Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾವನ್ನು ಸ್ವಾಗತಿಸಿದ, ಸಂವಾದ ನಡೆಸಿದ ಸಿದ್ಧೇಶ್ವರ ಶ್ರೀಗಳು
(ರಾಜ್ಯ ) ಜಿಲ್ಲೆ

ಸಾವನ್ನು ಸ್ವಾಗತಿಸಿದ, ಸಂವಾದ ನಡೆಸಿದ ಸಿದ್ಧೇಶ್ವರ ಶ್ರೀಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಶ್ರೀಗಳ ಗುರುನಮನ ಮಹೋತ್ಸವದಲ್ಲಿ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು.ಚನ್ನಬಸಪ್ಪ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶ್ರೀ ಸಿದ್ಧೇಶ್ವರ ಶ್ರಿಗಳು ಒರ್ವ ವ್ಯಕ್ತಿ ಅಲ್ಲ, ಅವರೊಬ್ಬ ದಾರ್ಶನಿಕ ಶಕ್ತಿ. ಅವರೊಬ್ಬ ದೈವಿರೂಪವಾಗಿದ್ದರು ಎಂದು ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು.ಚನ್ನಬಸಪ್ಪ ಹೇಳಿದರು.
ನಗರದ ಜ್ಞಾನಯೋಗಾಶ್ರಮದಲ್ಲಿ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ಗುರುನಮನ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ “ಗುರುದೇವರ ಬದುಕು” ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾವು ತಾಯಿ ಗರ್ಭದಲ್ಲಿ ಇದ್ದಾಗಲೇ ಹುಟ್ಟು ಸಾವಿನ ಬಗ್ಗೆ ಚರ್ಚೆ ನಡೆಯುತ್ತದೆ. ಹಣ ಆಸ್ತಿಗಳು, ಸಂಪತ್ತು ನಮ್ಮ ಜೀವನದಲ್ಲಿ ಬಹು ಮುಖ್ಯ ಎಂದು ಭಾವಿಸುತ್ತೇವೆ. ಹಾಗೆ ಭಾವಿಸಿದರೆ ನಾವು ಸಂತೋಷವನ್ನು ಕಾಣಲು ಸಾಧ್ಯವಿಲ್ಲ. ನಾವು ಸಾವನ್ನು ಗಂಭಿರವಾಗಿ ಪರಿಗಣಿಸಿದರೆ ಬದುಕನ್ನು ಕೂಡ ಗಂಭಿರವಾಗಿ ಪರಿಗಣಿಸುತ್ತೇವೆ ಸಿದ್ಧೇಶ್ವರ ಶ್ರೀಗಳ ವಿಚಾರಧಾರೆಗಳು ಅತ್ಯಂತ ವಿಶಾಲವಾಗಿದ್ದವು. ಅವರು ಸಾವಿನೊಂದಿಗೆ ಸಂವಾದ ನಡೆಸಿದವರು, ಸಾವನ್ನು ಸ್ವಾಗತಿಸಿದವರು. ಈ ಬಗೆಯ ಚಿಂತನೆ ನಮ್ಮ ಬದುಕನ್ನು ಅರ್ಥಪುರ್ಣವಾಗಿಸುತ್ತದೆ ಎಂದರು.
ಬದುಕಿನ ಅಂತಿಮ ಅವಧಿಯಲ್ಲಿ ವ್ಯಕ್ತಿ ಸಾವಿನ ಆಚೆಗೆ ನೋಡಲು ಪ್ರಯತ್ನಿಸುತ್ತಾನೆ. ಆಚಾರ-ವಿಚಾರಗಳ ಬಗ್ಗೆ ಯೋಚಿಸುತ್ತಾನೆ. ಸಾವು ಅದು ನಮ್ಮ ಬದುಕಿನೊಂದಿಗೆ ಬೆಸೆದುಕೊಂಡಿರುವ ಎಳೆಯಾಗಿದೆ. ಆ ಭಯವನ್ನೇ ಆತ್ಮಶಕ್ತಿಯನ್ನಾಗಿ ಬಳಸಿಕೊಳ್ಳಬೇಕು