ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿ ಕುರಿತು ಜರುಗಿದ ಜಿಲ್ಲಾಮಟ್ಟದ ಟಾಸ್ಕ ಪೋರ್ಸ್ ಸಮಿತಿ ಸಭೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಜನವರಿ 3ರ ಸಂಜೆ 4ಗಂಟೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪ್ರತಿ ಕ್ವಿಂಟಾಲ್ ತೊಗರಿ ಬೆಲೆಯನ್ನು ರೂ .7550/- ನಂತೆ ಪ್ರತಿ ರೈತನಿಂದ ಗರಿಷ್ಠ 40 ಕ್ವಿಂಟಾಲ್ ತೊಗರಿ ಖರೀದಿಸಲು ಆದೇಶ ನೀಡಲಾಯಿತು.
ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು NIC ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ, ಬಯೋಮೆಟ್ರಿಕ್ ಮೂಲಕ ತೊಗರಿ ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸಬೇಕು. NIC ಸಂಸ್ಥೆಯು ಅಭಿವೃದ್ಧಿಪಡಿಸಿರುವ ಸದರಿ ನೋಂದಣಿ ತಂತ್ರಾಂಶವು ಈಗಾಗಲೇ FRUITS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. FRUITS ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ. UIDAI ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ವಿವರಗಳನ್ನು ಇಂದೀಕರಿಸಲಾಗಿದೆ. ಸದರಿ ವಿವರಗಳನ್ನು ಬೆಂಬಲ ಬೆಲೆ ಯೋಜನೆಯಡಿ ಮಾಡಲು ನೋಂದಣಿ ಸಿದ್ಧಪಡಿಸಿದ ತಂತ್ರಾಂಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತದೆ. ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ NIC ತಂತ್ರಾಂಶದಿಂದ ನಾಫೆಡ್ ಹಾಗೂ ಎನ್.ಸಿ.ಸಿ.ಎಫ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿಯನ್ನು ಒದಗಿಸಲಾಗುವುದು. ನಾಫೆಡ್ ಹಾಗೂ ಎನ್.ಸಿ.ಸಿ.ಎಫ್. ಸಂಸ್ಥೆಯು ತಮ್ಮ ತಂತ್ರಾಂಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ತೊಗರಿ ಖರೀದಿ ಕೇಂದ್ರಗಳಿಂದ ಖರೀದಿಸತಕ್ಕದ್ದು.
- ಸದರಿ ಯೋಜನೆಯಡಿಯಲ್ಲಿ ಖರೀದಿಸಬಹುದಾದ ಗರಿಷ್ಠ ತೊಗರಿ ಪ್ರಮಾಣ ಹಾಗೂ ಅವಶ್ಯವಿರುವ ಮುಂಗಡ ಹಣವನ್ನು ರಾಜ್ಯದ ಖರೀದಿ ಸಂಸ್ಥೆಗಳು ನ್ಯಾಫೆಡ್ ಸಂಸ್ಥೆಯೊಂದಿಗೆ ಸಮಾಲೋಚಿಸಿ ಹಣ ಪಡೆದು ಖರೀದಿಸಿರುವ ರೈತರಿಗೆ ಡಿ.ಬಿ.ಟಿ ಮುಖಾಂತರ ಪಾವತಿಸತಕ್ಕದ್ದು.
- ಈ ಆದೇಶ ಹೊರಡಿಸಿದದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 75 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸತಕ್ಕದ್ದು.
ಈ ಯೋಜನೆಗಾಗಿ ಕೇಂದ್ರ ಸರ್ಕಾರವು ಹೊರಡಿಸಿರುವ Standard operating procedure (SOP) ರನ್ವಯ ಖರೀದಿಸತಕ್ಕದ್ದು, - ಈ ಯೋಜನೆಯಡಿಯಲ್ಲಿ ಖರೀದಿಸುವ ಪ್ರಗತಿಯ ವಿವರವನ್ನು ಪ್ರತಿದಿನ ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಈ ಮೇಲ್ ಮೂಲಕ ಸಲ್ಲಿಸತಕ್ಕದ್ದು,
- ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಖರೀದಿಸುವ ಪೂರ್ವದಲ್ಲಿ ರೈತರಿಂದ ಆಧಾರ್ ಕಾರ್ಡ್ ಪ್ರತಿ ಕಡ್ಡಾಯವಾಗಿ ಸಂಗ್ರಹಿಸಿಡುವುದು. ಪಡೆದು ಪರಿಶೀಲಿಸಿ ನೋಂದಾಯಿಸಿಕೊಳ್ಳತಕ್ಕದ್ದು ಹಾಗೂ ದಾಖಲೆಗಳನ್ನು
- ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಅಥವಾ ರೈತರು ನೀಡಿರುವ ಬ್ಯಾಂಕ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು DBT/NEFT ಮೂಲಕ ಜಮಾ ಆಗುವಂತೆ ಪಾವತಿ ಮಾಡತಕ್ಕದ್ದು.
- ತೊಗರಿ ಖರೀದಿ ಕೇಂದ್ರದಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ತೊಗರಿಯನ್ನು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಹಾಗೂ ಖರೀದಿ ಕೇಂದ್ರಗಳಲ್ಲಿ ತೊಂದರೆಗಳು ಉದ್ಭವಿಸಿದಲ್ಲಿ ಸಂಬಂಧಿಸಿದ ಕಾರ್ಯದರ್ಶಿಗಳು ಹಾಗೂ ಸಂಘಗಳ ವಿರುದ್ಧ ಸೂಕ್ತ ಕ್ರಮ ವಹಿಸುವಂತೆ ಮತ್ತು ವರದಿಗಳನ್ನು ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರು, ವಿಜಯಪುರ ರವರು ಕ್ರಮ ವಹಿಸತಕ್ಕದ್ದು.
ಈ ತೊಗರಿಯನ್ನು ಖರೀದಿ ಪೂರ್ವದಲ್ಲಿ ಖರೀದಿ ಕೇಂದ್ರಗಳಾದ PACS/VSSN/FPO/TAPCMS ಸಂಘಗಳು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ವಿಜಯಪುರ ಅವರೊಂದಿಗೆ ಒಪ್ಪಿಗೆ ಪತ್ರ (Agreement) ಮಾಡಿಕೊಂಡು ನಂತರ ಖರೀದಿಸಲು ಸೂಚಿಸಿದೆ. - ರೈತರು ಹೊಗರಿ ಕಾಳು, ಖರೀದಿ ಕೇಂದ್ರಕ್ಕೆ ತಂದು ತಮ್ಮ ಉಪಸ್ಥಿತಿಯಲ್ಲಿಯೇ ತೂಕ ಮಾಡಿಕೊಳ್ಳಬೇಕು. ಆಧೀಕೃತ ರಿಶಿದೀಯನ್ನು ಪಡೆದುಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ತೊಗರಿ ಕಾಳು ಇಳಿಸುವ ಜವಾಬ್ದಾರಿ ರೈತರದ್ದಾಗಿರುತ್ತದೆ ಎಂಬ ನಿಬಂಧನೆಗಳನ್ನು ವಿಧಿಸಲಾಗಿದೆ.
ಮೇಲ್ಕಂಡ ಎಲ್ಲ ಅಂಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ರೈತರಿಗೆ ಅನ್ಯಾಯವಾಗದಂತೆ ಸರ್ಕಾರದ ಯೋಜನೆಯನ್ನು ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುಲು ಹಾಗೂ ಆಯಾ ತಾಲೂಕಿನ ಸಹಕಾರಿ ಸಂಘಗಳ ಖರೀದಿ ಕೇಂದ್ರಗಳಲ್ಲಿ ಖರೀದಿ ಪ್ರಕ್ರಿಯೆ ಸುಗಮವಾಗಿ ಜರುಗಿಸಲು ಸಂಬಂಧಿಸಿದ ಸ್ಥಳಿಯ ಸಂಸ್ಥೆ ಹಾಗೂ ಖರೀದಿ ಏಜೆನ್ಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಸಹಕಾರ ಸಂಘಗಳ ಉಪ ನಿಬಂಧಕರು, ಕೆ.ಎಸ್.ಸಿ.ಎಮ್.ಎಫ್ ಶಾಖಾ ವ್ಯವಸ್ಥಾಪಕರು, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಮಾರುಕಟ್ಟೆ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.
