Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಕಾರ್ಯಕರ್ತರಿಗೆ ಬಲವಂತದಿಂದ ಬಿಜೆಪಿ ಶಾಲು ಹಾಕಿ ಅಪಪ್ರಚಾರ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಕಾರ್ಯಕರ್ತರಿಗೆ ಬಲವಂತದಿಂದ ಬಿಜೆಪಿ ಶಾಲು ಹಾಕಿ ಅಪಪ್ರಚಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿಯಿಂದ ರಾಜಕೀಯ ದುರ್ಲಾಭ | ಎಂಎಲ್ಸಿ ಸುನೀಲಗೌಡ ಪಾಟೀಲ ಆರೋಪ

ವಿಜಯಪುರ: ವಿರೋಧಿಗಳು ಬಬಲೇಶ್ವರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮನೆಗಳಿಗೆ ತೆರಳಿ ಬಲವಂತವಾಗಿ ತಮ್ಮ ಪಕ್ಷದ ಶಾಲ್ ಹಾಕಿ ಫೋಟೋ ಕ್ಲಿಕ್ಕಿಸಿ ರಾಜಕೀಯ ದುರ್ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ, ಅವರ ಈ ಪ್ರಯತ್ನ ಫಲ ನೀಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಾಗ್ದಾಳಿ ನಡೆಸಿದ್ದಾರೆ.

ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಮನೆ ಮನೆಗೆ ತೆರಳಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಮತಯಾಚಿಸಿದ ಅವರು ವಿರೋಧಿಗಳ ನಡೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

ಬಿಜೆಪಿಯವರು ಮತಕ್ಷೇತ್ರದ ಎಲ್ಲ ಕಡೆ ಕಾಂಗ್ರೆಸ್ ಕಾರ್ಯಕರ್ತ ಮನೆಗಳಿಗೆ ತೆರಳಿ ಅವರು ಬೇಡವೆಂದರೂ ಒತ್ತಾಯ ಪೂರ್ವಕವಾಗಿ ತಮ್ಮ ಪಕ್ಷದ ಶಾಲ್ ಹಾಕಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಅವರಿಗೆ ಎಷ್ಟು ಮತಗಳು ಬರುತ್ತವೆ ಗೊತ್ತಿಲ್ಲ. ಆದರೆ, ಆ ಕುಟುಂಬಗಳ ಮನಸ್ಸು ನೋಯಿಸುತ್ತಿದ್ದಾರೆ. ಹಲವಾರು ಜನ ಕಾಂಗ್ರೆಸ್ ಕಾರ್ಯಕರ್ತರು ತಮಗಾದ ಇಂಥ ಕೆಟ್ಟ ಅನುಭವಗಳ ಕುರಿತು ವಿಡಿಯೋ ಮೂಲಕ ಸ್ಪಷ್ಠಿಕರಣ ನೀಡುತ್ತಿದ್ದಾರೆ. ಈ ಮೂಲಕ ವಿರೋಧಿಗಳ ಬಂಡವಾಳ ಬಯಲು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ವಿರೋಧಿಗಳು ಎಷ್ಟೇ ಪ್ರಯತ್ನ ಪಟ್ಟರೂ ಅವರ ಯತ್ನ ಫಲಿಸುವುದಿಲ್ಲ. ಎಂ. ಬಿ. ಪಾಟೀಲರು ಮತದಾರರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲಸಿದ್ದಾರೆ. ಇದನ್ನು ಯಾರೂ ಅಳಿಸಲು ಸಾಧ್ಯವಿಲ್ಲ. ನೀರಾವರಿ ಯೋಜನೆಗಳ ಮೂಲಕ ಜನರ ಬದುಕು ಕಟ್ಟಿಕೊಡಲು ಮಾಡಿರುವ ಕೆಲಸಗಳು ಜನರ ಕುಟುಂಬಗಳು ತಲೆತಲಾಂತರಗಳವರೆಗೆ ನೆಮ್ಮದಿಯಿಂದ ಜೀವನ ಸಾಗಿಸುವಂತೆ ಮಾಡಿವೆ ಎಂದು ಅವರು ಹೇಳಿದರು.

ಹಿರಿಯರು ಮತ್ತು ಯುವಕರು ಎಂ. ಬಿ. ಪಾಟೀಲರು ಮಾಡಿರುವ ಅಭಿವೃದ್ಧಿ ಕಾರ್ಯಕಗಳ ಕುರಿತು ಮತದಾರರಿಗೆ ಮನವರಿಕೆ ಮಾಡಿ ಕೊಡಬೇಕು. ಕಾಂಗ್ರೆಸ್ ಪ್ರಚಂಡ ಬಹುಮತದಿಂದ ಆರಿಸಿ ಬರಲು ಕೈಜೋಡಿಸಬೇಕು ಎಂದು ಸುನೀಲಗೌಡ ಪಾಟೀಲ ಹೇಳಿದರು.

ಈ ಸಂದರ್ಭದಲ್ಲಿ ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಈರನಗೌಡ ರುದ್ರಗೌಡ್ರ, ಅಶೋಕ ಶಿರಡೋಣ, ಅಮೋಘಿ ಗೌಡನವರ, ಮುಖಂಡರಾದ ಗುರು ಮಾಳಿ, ಮಸಳಿ ಕುಟುಂಬ ಸದಸ್ಯರು, ಬಾಪುರಾಯ ಬಾಗಲಕೋಟ, ಶಂಕರಗೌಡ ಬಿರಾದಾರ, ಬಸವರಾಜ ನಿಡೋಣಿ, ಬಸವರಾಜ ಅತಾಲಟ್ಟಿ, ಸಿದ್ದಪ್ಪ ಗದ್ಯಾಳ, ಅಡಿವೆಪ್ಪ ಅಟ್ಟಪಳಕರ, ಮಾಳು ಅಟ್ಟಪಳಕರ, ಯಲ್ಲಪ್ಪ ಅಟ್ಟಪಳಕರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS congress mlc udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.