ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಪುರಸಭೆಗೆ ವಿವಿಧ ಯೋಜನೆಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕ್ರಿಯಾ ಯೋಜನೆ ಅನುಸಾರ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಸಚಿವ ಶಿವಾನಂದ ಪಾಟೀಲರು ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೩.೯೬ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ವಿವಿಧ ವಾರ್ಡುಗಳಲ್ಲಿ ಸಿಸಿ ರಸ್ತೆ, ಡಾಂಬರೀಕರಣ ರಸ್ತೆ, ಚರಂಡಿ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೭೦ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ಅರಳಿಕಟ್ಟಿಯಿಂದ ಡಾ.ಅಂಬೇಡ್ಕರ ವೃತ್ತದವರೆಗೂ ವಿದ್ಯುತ್ ಕಂಬ ಮತ್ತು ವಿದ್ಯುತ್ ದೀಪಾಲಂಕಾರ ಅಳವಡಿಸುವ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೫೦ ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ನಂದಿ ತರಕಾರಿ ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೪೧ ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ರಾಜು ಪಟ್ಟಣಶೆಟ್ಟಿ ಬಡಾವಣೆಯಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನಗಳ ನಿಲುಗಡೆಗೆ ಶೆಡ್ ನಿರ್ಮಾಣ ಮತ್ತು ಸಂಗಮ ಅಗಸರ ಮನೆ ಹತ್ತಿರ ಸಿಸಿ ರಸ್ತೆ ನಿರ್ಮಿಸುವ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೫ ಕೋಟಿ ವೆಚ್ಚದಲ್ಲಿ ಪಟ್ಟಣದ ಮೆಗಾ ಮಾರುಕಟ್ಟೆ ಮೊದಲನೆ ಮಹಡಿ ಮುಂದುವರೆದ ಕಾಮಗಾರಿ ಹಾಗೂ ಕೂಡಲಸಂಗಮ ಮಂಗಲ ಕಾರ್ಯಾಲಯದ ಅಭಿವೃದ್ಧಿ ಕಾಮಗಾರಿ, ಪುರಸಭೆ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೧ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಮಾರುತಿ ಮಂದಿರದ ಹತ್ತಿರ ಸಭಾಭವನ ನಿರ್ಮಾಣ ಕಾಮಗಾರಿ, ಪುರಸಭೆಯ ನಗರೋತ್ಥಾನ ಹಂತ-೪ ಯೋಜನೆಯಡಿ ರೂ.೨೫.೩೬ ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ನಂದಿ ಮಾರುಕಟ್ಟೆ ಹತ್ತಿರ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿ, ಹುಡ್ಕೋ ಹತ್ತಿರ ಜಾಮೀಯ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ರೂ. ೨.೫೦ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಶಾದಿಮಹಲ್ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಸುರೇಶ ಹಾರಿವಾಳ, ಶಿವನಗೌಡ ಬಿರಾದಾರ, ಶೇಖರ ಗೊಳಸಂಗಿ, ಅನಿಲ ಅಗರವಾಲ, ಬಸವರಾಜ ಕೋಟಿ, ಜಟ್ಟಿಂಗರಾಯ ಮಾಲಗಾರ, ಶಂಕರಗೌಡ ಬಿರಾದಾರ, ಬಸವರಾಜ ರಾಯಗೊಂಡ, ಕಾಶೀನಾಥ ರಾಠೋಡ, ಪ್ರವೀಣ ಪೂಜಾರಿ, ಜಗದೇವಿ ಗುಂಡಳ್ಳಿ, ಪರಶುರಾಮ ಜಮಖಂಡಿ, ಕೆ.ಪಿ. ಕುಲಕರ್ಣಿ, ವಿಠ್ಠಲ ಕುಲಕರ್ಣಿ, ವಾದಿರಾಜ ಯಜುರ್ವೇದಿ, ಎಂ.ಡಿ.ಬಳಗನೂರ, ಅಲ್ತಾಪ ಮುದ್ದೇಬಿಹಾಳ. ಕಮಲಸಾ ಕೊರಬು, ರಫೀಕ ಹೊಕ್ರಾಣಿ,ಶಬ್ಭೀರ ನದಾಫ, ರಜಾಕ ಬಾಗವಾನ, ಇಬ್ರಾಹಿಂ ಬಮ್ಮನಹಳ್ಳಿ, ಮತಾಬ ಬಮ್ಮನಹಳ್ಳಿ, ಚಾಂದಬಾಷಾ ಕೊರಬು,ತಹಶೀಲ್ದಾರ ವೈ.ಎಸ್.ಸೋಮನಕಟ್ಟಿ, ಜಿ.ಪಂ ಎಇಇ ವಿಲಾಸ ರಾಠೋಡ, ಲೋಕೋಪಯೋಗಿ ಇಲಾಖೆ ಎಇಇ ಜೆ.ವಿ.ಕಿರಸೂರ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಕೆಐಎಡಿಬಿ ಎಇಇ ಆನಂದಸ್ವಾಮಿ, ಡಿ.ವೈ.ಎಸ್.ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಗುರುಶಾಂತ ದಾಶ್ಯಾಳ, ಪುರಸಭೆ ಅಭಿಯಂತರರಾದ ಮಹಾದೇವ ಜಂಬಗಿ, ಸಂತೋಷ ಗಿಡ್ಡಸಣ್ಣನವರ, ವ್ಯವಸ್ಥಾಪಕ ಸುರೇಶ ಬಾಗೇವಾಡಿ, ಗುತ್ತಿಗೆದಾರರು ಇತರರು ಇದ್ದರು.

