ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರ ಆಶ್ರಯ ಸಮಿತಿಯ ನೂತನ ಅಧ್ಯಕ್ಷರ ಹಾಗೂ ಸದಸ್ಯರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ ಕ್ಷೇತ್ರದ ಅಭಿವೃದ್ಧಿಗೆ ಸದಾ ತುಡಿಯುವ ಮನಸ್ಸು ಸಚಿವ ಶರಣಬಸಪ್ಪಗೌಡ ದರ್ಶನಪುರವರ ಆಶಯದಂತೆ ಆಶ್ರಯ ಕಮಿಟಿ ಅಧ್ಯಕ್ಷ ಹಾಗೂ ಸದಸ್ಯರು ಸೂಕ್ತ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಕಾರ್ಯಪ್ರವೃತ್ತರಾಗಿ ಎಂದರು.
ಶರಣಬಸ್ಸು (ಕಾಕ) ಡಿಗ್ಗಾವಿ ಅಧ್ಯಕ್ಷರು, ಮತ್ತು ಸೋಮಶೇಖರ ಶಹಾಪುರ, ರೇವಣಸಿದ್ದಪ್ಪ ಯಾಳಗಿ, ದೇವೇಂದ್ರಪ್ಪ ವಠಾರ, ಶ್ರೀಮತಿ ಹೀನಾ ಕೌಸರ ಎಮ್ ಪಟೇಲ್ ಕಾಚೂರ ಇವರುಗಳಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ವೇಳೆ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವಾಮನರಾವು ದೇಶಪಾಂಡೆ, ಮಾಜಿ ತಾಪಂ ಸದಸ್ಯ ಖಾಜಾಪಟೇಲ್ ಕಾಚೂರ, ಮಹಿಪಾಲರೆಡ್ಡಿ ಡಿಗ್ಗಾವಿ. ಪುರಸಭೆ ಸದಸ್ಯರು ಹಾಗೂ ನಾಮನಿರ್ದೇಶನ ಸದಸ್ಯರುಗಳು ಸೇರಿದಂತೆ ಪುರಸಭೆ ಮುಖ್ಯಾಧಿಕಾರಿಗಳು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

