Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆರೆ ಹಸ್ತಾಂತರ, ಬಾಗಿನ ಅರ್ಪಣೆ, ನಾಮಫಲಕ ಅನಾವರಣ
(ರಾಜ್ಯ ) ಜಿಲ್ಲೆ

ಕೆರೆ ಹಸ್ತಾಂತರ, ಬಾಗಿನ ಅರ್ಪಣೆ, ನಾಮಫಲಕ ಅನಾವರಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

*ಉದಯರಶ್ಮಿ ದಿನಪತ್ರಿಕೆ*

ಬಸವನಬಾಗೇವಾಡಿ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕೆರೆ ಹೂಳೆತ್ತುವದು, ಸ್ವ-ಸಹಾಯ ಸಂಘದ ರಚನೆ, ಗ್ರಾಮ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ಜಾರಿ ಗೊಳಿಸುವ ಮೂಲಕ ಜನರಿಗೆ ಉತ್ತಮ ಸೇವೆ ಒದಗಿಸಲಾಗುತ್ತಿದೆ ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಹೇಳಿದರು.
ತಾಲೂಕಿನ ಡೋಣೂರ ಗ್ರಾಮದಲ್ಲಿ ಬುಧವಾರ ಕೆರೆ ಹಸ್ತಾಂತರ, ಬಾಗಿನ ಅರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮದ ಕೆರೆಯ ಹೂಳೆತ್ತುವ ಕಾಮಗಾರಿಯನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್‌ಯ ಕೆರೆ ಸಮಿತಿ, ಗ್ರಾಮ ಪಂಚಾಯತ್ ಸಹಯೋಗದಲ್ಲಿ ಕೈಗೊಳ್ಳಲಾಗಿತ್ತು. ನಮ್ಮ ಊರು ನಮ್ಮ ಕೆರೆ ಯೋಜನೆಯಲ್ಲಿ ಇದು ೭೬೩ ನೇ ಕೆರೆಯಾಗಿದೆ. ಈ ಕೆರೆ ಗ್ರಾಮಕ್ಕೆ ಶಾಶ್ವತವಾಗಿ ನೀರು ತುಂಬಿ ಗ್ರಾಮಸ್ಥರಿಗೆ, ಕೃಷಿ ಭೂಮಿಗೆ,ಜಾನುವಾರುಗಳಿಗೆ, ಪಕ್ಷಿಗಳಿಗೆ ಅನುಕೂಲವಾಗಲಿದೆ ಎಂದರು.
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಕಾರ್ಯಗಳಾದ ಕೆರೆ ಹೂಳೆತ್ತುವದು, ದೇವಸ್ಥಾನದ ಜೀರ್ಣೋದ್ಧಾರ, ಹಿಂದು ರುದ್ರಭೂಮಿ ಅಭಿವೃದ್ಧಿ, ಶಾಲಾ ಮಕ್ಕಳಿಗೆ ಶೌಚಾಲಯ ನಿರ್ಮಾಣ, ಅತಿಥಿ ಶಿಕ್ಷಕರ ನೇಮಕ, ಅಂಗವಿಕಲರಿಗೆ ಬೇಕಾದ ಸಲಕರಣೆಗಳ ವಿತರಣೆ, ನಿರ್ಗತಿಕರಿಗೆ ಮಾಶಾಸನ ವಿತರಣೆ ಹಾಗೂ ವಾತ್ಸಲ್ಯ ಮನೆ ರಚನೆ ಮಾಡಿಕೊಡುವದು ಸೇರಿದಂತೆ ಹತ್ತಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದಾರೆ. ಡೋಣೂರ ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ರಮ ಯಶಸ್ವಿಯಾಗಿದೆ. ಈ ಗ್ರಾಮವು ಮಾದರಿ ಗ್ರಾಮವಾಗಿ ಬೆಳೆಯಲೆಂದು ಶುಭ ಹಾರೈಸಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸೋಮನಗೌಡ ಪಾಟೀಲ ಮಾತನಾಡಿ, ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ವ್ಯಸನ ಮುಕ್ತರಾಗಲು ಧರ್ಮಸ್ಥಳದ ಧರ್ಮಾಧಿಕಾರಿಗಳು ಮಧ್ಯವರ್ಜನ ಶಿಬಿರ ಕಾರ್ಯಕ್ರಮದ ಮೂಲಕ ಸಮಾಜವನ್ನು ಸನ್ಮಾರ್ಗದತ್ತ ಕೊಂಡೊಯ್ಯುತ್ತಿದ್ದಾರೆ. ಇದರಿಂದಾಗಿ ಸಾವಿರಾರು ಕುಟುಂಬಗಳು ಉತ್ತಮವಾದ ಜೀವನವನ್ನು ಸಾಗಿಸುತ್ತಿವೆ. ಸರ್ಕಾರ ಮಾಡದೇ ಇರುವಂತಹ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವುದು ಶ್ಲಾಘನೀಯ. ಈ ಯೋಜನೆಯಡಿ ಸ್ವ-ಸಹಾಯ ಸಂಘಗಳನ್ನು ಕಟ್ಟಿಕೊಂಡು ಕುಟುಂಬಗಳು ಆರ್ಥಿಕವಾಗಿ ಪ್ರಗತಿಯನ್ನು ಹೊಂದುವಂತಾಗಲೆಂದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಕಲ್ಲನಗೌಡ ಪಾಟೀಲ, ಯುವರಾಜ ಪಡಗಾನೂರ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಪಾಟೀಲ, ಗ್ರಾಮ ಪಂಚಾಯತಿಯ ಸದಸ್ಯ ಪರಶುರಾಮ ಜ್ಯೋತಿ, ಧರ್ಮಸ್ಥಳ ಸಂಸ್ಥೆಯ ತಾಲೂಕಿನ ಯೋಜನಾಧಿಕಾರಿ ಪ್ರಸನ್ನ ಆರ್‌., ಕೆರೆ ಸಮಿತಿ ಅಧ್ಯಕ್ಷ ಮಹಾಂತೇಶ ಕೆರೂಟಗಿ,ಕೆರೆ ಸಮಿತಿಯ ಉಪಾಧ್ಯಕ್ಷ ಬಸವರಾಜ ಮಸಳಿ, ಕೆರೆ ಸಮಿತಿಯ ಎಲ್ಲ ಸದಸ್ಯರಾದ ಬಂದೇನವಾಜ ಸುತಾರ, ಯಲ್ಲಪ್ಪ ಮಾದರ, ನಿಜಲಿಂಗಪ್ಪ ಬಿರಾದಾರ, ಭೀಮರಾಯ ಅಗಸರ, ಅಮೃತ ಹಳ್ಳಿ, ಯಲ್ಲಪ್ಪ ಭಜಂತ್ರಿ, ದುಂಡಪ್ಪ ಬಸರಕೋಡ ಅರ್ಚಕ ಮರಳುಸಿದ್ದಯ್ಯ ಹಿರೇಮಠ, ಕೃಷಿ ಮೇಲ್ವಿಚಾರಕ ರಾಜು ಬೇಟಗೇರಿ, ವಲಯ ಮೇಲ್ವಿಚಾರಕಿ ಪ್ರೇಮ ಎಲಿ, ಸೇವಾ ಪ್ರತಿನಿಧಿಗಳು, , ಸ್ವ-ಸಹಾಯ ತಂಡದ ಸದಸ್ಯರು ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ತಾಪಂ ಸ್ವೀಪ್ ಸಮಿತಿಯಿಂದ ಎಸ್ಐಆರ್ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೧೪ರಿಂದ ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿಯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.