ಎಂದು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಹೇಳಿದ್ದಾರೆ. ಅದರಂತೆ ಸಾವು ನಮ್ಮೊಡನೆ ಹೆಜ್ಜೆ ಹಾಕುತ್ತದೆ. ನಮಗೆ ಗೊತ್ತಾಗುವುದಿಲ್ಲ. ಬಾಲ್ಯ ಕಳೆದು ಹೋಗುತ್ತದೆ ಅದು ಬಾಲ್ಯದ ಸಾವು. ಯವೌನ ಬರುತ್ತದೆ ಅದು ಮುಗಿಯುತ್ತಿದ್ದಂತೆ ಅದು ಅಂತ್ಯವಾಗಿ ಸಾಯುತ್ತದೆ. ವೃದ್ಧಾಪ್ಯ ಬರುತ್ತದೆ ಅದು ಕೂಡಾ ಅಂತ್ಯವಾಗುತ್ತದೆ. ಹೀಗೆ ಸಾವು ನಿರಂತರ ಪ್ರಕ್ರಿಯೇ. ಅದು ನಿರಂತರವಾಗಿ ನಡೆಯುವುದರಿಂದ ಅದು ನಮ್ಮ ಅನುಭವಕ್ಕೆ ಬರುವುದಿಲ್ಲ. ನಮ್ಮ ಜೋತೆಯಲ್ಲಿಯೇ ಇರುವ ಸಾವಿಗೆ ಹೆದುರುವ ಅವಶ್ಯಕತೆ ಇಲ್ಲ. ನಾವು ಬದುಕಿನ ಕೆಟ್ಟ ಘಟನೆಗಳನ್ನು ಎದುರಿಸಿದರೆ ಸಾವು ಗೆದ್ದಂತೆ ಎಂದು ಹೇಳಿದರು.
ವಿಜಯಪುರ-ಗದಗ ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಮಹಸ್ವಾಮಿಗಳು ಆಶೀರ್ವಚನ ನೀಡಿ, ಕೆಲವು ವ್ಯಕ್ತಿಗಳ ಬಗ್ಗೆ ಮಾತುಗಳಲ್ಲಿ ಹೇಳಲು ಸಾಧ್ಯವಿಲ್ಲ. ಅಂತಹ ವ್ಯಕ್ತಿಗಳ ಬಗ್ಗೆ ಮಾತನಾಡುವಷ್ಟು ಪದಗಳಿಗೆ ಶಕ್ತಿ ಇಲ್ಲ. ಅಂತಹ ವ್ಯಕ್ತಿತ್ವ ನಮ್ಮ ಶ್ರೀ ಸಿದ್ದೇಶ್ವರ ಶ್ರೀಗಳು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಚಿತ್ತರಗಿ-ಇಳಕಲ್ಲ ವಿಜಯಮಹಾಂತೇಶ್ವರ ಮಠದ ಗುರುಮಹಾಂತ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಶ್ರೀಸಿದ್ಧೇಶ್ವರ ಅಪ್ಪಗಳು ನಿತ್ಯ ಸತ್ಯವನ್ನೇ ನುಡಿದರು. ಅವರು ಬದುಕಿ ಬಾಳಿದ ಕಾಲದಲ್ಲಿ ನಾವು ಇದ್ದೇವೆ ಎನ್ನುವುದೇ ಧನ್ಯ. ಪರಮ ಪೂಜ್ಯ ಶ್ರೀಗಳು ಅಹಿಂಸಾ ತತ್ವವನ್ನು ತಮ್ಮ ಜೀವನದೂದ್ದಕ್ಕೂ ಅಳವಡಿಸಿಕೊಂಡು ಬಂದಂತವರು. ಎಂದಿಗೂ ಯಾರ ಮನಸ್ಸಿಗೂ ಗಾಯವಾಗದಂತೆ ತಮ್ಮ ಜೀವನದುದ್ದಕ್ಕೂ ಬದುಕಿದರು. ಅವರೊಂದಿಗೆ ಯಾರಾದರೂ ಮಾತನಾಡುತ್ತಿದ್ದರೆ ಅವರಿಗೆ ಶ್ರೀ ಸಾಕ್ಷಾತ ಪರಮಾತ್ಮನ ಜೊತೆ ಮಾತನಾಡಿದಂತೆ ಭಾಸವಾಗುತ್ತಿತ್ತು. ಗುರುಗಳು ಪ್ರತಿಕ್ಷಣವೂ ಜನತೆಯ ಉದ್ಧಾರಕ್ಕಾಗಿ ಬದುಕಿದವರು. ಅವರ ಬದುಕು ಎಂತೆಂದರೆ ಅದು ಅರಿವಿನ ಬದುಕು ಎಂದು ಹೇಳಿದರು.
ಗೋಷ್ಠಿಯಲ್ಲಿ ಸಂಸದ ರಮೇಶ ಜಿಗಜಿಣಗಿ, ವಿವಿಧ ಮಠಾಧೀಶರು, ನಾಯಕರು, ಸಾವಿರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

ಸಿದ್ಧೇಶ್ವರ ಶ್ರೀಗಳ ಚಿಂತನೆಗಳಿಗೆ ಸಾವಿಲ್ಲ

ವಿಜಯಪುರ: ಶ್ರೀ ಸಿದ್ಧೇಶ್ವರ ಶ್ರೀಗಳ ನಡೆ ನುಡಿ ಇಡೀ ಜಗತ್ತೇ ಮೆಚ್ಚುವಂತದ್ದು. ನಮ್ಮ ಜೀವನದಲ್ಲಿ ಒಬ್ಬ ನಿಜವಾದ ಸಂತನನ್ನ ನಾವು ನೋಡಿದ್ದೇವೆ ಎಂತಾದರೆ ಅವರು ಶ್ರೀ ಸಿದ್ಧೇಶ್ವರ ಶ್ರೀಗಳು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವ ಶಿವಾನಂದ ಪಾಟೀಲ ಹೇಳಿದರು.
ಬುಧವಾರ ಸಿದ್ದೇಶ್ವರ ಶ್ರೀಗಳ ಗುರುವಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ಅವರ ಅಗಲಿಕೆಯಿಂದ ಸಮಾಜ ಬಳಷ್ಟನ್ನು ಕಳೆದುಕೊಂಡಿದೆ ಆದರೆ ಅವರು ಕಟ್ಟಿಕೊಟ್ಟ ಜೀವನದ ಸಾರ, ಅವರು ತಿಳಿಸಿದ ಬದುಕಿನ ಅರ್ಥ ಇವೆಲ್ಲವು ನಮ್ಮ ಜೊತೆಗೆ ಇವೆ. ಅವರ ಚಿಂತನೆಗಳಿಗೆ ಸಾವಿಲ್ಲ. ಅವರು ನಮ್ಮೊಳಗೆ ಸದಾ ಅಮರರಾಗಿ ಉಳಿದಂತಹ ಮಹಾನ್ ಚೇತನ ಶ್ರೀಗಳು ಎಂದು ಸಚಿವ ಶಿವಾನಂದ ಹೇಳಿದರು.

“ಶ್ರೀ ಸಿದ್ಧೇಶ್ವರ ಶ್ರೀಗಳು ಜ್ಞಾನಯೋಗಿಯಾಗಿ ಇಡೀ ಜಗತ್ತಿಗೆ ಸತತ ೬೫ ವರ್ಷಗಳ ಕಾಲ ಜ್ಞಾನದಾಸೋಹ ಮಾಡಿದರು. ಅವರ ಬದುಕೆ ಮಾದರಿ. ಇಡೀ ಬದುಕಿನೂದ್ದಕ್ಕೂ ಅತ್ಯಂತ ಸರಳತೆಯಿಂದ ಬದುಕಿ ಬಯಲಲಲ್ಲಿ ಬಯಲಾಗಿ ಹೋದಂತವರು. ಈ ಗದ್ದಲಿನ ಜಗತ್ತಿನಲ್ಲಿ ಸದ್ದಿಲ್ಲದೆ ಸಾಗಿ ಎಲ್ಲರಿಗೂ ಬೆಳಕಾಗಿ ಯಾರಿಗೂ ನೂವು ಮಾಡದಂತ ಬದುಕಿ ನಮ್ಮ ಬದುಕಿಗೆ ಚೇತನವಾದಂತವರು.”

– ಬಸವಲಿಂಗ ಮಹಾಸ್ವಾಮೀಜಿ
ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳು, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.