ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ & ಕಲಬುರ್ಗಿ ಪೌಂಡೇಶನ್ ನಿಂದ ಡಾ. ಎಂ.ಎಂ.ಕಲಬುರ್ಗಿ ಸೃಜನ ಸಾಹಿತ್ಯ ಕುರಿತು ವಿಚಾರ ಸಂಕಿರಣ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗೂ ವಿಜಯಪೂರ ಕಲಬುರ್ಗಿ ಪೌಂಡೇಶನ್ ಸಂಯುಕ್ತಾಶ್ರಯದಲ್ಲಿ ಜ.೦೪ರಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ಬೆಳಿಗ್ಗೆ ೧೦:೩೦ಗಂಟೆಗೆ ಡಾ.ಎಂ.ಎಂ.ಕಲಬುರ್ಗಿ ಸೃಜನ ಸಾಹಿತ್ಯ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಣ ತಾಲೂಕಿನ ಕಲಬುರ್ಗಿಯವರ ಅಭಿಮಾನಿಗಳು, ಸಾಹಿತ್ಯ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧ್ಯಕ್ಷ ಶಿವಲಿಂಗ ಕಲಬುರ್ಗಿ ವಿನಂತಿಸಿಕೊಂಡಿದ್ದಾರೆ.
ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಉದ್ಘಾಟಕರಾಗಿ ನ್ಯೂಜಿಲೆಂಡಿನ್ ಆಕ್ಲೆಂಡ್ ನಿವಾಸಿ ಬಸವ ಸಮಿತಿ ಸಂಸ್ಥಾಪಕ ಡಾ.ಲಿಂಗಣ್ಣ ಕಲಬುರ್ಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ವಹಿಸುವರು. ಪ್ರತಿಷ್ಠಾನದ ಸದಸ್ಯೆ ಹನುಮಾಕ್ಷಿ ಗೋಗಿ ಆಶಯ ನುಡಿಗಳನ್ನಾಡಲಿದ್ದಾರೆ.
ಪ್ರಾಧ್ಯಾಪಕ ಡಾ.ಎಂ.ಎಸ್.ಮಾಗಣಗೇರಿ “ಕೆಟ್ಟಿತ್ತು ಕಲ್ಯಾಣ” ನಾಟಕ ಕುರಿತು ವಿಚಾರಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. “ನೀರು ನೀರಡಿಸಿತ್ತು” ಮತ್ತು “ನೀರಾಗ ನಿಂತೀನಿ ನೀರಡಿಸಿ” ಕಾವ್ಯಾವನ್ನು ಸಾಹಿತಿ ಮನು ಪತ್ತಾರ ವಾಚಿಸಲಿದ್ದಾರೆ.
ಪೂಜಾ ಪಡಶೆಟ್ಟಿ ಹಾಗೂ ಸಹೋದರಿಯರು ವಚನ ಸಂಗೀತ ನಡೆಸಿಕೊಡುವರು. ಡಾ.ವಿಕ್ರಮ ವಿಸಾಜಿ ರಚನೆಯ, ಪ್ರವೀಣ ಗುಂಜನಳ್ಳಿ ನಿರ್ದೇಶನದ ರಕ್ತವಿಲಾಸ ನಾಟಕವನ್ನು ರಾಯಚೂರ ಸಮುದಾಯ ಪ್ರಸ್ತುತ ಪಡಿಸಲಿದೆ.
ನಿರೂಪಣೆಯನ್ನು ನಿವೃತ್ತ ಪ್ರಾಧ್ಯಾಪಕ, ಹಿರಿಯ ಜಾನಪದ ವಿದ್ವಾಂಸ ಡಾ.ಎಂ.ಎಂ.ಪಡಶೆಟ್ಟಿ ಮಾಡಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಶಿವಲಿಂಗ ಕಲಬುರ್ಗಿ ಹಾಗೂ ಪ್ರತಿಷ್ಠಾನದ ಸದಸ್ಯ ಬೆಕ್ಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ

