಹಿತ್ಯ ಪ್ರತಿಭೆ ಅನಾವರಣಗೊಂಡಿರುವುದು ಶ್ಲಾಘನೀಯ ಎಂದರು.
ಜ್ಞಾನ ಯೋಗಶ್ರಮದ ಪ. ಪೂ ಬಸವಲಿಂಗ ಸ್ವಾಮಿಗಳು ಮಾತನಾಡಿ ಅಂಧರ ಸಾಹಿತ್ಯವನ್ನು ಪ್ರಕಟಿಸುವ ಕೆಲಸ ಸಂಘ-ಸಂಸ್ಥೆಗಳು ಮಾಡಬೇಕು. ದೃಷ್ಟಿ ಇಲ್ಲದಿದ್ದರೂ ಒಳಗಿನ ಕಣ್ಣಿನ ಮೂಲಕ ಸಾಮಾಜಿಕ,ಆಧ್ಯಾತ್ಮಿಕ ಮೌಲ್ಯಗಳನ್ನು ಬಿತ್ತುವ ಸಾಹಿತ್ಯ ರಚಿಸಿದ ಅಂಧರಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷ ಗೋಷ್ಠಿ ಏರ್ಪಡಿಸಬೇಕು ಎಂದರು.
ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ ಧಾರವಾಡ ಮನಗುಂಡಿ ಶ್ರೀ ಗುರು ಬಸವ ಮಹಾಮನೆಯ ಪೂಜ್ಯಶ್ರೀ ಬಸವಾನಂದ ಸ್ವಾಮೀಜಿ ಮಾತನಾಡಿ ಲೂಯಿಸ್ ಬ್ರೆಲ್ ಗಿಂತ ಮುಂಚೆಯೇ ನಮ್ಮ ಭಾರತದಲ್ಲಿ ಸೂರದಾಸರು ಸಾಹಿತ್ಯ ರಚಿಸಿದರು. ಅಂಧರಲ್ಲಿಯ ವಿಶೇಷ ಶಕ್ತಿಯನ್ನು ಕವನಗಳ ಮೂಲಕ ಸಮಾಜಕ್ಕೆ ಬಿತ್ತರಿಸುತ್ತಿರುವ ಈ ಸಮ್ಮೇಳನವು ವಿಜಯಪುರ ಇತಿಹಾಸದಲ್ಲೇ ಅಜರಾಮರವಾಗಲಿದೆ ಎಂದರು.
ಗೋಷ್ಠಿ ಒಂದರಲ್ಲಿ ಸಾಹಿತ್ಯ ಸಂಗೀತ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಪುಟ್ಟರಾಜ ಗವಾಯಿಗಳ ಕೊಡುಗೆ ಕುರಿತು ಡಾ. ನಾಗಶೆಟ್ಟಿ ಗಾರಂಪಳ್ಳಿ. ಎರಡನೇ ಗೋಷ್ಠಿ ಯಲ್ಲಿ ಹೊಸಗನ್ನಡ ಸಾಹಿತ್ಯ ಲೋಕಕ್ಕೆ ಅಂಧ ಬರಹಗಾರರ ಕೊಡುಗೆ ಕುರಿತು ಡಾ.ವಡ್ಡಗೆರೆ ನಾಗರಾಜಯ್ಯ, ಪ್ರೊ. ದೊಡ್ಡೇಗೌಡರು ವೆಂಕಣ್ಣ, ಗೋಷ್ಠಿ ಮೂರರಲ್ಲಿ ಬ್ರೈಲ್ ಪ್ರಸ್ತುತ ಸವಾಲುಗಳು ಮತ್ತು ಆಧುನಿಕ ಆವಿಷ್ಕಾರಗಳ ಕುರಿತು ರಾಜೇಶ್ ಕಿಣಿ ವಿಶೇಷ ಉಪನ್ಯಾಸ ನೀಡಿದರು.
ಹಿರಿಯ ಸಾಹಿತಿ ಡಾ. ಹೇಮಾ ಪಟ್ಟಣಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ೨೦ ಕವಿಗಳು ಸ್ವರಚಿತ ಕವನ ವಾಚಿಸಿದರು. ನಾಡಿನ ಹಿರಿಯ ಗಾಯಕ ಫಕೀರೇಶ್ ಕಣವಿ, ಸಮಾಜ ಸೇವಕ ಕೆ.ಎಂ.ನಿತ್ಯಾನಂದ,ಜಾನಪದ ಕಲಾವಿದ ನರಸಿಂಹಲು, ಸ್ವಯಂಸೇವಕಿ ಶಾರದಾ, ವೈದ್ಯ ಸುನಿಲ್ ಗೋಖಲೆ, ಅಂಥ ಮಕ್ಕಳ ಶಾಲೆಯ ಸಂಸ್ಥಾಪಕ ಎಂ.ಬಿ. ಉದುಪುಡಿ ಇವರನ್ನು ಸನ್ಮಾನಿಸಲಾಯಿತು. ನಾಡಿನ ಹಿರಿಯ ಸಂಗೀತ ವಿದ್ವಾಂಸ ಡಾ. ಸಿದ್ದರಾಮಯ್ಯ ಪೊಲೀಸ್ ಪಾಟೀಲ್ ಹಾಗೂ ಕುಮಾರಿ ಕೃತಿಕಾ ಜಂಗಿನ್ಮಟ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಗಾನಬನದ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಪಂಡಿತ್ ತೋಂಟದಾರ್ಯ ಕವಿ ಗವಾಯಿಗಳು ಸ್ವಾಗತಿಸಿದರು. ಕರ್ನಾಟಕ ಅಂಧರ ಸಾಹಿತ್ಯ ಪರಿಷತ್ ಅಧ್ಯಕ್ಷ ಮುದುಗೆರೆ ರಮೇಶ್ ಕುಮಾರ್ ಆಶಯ ನುಡಿಗಳನ್ನಾಡಿದರು. ಕೋಶಾಧ್ಯಕ್ಷ ಆರ್. ಎಸ್.ಶಾಂತರಾಮ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಚೈತ್ರಾ ಟಿ. ಮತ್ತು ಚಿದಾನಂದ ಜಡಿಮಠ ನಿರೂಪಿಸಿದರು. ಎಂ. ಕೇಶವಮೂರ್ತಿ ವಂದಿಸಿದರು.
ಕಾರ್ಯಕ್ರಮದಲ್ಲಿ ಬಿ.ಎಚ್. ಹಿರೇಮಠ್, ಆನಂದ್ ಮುಳ್ಸಾವಳಗಿ, ಡಾ. ಪಿ.ವಿ. ನಾಗರಾಜ್, ಡಾ. ಕೃಷ್ಣ ಹೊಂಬಾಳ್, ನಾಗಯ್ಯ ಹಿರೇಮಠ, ಪಂಚಾಕ್ಷರಿ ಶಿರೋಳ್ ಮಠ, ವಿಜಯ್ಕುಮಾರ್ ಕೋತ್ವಾಲ್, ಬಿ.ಎಸ್. ಬಿರಾದಾರ್, ಡಾ. ವಿಜಯಕುಮಾರ್ ಪೂಜಾರಿ, ಮಲ್ಲಿಕಾರ್ಜುನ ಹಿರೇಮಠ ಹಾಗೂ ನಾಡಿನ ವಿವಿಧ ಕಡೆಯಿಂದ ಆಗಮಿಸಿದ ಅಂಧ ಸಾಹಿತಿಗಳು, ಕವಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.