Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯ ಸರ್ಕಾರಿ ನೌಕರರಿಗೆ ೮ ನೇ ವೇತನ ಆಯೋಗ ಜಾರಿಗೆ ಬದ್ಧ
(ರಾಜ್ಯ ) ಜಿಲ್ಲೆ

ರಾಜ್ಯ ಸರ್ಕಾರಿ ನೌಕರರಿಗೆ ೮ ನೇ ವೇತನ ಆಯೋಗ ಜಾರಿಗೆ ಬದ್ಧ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಮುಂಬರುವ ೨೦೨೬ಕ್ಕೆ ಕೇಂದ್ರ ಸರ್ಕಾರ ೮ನೇ ವೇತನ ಆಯೋಗ ಜಾರಿಗೆ ತರಲಿದ್ದು, ಅದನ್ನು ಯಥಾವತ್ತಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೂ ಜಾರಿಯಾಗುವಂತೆ ಕ್ರಮ ಜರುಗಿಸಲಾಗುವದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಭರವಸೆ ನೀಡಿದರು.
ಅವರು ಶುಕ್ರವಾರ ಇಂಡಿ ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಸಭಾ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಳೆದ ೫ ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತಹ ಸರಕಾರದಿಂದ ೨೫ ಆದೇಶಗಳನ್ನು ಮಾಡಿಸಿದ್ದೇನೆ. ಇದನ್ನು ಅರಿತ ರಾಜ್ಯದ ನೌಕರರು ಸಂಘಟನೆಯ ಸತ್ಯ ಮತ್ತು ನ್ಯಾಯವನ್ನು ಕಂಡು ಮತ್ತೊಮ್ಮೆ ನನಗೆ ಗೆಲ್ಲಿಸಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುವದಾಗಿ ಹೇಳಿದರು.
ಸಂಘದ ಸಂವಿಧಾನವನ್ನು ತಿದ್ದಿ ೧೨೨ ಪುಟಗಳಿಗೆ ಹೆಚ್ಚಿಸಿದ್ದೇನೆ. ಇದರ ಅಡಿಯಲ್ಲಿ ಎಲ್ಲಾ ನೌಕರರಿಗೂ ನ್ಯಾಯ ಸಿಗುವಂತೆ ಮಾಡಲಾಗಿದೆ. ಭ್ರಷ್ಟಾಚಾರ ಕೊನೆಗೊಳಿಸಲು ಸಂಕಲ್ಪ ತೊಡಲಾಗಿದೆ. ಸರ್ಕಾರದ ೨೫ ಕೋಟಿ ಅನುದಾನ ಬಳಸಿಕೊಂಡು ಸಂಘದ ಅಡಿಯಲ್ಲಿ ಸಭಾ ಭವನ ನಿರ್ಮಿಸಲಾಗಿದೆ ಎಂದರು.
ನೌರರಿಗಾಗಿ ಎನಪಿಎಸ್ ತೆಗೆದು ಓಪಿಎಸ್ ಜಾರಿಗೊಳಿಸುವದು, ನಗದು ರಹಿತ ಚಿಕಿತ್ಸೆ ಮಾಡುವ ಬಗ್ಗೆ ಸರ್ಕಾರ ಭರವಸೆ ನೀಡಿದೆ. ಇದರ ಜೊತೆಗೆ ನೌಕರ ಮರಣ ಹೊಂದಿದರೆ ಅವರ ಕುಟುಂಬಕ್ಕೆ ೧ ಕೋಟಿ ರೂ, ಬರುವಂತೆ ಇನ್ಸುರೆನ್ಸ ಮಾಡಿಸುವ ಯೋಜನೆ ಜಾರಿಗೊಳಸಲಾಗುವದು ಎಂದರು.
ರಾಜ್ಯ ಸರ್ಕಾರಿ ನೌಕರರು ಬೆಂಗಳೂರಿಗೆ ಬಂದರೆ ಕೇವಲ ೧೦೦ ರೂ, ಗಳಲ್ಲಿ ಅವರು ತಂಗಲು ವ್ಯವಸ್ಥೆ ಮಾಡಲಾಗುವದು ಎಂದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾವೂರ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯಾಧ್ಯಕ್ಷರಾದ ಷಡಕ್ಷರಿ ಅವರು ನಮ್ಮೆಲ್ಲ ನೌಕರ ವರ್ಗಕ್ಕೆ ಒಳಿತು ಮಾಡಲು ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬೆನ್ನೆಲುಬಾಗಿ ಎಲ್ಲ ನೌಕರರು ಕಾರ್ಯ ನಿರ್ವಹಿಸಬೇಕಿದೆ ಎಂದು ತಿಳಿಸಿ ಓಪಿಎಸ್ ಜಾರಿಗೊಳಿಸಬೇಕು, ನಗದು ರಹಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ, ಮನವಿ ಸಲ್ಲಿಸಿದರು.
ಜಿಲ್ಲಾ ಅಧ್ಯಕ್ಷ ಸುರೇಶ ಶೇಡಬ್ಯಾಳ, ಸಿಂದಗಿ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ರಾಜ್ಯ ಕಾರ್ಯದರ್ಶಿ ಸಂಗನಬಸವ ಮಾತನಾಡಿದರು.
ಕಾರ್ಯಕ್ರಮವನ್ನು ರವಿ ಗಿಣ್ಣಿ ನಿರೂಪಿಸಿದರು. ಎಸ್.ಎಸ್.ಭಜಂತ್ರಿ ಪ್ರಾರ್ಥಿಸಿದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.